Headlines

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಕಿಮ್ಮನೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ | ಶಿವಮೊಗ್ಗದಲ್ಲೊಂದು 7 ಚಕ್ರದ ಹೈಟೆಕ್ ಆಟೋ -ಏನಿದರ ವಿಶೇಷ??? ಸುದ್ದಿ ನೋಡಿ

ತೀರ್ಥಹಳ್ಳಿ: ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುರುವಳ್ಳಿ ಬಂಡೆಯಲ್ಲಿ ಕಾರ್ಮಿಕರಿಗೆ ಭೂ ಮತ್ತು ಗಣಿ ಅಧಿಕಾರಿಗಳು ಹಿಂಸೆ ನೀಡುತ್ತಿರುವುದನ್ನು ಖಂಡಿಸಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಉಪವಾಸ ಸತ್ಯಾಗ್ರಹ ನೆಡೆಸುತ್ತಿದ್ದಾರೆ.   ಗೃಹ ಸಚಿವರು ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಬಂಡೆ ಕಾರ್ಮಿಕರಿಗೆ ಕಿರುಕುಳ ನೀಡುತ್ತಿರುವುದರಿಂದ ಶುಕ್ರವಾರ ಬೆಳಿಗ್ಗೆ 9 ಗಂಟೆಯೊಳಗಾಗಿ ಅವರ ಸಮಸ್ಯೆ ಬಗೆಹರಿಸಿದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಫೋಟೋದೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ…

Read More

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…

Read More

ರಿಪ್ಪನ್ ಪೇಟೆ : ಕೃಷಿ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿ ಸಾವು

 ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿಯಲ್ಲಿ  ಮನೆಯ ಸಮೀಪದಲ್ಲಿದ್ದ ಕೃಷಿ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ವಾಸು ಎಂಬುವರ ಪುತ್ರ  ಭರತ್ ರಾಜ್ (15) ಸಾವನ್ನಪ್ಪಿದ ದುರ್ಧೈವಿ. ಈತ ರಿಪ್ಪನ್ ಪೇಟೆಯ ಮೇರಿ ಮಾತ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು,ಈತನ ತಂದೆ ವಾಸು ಇದೇ ಶಾಲೆಯಲ್ಲಿ ಕಚೇರಿ ಸಹಾಯಕರಾಗಿ  ಕಾರ್ಯನಿರ್ವಹಿಸುತ್ತಿದ್ದರು. ಭರತ್ ರಾಜ್ ಶಾಲೆ ಮುಗಿಸಿಕೊಂಡು ಮನೆಯ ಬಳಿ ಆಟವಾಡಲು ತೆರಳಿದ್ದ ಸಮಯದಲ್ಲಿ ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದಾನೆ ಎನ್ನಲಾಗಿದೆ. ರಿಪ್ಪನ್ ಪೇಟೆ ಪೋಲೀಸ್ ಠಾಣಾ…

Read More

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ

ಭದ್ರಾವತಿ ಶಾಸಕರು ನಾಮಕಾವಾಸ್ತೆ, ಮಕ್ಕಳದ್ದೇ ದರ್ಬಾರು – ಜೆಡಿಎಸ್  ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪ ಶಿವಮೊಗ್ಗ  : ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ  ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು,  ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೇ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್‌ಎ ಮನೆಗೆ ಹೋಗಿ ಬನ್ನಿ…

Read More

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ :

ಸಾಗರ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜೋಗದ ಶಿರೂರು ಕೆರೆಯಲ್ಲಿ ಶುಕ್ರವಾರ ನಡೆದಿದೆ. ಗಾಯಿತ್ರಿ(43), ಮೃತ ದುರ್ಧೈವಿಯಾಗಿದ್ದಾರೆ.ಇವರು ಕೆ.ಇ.ಬಿ  ನೌಕರ ಶಂಕರ್ ಅವರ ಪತ್ನಿ ಎಂದು ತಿಳಿದು ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಹಿಳೆ ಕೆರೆಗೆ ಹಾರುತ್ತಿರುವುದನ್ನು ಹೋಂ ಗಾರ್ಡ್ ಒಬ್ಬರು ಗಮನಿಸಿದ್ದಾರೆ. ಈ ಮಾಹಿತಿಯನ್ನು ಜೋಗ ಠಾಣೆಯ ಪಿಎಸ್ಐ ಅವರಿಗೆ ನೀಡಿದ್ದು,ತಕ್ಷಣ  ಸ್ಥಳಕ್ಕಾಗಮಿಸಿದ ಸಬ್ ಇನ್ಸ್ ಪೆಕ್ಟರ್ ನಿರ್ಮಲಾ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತಿದ್ದಾರೆ. ಕಾರ್ಗಲ್ ಪೊಲೀಸ್…

Read More

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಜುನಾಥ್ ( 36 ) ಎಂದು ಗುರುತಿಸಲಾಗಿದೆ. ಮಂಜುನಾಥ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸಮಯದಲ್ಲಿ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅವರ ಮೆಕ್ಕೆಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು. ಕೃಷಿ ನಷ್ಟದಿಂದ ಆರ್ಥಿಕ…

Read More

ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಬಿಜೆಪಿ ಪಕ್ಷ ಸದೃಢವಾಗಿದ್ದು ಅಭಿವೃದ್ದಿ ಕಾರ್ಯದಲ್ಲಿ ಈ ಹಿಂದಿನ ಸರ್ಕಾರಗಳು ಮಾಡಲಾಗದಷ್ಟು ಅಭಿವೃದ್ದಿಯನ್ನು ಕೇವಲ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಮಾಡಿದೆ. ಎಲ್ಲ ಸಮುದಾಯದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ರಿಪ್ಪನ್ ಪೇಟೆ ಹೋಬಳಿಯ ಬೂತ್ ನ ಅಧ್ಯಕ್ಷರುಗಳಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡಿದ ಅವರು ಬಿಜೆಪಿಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ…

Read More

Shivamogga | ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಅಧಿಕೃತವಾಗಿ ಹೊರಬಿತ್ತು ಪ್ರಕಟಣೆ| ಯಾವೆಲ್ಲಾ ಹುದ್ದೆಗಳಿವೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲೆಯಿಂದ ವಿಮಾನಯಾನ ಸೇವೆ ಆರಂಭಸಿಲು ಸಜ್ಜಾಗಿರುವ ಸ್ಟಾರ್‌ ಏರ್‌ (STAR AIR) ಸಂಸ್ಥೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಜ್ಜಾಗಿದೆ. ನ.6ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿರುವ ರಾಯಲ್‌ ಆರ್ಕಿಡ್‌ ಹೊಟೇಲ್‌ನಲ್ಲಿ ಸಂದರ್ಶನ ನಡೆಸಲಿದೆ. ಈ ಕುರಿತು ಸ್ಟಾರ್‌ ಏರ್‌ ಸಂಸ್ಥೆ ತನ್ನ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಪ್ರಕಟಿಸಿದೆ. ಸ್ಟಾರ್​ ಏರ್​ ಸೋಶಿಯಲ್ ಮೀಡಿಯಾದಲ್ಲಿ ನೀಡಿದ ಜಾಹಿರಾತಿನ ಪ್ರಕಾರ, ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಕಮರ್ಷಿಯಲ್‌ ವಿಭಾಗದಲ್ಲಿ ಡ್ಯೂಟಿ ಸೂಪರ್‌ವೈಸರ್‌…

Read More
Exit mobile version