Headlines

ಹಣದಾಸೆಗೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಕೊಲೆ ಮಾಡಿ ಚಿನ್ನ ಕದ್ದೊಯ್ದಿದ್ದ ಆರೋಪಿಯ ಬಂಧನ|Arrested

ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್ 3 ರಂದು‌ ಭದ್ರಾವತಿಯ ಸುಣ್ಣದಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕೊಲೆ ಮಾಡಿ ಆರೋಪಿ ಬಂಗಾರದ ಓಲೆ ಮತ್ತು ಮೂಗುತಿಯೊಂದಿಗೆ ಪರಾರಿಯಾಗಿದ್ದನು. ಸದರಿ ಜಟಿಲ ಪ್ರಕರಣವನ್ನು ಕೈಗೆತ್ತಿಕೊಂಡ ಪೇಪರ್ ಟೌನ್ ಪೊಲೀಸರು ಕುಂದಾಪುರದ ಕರುಣಾಕರ ದೇವಾಡಿಗ (24) ಎಂಬಾತನನ್ನು ಬಂಧಿಸಿ 14000 ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ….

Read More

ಗೋಮಾಂಸ ಮಾರುತಿದ್ದ ಯುವಕನ ಮೇಲೆ ಬಜರಂಗದಳ ದಾಳಿ – ಹಲ್ಲೆ : ರಾಜಕೀಯ ಬಣ್ಣ ಪಡೆದುಕೊಂಡ ಪ್ರಕರಣ|assault

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಂಚಿ ಬಾಗಿಲಿನಲ್ಲಿ ವ್ಯಕ್ತಿಯೊಬ್ಬ ದನದ ಮಾಂಸವನ್ನು ಮಾರಾಟ ಮಾಡಲು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗ ದಳದ ಯುವಕರು ಆತನಿಗೆ ಅಡ್ಡಗಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಮೂಮಿನ್ ಮೊಹಲ್ಲಾ ವಾಸಿ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ (30) ದನದ ಮಾಂಸದ ವ್ಯಾಪಾರ ಮಾಡುವ ಯುವಕ. ಈತ ಶುಕ್ರವಾರ ಬೆಳಗ್ಗೆ 10 ರಿಂದ 12 ಕೆಜಿಯಷ್ಟು ದನದ ಮಾಂಸದ ಪ್ಯಾಕೆಟ್‌ಗಳನ್ನು ಮಾಡಿಕೊಂಡು ಮನೆ ಮನೆಗೆ ಕೊಡಲು ತನ್ನ ಬೈಕಿನಲ್ಲಿ…

Read More

ತೀರ್ಥಹಳ್ಳಿ : ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿ ಜೀವ ಬೆದರಿಕೆ

ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ವ್ಯಕ್ತಿಯನ್ನ ಕಿಡ್ನಾಪ್ ಮಾಡಿ ನಾಲ್ವರು ಆರೋಪಿಗಳು ಆಯುಧದಿಂದ ಥಳಿಸಿರುವ ಘಟನೆ ಪಟ್ಟಣದ ಬಾಳೆಬೈಲು ಸಮೀಪದ ಜಟ್ಟಟ್ ನಗರದಲ್ಲಿ ನಡೆದಿದೆ. ಪಟ್ಟಣದ ಇಂದಿರಾ ನಗರದ ನಿವಾಸಿ ಮುಜೀಬ್ (35) ಎಂಬುವರ ಮೇಲೆ ಹಲ್ಲೆ ನಡೆದಿದ್ದು ಹಲ್ಲೆ ನಡೆಸಿರುವುದು ರಾಮನ್, ರಹೀಮ್, ಶಫಿ ಹಾಗೂ ಸುಹೇಲ್ ಎಂದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೆ. 23 ರಾತ್ರಿ ಮುಜೀಬ್ ಮೇಲೆ ಹಲ್ಲೆ ನೆಡೆಸಿ ಕಿಡ್ನಾಪ್ ಮಾಡಿದ್ದರು. ಆದರೆ ತಪ್ಪಿಸಿಕೊಂಡು ಬಂದಿದ್ದ ಮುಜೀಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ರಿಪ್ಪನ್ ಪೇಟೆ : ದಯಾಮರಣದ ಮೊರೆ ಹೋದ ಎಂಬತ್ತರ ವೃದ್ದೆ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳು ಎಂಬಲ್ಲಿ ವಯೋವೃದ್ಧೆಯೋರ್ವರು ಜೀವನ ನಡೆಸಲು ಹರಸಾಹಸ ಪಡುತ್ತಿದ್ದು, ಜೀವನ ನಡೆಸಲು ಆಸರೆಯಾಗಬೇಕಿದ್ದ ಪತಿಯು ಇಹಲೋಕ ತ್ಯಜಿಸಿದ್ದಾರೆ. ಒಬ್ಬಂಟಿಯಾಗಿರುವ ಭಾಗ್ಯಲಕ್ಷ್ಮಿ ಎಂಬ ವೃದ್ದೆಯು ಸುಮಾರು 80 ವರ್ಷದವರಾಗಿದ್ದಾರೆ.ಹಳೆಯ ಜೋರಾಗಿ ಮಳೆ ಬಂದರೆ ಬಿದ್ದು ಹೋಗುವಂತಹ ಮನೆಯಲ್ಲಿ ವಾಸಿಸುತ್ತಿದ್ದಾರೆ.ಯಾರೂ ನೆರವಿಗೆ ಬಾರದೇ ಇರುವ ಕಾರಣ ದಯಮರಣಕ್ಕೆ ಸರ್ಕಾರದ ಬಳಿ ಮೊರೆಹೋಗುವತ್ತ ಚಿಂತಿಸಿದ್ದಾರೆ. ತಮ್ಮ ಪತಿಯು ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದು,ಕೆಲವು  ಕೌಟುಂಬಿಕ ಸಮಸ್ಯೆಯಿಂದ ಬರಬೇಕಾಗಿದ್ದ ಸರ್ಕಾರದ ಪಿಂಚಣಿ ಹಣ ಈ ವಯೋವೃದ್ದೆಯ ಕೈ ಸೇರುತ್ತಿಲ್ಲ.ಈ ವೃದ್ದೆಯು…

Read More

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.  ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಪಟ್ಟಣದ ನಾಲ್ಕು ರಸ್ತೆಯ…

Read More

ಮುಖ್ಯಮಂತ್ರಿಗಳಿಂದ ಸಾಗರ ತಾಲ್ಲೂಕಿನಲ್ಲಿ 459.19 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಸಾಗರ:ತಾಲ್ಲೂಕಿನ ಹಲವು ಕಾಮಗಾರಿಗಳಿಗೆ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ರವರು ಚಾಲನೆ ನೀಡಿದರು.   ಅವರು ಇಲ್ಲಿನ ಗಾಂಧಿಮಂದಿರದ ಹೊರಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ಚಾಲನೆ ನೀಡಿದರು.  ಇರುವಕ್ಕಿ ಕೃಷಿ ವಿಶ್ವ ವಿದ್ಯಾಲಯ 155-00 ಕೋಟಿ ರೂಪಾಯಿಗಳು, ಜೋಗ ಅಭಿವೃದ್ಧಿ ಕಾಮಗಾರಿಗಳಿಗೆ 165-00ಕೋಟಿ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206 (69) ತುಮಕೂರು ಹೊನ್ನಾವರ ರಸ್ತೆಯ ಕಿ.ಮೀ. 278 ರಿಂದ 286.40ರವರೆಗೆ ಸಾಗರ ನಗರ ವ್ಯಾಪ್ತಿಯಲ್ಲಿ…

Read More

ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ಏನೆಲ್ಲಾ ಇರಲಿದೆ ಗೊತ್ತಾ…??? ಈ ಸುದ್ದಿ ನೋಡಿ

ಸಕ್ರೆಬೈಲು ಆನೆ ಬಿಡಾರದ ತುಂಗಾ ಹಿನ್ನೀರಿನಲ್ಲಿ ಜಂಗಲ್ ರೇಸಾರ್ಟ್ ವತಿಯಿಂದ ಇಂದು ಬೋಟ್ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಸಂಸದ ಬಿ.ವೈ.ರಾಘವೇಂದ್ರ ರವರು ನೂತನ ಬೋಟ್ ಗೆ ಚಾಲನೆ ನೀಡಿದರು. ನಂತರ ಸಂಸದರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಂಗಲ್ ರೇಸಾರ್ಟ್ ನ ನಿರ್ದೆಶಕ ರಾಜೇಶ್ ಕಾಮತ್ ಸೇರಿದಂತೆ ಇತರರು ಬೋಟ್ ನಲ್ಲಿ ವಿಹರಿಸಿದರು. ನಂತರ ಮಾತನಾಡಿದ ಸಂಸದರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಬೋಟಿಂಗ್ ವ್ಯವಸ್ಥೆ ಉಪಯುಕ್ತವಾಗಲಿದೆ ಎಂದರು.  ಸಕ್ರೆಬೈಲು…

Read More

Hosanagara | ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ, ನಗದು ಸಹಿತ 8 ಮಂದಿ ವಶಕ್ಕೆ !!

ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ ಸಹಿತ ನಗದು ವಶಕ್ಕೆ ! ಹೊಸನಗರ: ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ ವೇಳೆಗೆ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ನೀರೇರಿ ಗ್ರಾಮದ ಅಕೇಶಿಯಾ ಪ್ಲಾಂಟೇಷನ್‌ನಲ್ಲಿ ಅಕ್ರಮವಾಗಿ ಕೋಳಿ ಹುಂಜಗಳನ್ನು ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಪೊಲೀಸರು 11,170 ರೂ. ಹಣವನ್ನು ವಶಕ್ಕೆ ಪಡೆದು, 08 ಮಂದಿ ಆರೋಪಿಗಳು ಸಹಿತ ನಾಲ್ಕು ಕೋಳಿ ಹುಂಜ, ಎರಡು ಕತ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆ ಸಂಬಂಧ ಹೊಸನಗರ…

Read More

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ ಬೆಂಗಳೂರು, ನವೆಂಬರ್ 16: ರಾಜ್ಯ ಕಾಂಗ್ರೆಸ್ ಪಾಳೆಯಲ್ಲಿ ಬಹುಕಾಲದಿಂದ ಕಾದಿದ್ದ ಭಾರೀ ಬದಲಾವಣೆಯ ಚರ್ಚೆ ಈಗ ವೇಗ ಪಡೆದುಕೊಂಡಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಿದ್ದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗಳನ್ನು ಭೇಟಿಯಾದುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸಾಗರ…

Read More