Headlines

ಬೂತ್ ಮಟ್ಟದ ಸಂಘಟನೆಗೆ ಒತ್ತು – ಹೊಸನಗರ ಬಿಜೆಪಿ ಅಧ್ಯಕ್ಷರಿಗೆ ಬಿ ವೈ ವಿಜಯೇಂದ್ರ ಸೂಚನೆ

BJP Karnataka president B. Y. Vijayendra met newly elected Hosanagar BJP Mandal president Satish N and advised him to focus on strengthening party organization at the grassroots level. ಹೊಸನಗರ: ಹೊಸನಗರ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಎನ್ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು…

Read More

Thirthahalli | ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತಾರ್ಹ- ಆರಗ ಜ್ಞಾನೇಂದ್ರ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತರ್ಹ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಎಂಬುವವರು ಕಾಂಗ್ರೆಸ್ ಸಂಸ್ಕೃತಿಯನ್ನು  ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗುರುವಾರ ಪಟ್ಟಣದಲ್ಲಿ ಮಾತನಾಡಿ ಜಗದೀಶ್ ಶೆಟ್ಟರ್ ಹುಟ್ಟಿನಿಂದ ಬಿಜೆಪಿ ಹಾಗೂ ಆರ್ ಎಸ್ ಎಸ್ ನಲ್ಲಿ ಬೆಳೆದು ಬಂದವರು, ಎಲ್ಲಾ ಸ್ಥಾನಮಾನಗಳು ಗೌರವಗಳು ಅವರಿಗೆ…

Read More

ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಸದಸ್ಯರು ಕಾರಣ ಏನಂತೀರಾ ಒಮ್ಮೆ ಈ ಸ್ಟೋರಿ ನೋಡಿ.!!

ಆನಂದಪುರ : ಸರ್ಕಾರ ಇದೀಗ ಕಾನೂನಿನ ಅರಿವನ್ನು ತಿಳಿಸಲು ಗ್ರಾಮ ಪಂಚಾಯತ್ ಮಟ್ಟದಿಂದ ಕಾನೂನು ಅರಿವು ಕಾರ್ಯಕ್ರಮವನ್ನು  ನಡೆಸುತ್ತಿದೆ.ಮಹಿಳೆಯರಿಗೆ ,ಮಕ್ಕಳಿಗೆ ,ದುರ್ಬಲ ವರ್ಗದವರಿಗೆ ಕಾನೂನಿನ ಸಂಪೂರ್ಣ ಅರಿವಿರಬೇಕು ಎಂಬ ಉದ್ದೇಶದಿಂದ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಒಳಗೊಂಡು ವಕೀಲರ ತಂಡದೊಂದಿಗೆ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುತ್ತಿದೆ. ಆದರೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ದಿಂದ ಕೆಲ ಸದಸ್ಯರು ಅಸಮಾಧಾನವನ್ನು ಹೊರಹಾಕಿ…

Read More

ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ  ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ…

Read More

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು. ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.  ಗುತ್ತಿಗೆದಾರರು ಬಿಲ್ ಗೋಸ್ಕರ…

Read More

ರಿಪ್ಪನ್ ಪೇಟೆ : ಜಿಂಕೆಯ ಅಕ್ರಮ ಬೇಟೆ, ಮಾಲು ಸಹಿತ ಆರೋಪಿಗಳ ಬಂಧನ

ರಿಪ್ಪನ್ ಪೇಟೆ: ಸಮೀಪದ ಆಲುವಳ್ಳಿ ಗ್ರಾಮದ ಮನ್ನಾ ಜಂಗಲಿ ಎಂಬಲ್ಲಿ ಬುಧವಾರ ಸಂಜೆ ಬೇಟೆಗಾರರು ಅಕ್ರಮವಾಗಿ ಜಿಂಕೆಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಂಜೆ 4 ಗಂಟೆಯ ಸಮಯದಲ್ಲಿ ಆಲುವಳ್ಳಿ ಗ್ರಾಮದ ಮನ್ನಾಜಂಗಲಿ ಯ ಜೋಡು ಕೆರೆಯ ಆಸುಪಾಸಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಗಂಡು ಜಿಂಕೆಯನ್ನು ಮೂರು ಜನ ಮಾಂಸ ಭಕ್ಷಣೆಯ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಅರಿತ ಅರಣ್ಯ ಇಲಾಖೆಯ ಅಧಿಕಾರಿಗಳು ಎಸಿಎಫ್ ಮಾರ್ಗದರ್ಶನದಂತೆ ದಾಳಿ ನಡೆಸಿ ಜಿಂಕೆಯ ಕಳೆಬರ ಸಹಿತ ಹತ್ಯೆಯಲ್ಲಿ ಭಾಗಿಯಾದ ಸಾಗರ…

Read More

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ :  ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ  ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ನಡೆಸಿದ ಸಂಘಟಿತ ಹೋರಾಟದಿಂದ ಕಾಡಾನೆಗಳ ದಾಳಿಯಿಂದ ಅಲ್ಪ ಮುಕ್ತಿ ದೊರಕಿದಂತಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಮಾತನಾಡಿ ರಾಜ್ಯ ಬಿಜೆಪಿ ಉಪಾಧ್ಯಕ್ಷ  ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಕಾಡಾನೆ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More

ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು

ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ  ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್

Read More

ರಿಪ್ಪನ್‌ಪೇಟೆ ಸಂಜೀವಿನಿ ಒಕ್ಕೂಟದಿಂದ “ಮಾಸಿಕ ಸಂತೆ” : ಸ್ವಸಹಾಯ ಸಂಘದವರು ತಯಾರಿಸಿದ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ಮೇಳ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ನಡೆಯಿತು.ಪಟ್ಟಣದ ಗ್ರಾಪಂ ವ್ಯಾಪ್ತಿಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು.  ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

Read More