Headlines

ಗರ್ತಿಕೆರೆ ಬಳಿ ಭೀಕರ ಅಪಘಾತ – ಮೀನು ವ್ಯಾಪಾರಿ ಸ್ಥಳದಲ್ಲೇ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಕಾಲೇಜು ಸಮೀಪದಲ್ಲಿ ಬೆಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ತಿಕೆರೆ ನಿವಾಸಿ ಮೀನು ವ್ಯಾಪಾರಿ ಕಬೀರ್ ಸಾಬ್ (72) ಎಂಬುವವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಎಕ್ಸ್ಎಲ್ ಸೂಪರ್ ಬೈಕ್ ನಲ್ಲಿ ಹೊರಟು ನಿಂತಿದ್ದ ಕಬೀರ್ ಸಾಬ್ ಎಂಬುವವರಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದಲ್ಲಿ ಬೊಲೆರೋ ವಾಹನ ಸಹ ಪಲ್ಟಿಯಾಗಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ….

Read More

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ , ಚೆನ್ನಬಸಪ್ಪ ,ಯೋಗೀಶ್ ನಾಮಪತ್ರ ಸಲ್ಲಿಕೆ – ತ್ರಿಕೋನ ಸ್ಪರ್ಧೆಗೆ ಸಜ್ಜಾದ ಕ್ಷೇತ್ರ|election

 ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷದ ಘಟಾನುಗಟಿಗಳು ಇಂದು ನಾಮಪತ್ರ ಸಲ್ಲಿಸುವ ಮೂಲಕ ಚುನಾವಣ ಕಣ ರಂಗೇರಿದೆ.  ಕಾಂಗ್ರೆಸ್‌ನಿಂದ ಹೆಚ್.ಸಿ. ಯೋಗೀಶ್, ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಹಾಗೂ ಜೆಡಿಎಸ್‌ನಿಂದ ಆಯನೂರು ಮಂಜುನಾಥ್ ಇಂದು ವಿಧಾನಸಭಾ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದರು. ಇಂದು ಮೊದಲು ಬಿಜೆಪಿಯಿಂದ ಜೆಡಿಎಸ್ ಪಕ್ಷ ಸೇರಿ ಬಿ ಫಾರಂ ಪಡೆಯಲು ಯಶಸ್ವಿಯಾದ ಆಯನೂರು ಮಂಜುನಾಥ್ ಪ್ರಥಮ ಬಾರಿಗೆ ಜಿಲ್ಲಾ ಜೆಡಿಎಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ನಂತರ ಜಿಲ್ಲಾ ಜೆಡಿಎಸ್…

Read More

ಭಾವೈಕ್ಯತೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಜೋಸೆಫ್ ಅರಮಚ್ಚಾಡತ್ | ರಿಪ್ಪನ್‌ಪೇಟೆ ನವೀಕೃತ ಗುಡ್‌ಶಫರ್ಡ್ ಚರ್ಚ್ ಲೋಕಾರ್ಪಣೆ|Ripponpet

ರಿಪ್ಪನ್ ಪೇಟೆ: ಪ್ರತಿಯೊಂದು ಧರ್ಮದ ಮೂಲ ಸಾರ ಮನುಕುಲದ ಒಳಿತು. ಜಗತ್ತಿಗೆ ಶಾಂತಿ ಸಂದೇಶವನ್ನು ನೀಡಿದ ಪ್ರಭು ಯೇಸುಕ್ರಿಸ್ತರು ಕರುಣೆ ಪ್ರೀತಿ  ಮತ್ತು ದೇವರ ಮೇಲಿನ ನಂಬಿಕೆಯಿಂದ ಮಾತ್ರ ನೆಮ್ಮದಿಯ ಜೀವನವನ್ನು ಸಾಗಿಸಬಹುದು ಎಂದು ಶುಭ ಸಂದೇಶವನ್ನು ನೀಡಿದ್ದಾರೆ.ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಬೆರೆತು ಎಲ್ಲರೂ ಸಹೋದರ ಸಹೋದರಿಯಂತೆ  ಇದ್ದಾಗ ಮಾತ್ರ ನೆಮ್ಮದಿಯ ಸಮಾಜಕ್ಕೆ ದಾರಿದೀಪವಾಗಲಿದೆ ಎಂದು ಭದ್ರಾವತಿ ಧರ್ಮ ಕ್ಷೇತ್ರದ ಧರ್ಮಧ್ಯಕ್ಷ ಜೋಸೆಫ್ ಅರಮಚ್ಚಾಡತ್  ಹೇಳಿದರು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ನವೀಕರಣಗೊಂಡ  ಗುಡ್‌ಶಫರ್ಡ್…

Read More

ರಿಪ್ಪನ್‌ಪೇಟೆ ಸಮೀಪದ ಅಬ್ಬಿಗುಂಡಿಯಲ್ಲಿ ಕಾಲುಜಾರಿ ಹೊಳೆಯಲ್ಲಿ ಬಿದ್ದು ಪಿಯುಸಿ ವಿದ್ಯಾರ್ಥಿ ಸಾವು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಶಾಂತಪುರ ಬಳಿ ಅಬ್ಬಿಗುಂಡಿ ಎಂಬ ಹೊಳೆಯಲ್ಲಿ ಕಾಲು ಜಾರಿ ನೀರಿನ ಸುಳಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದ ಸಿದ್ಧಗಿರಿ ನಿವಾಸಿ ಕೋರೆ ಮಂಜಣ್ಣ ಇವರ ಪುತ್ರ ಕಿರಣ್(17)  ಮೃತಪಟ್ಟ ದುರ್ದೈವಿಯಾಗಿದ್ದಾನೆ .ಈತನು ಹೊಸನಗರ ಸರ್ಕಾರಿ ಕಾಲೇಜಿನಲ್ಲಿ  ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಇಂದು ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ಸ್ನೇಹಿತ ಯಶವಂತ್ ಎಂಬಾತನೊಂದಿಗೆ ಶಾಂತಪುರ ಸಮೀಪದ ಅಬ್ಬಿಗುಂಡಿ ಹೊಳೆಯ ಸಮೀಪ ಹೋದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ….

Read More

ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಮಹಿಳೆ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ   ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ…

Read More

ಸಮುದಾಯ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ರಿಪ್ಪನ್ ಪೇಟೆಯಲ್ಲಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ:

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಇಂದು ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ ನಡೆಸಲಾಯಿತು. ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ವಿನಾಯಕ ವೃತ್ತದವರೆಗೂ ಭಾರಿ ಮಳೆಯ ನಡುವೆ ಪಾದಯಾತ್ರೆ ನಡೆಸಿ ನಂತರ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ನಂತರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ಪ್ರಾಥಮಿಕ ಆರೋಗ್ಯ…

Read More

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಆಂಧ್ರಪ್ರದೇಶದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ ಆಂಧ್ರಪ್ರದೇಶದ ಖಾಕಿನಾಡ ನಗರದಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಹಮ್ಮದ್ ಝಿಯಾದ್ ಎಂ , ಆದರ್ಶ್…

Read More

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ ಕರ್ನಾಟಕ ರಾಜ್ಯ KSGNPSEA ಸಂಘದ ನಿರ್ದೇಶನದಂತೆ ಸಂಘದ ನಡೆ ಜನಪ್ರತಿನಿಧಿಗಳ ಕಡೆ ಅಭಿಯಾನದಡಿಯಲ್ಲಿ ಇಂದು ರಿಪ್ಪನ್‌ಪೇಟೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲ ಕೃಷ್ಣರವರನ್ನು ಭೇಟಿ ಮಾಡಿ ಮುಂಬರುವ  ಸಚಿವ ಸಂಪುಟ ಸಭೆಯಲ್ಲಿ NPS ರದ್ದು ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವಂತೆ ಹೊಸನಗರ ತಾಲೂಕು ಎನ್ಪಿಎಸ್ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.  ಮನವಿ ಸ್ವೀಕರಿಸಿದ ಶಾಸಕರು…

Read More

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್:

ಶಿವಮೊಗ್ಗ:  ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಕೈ ಹಿಡಿಯವ ಮುಹೂರ್ತ ಫಿಕ್ಸ್ ಆಗಿದೆ.   ಇದೇ ತಿಂಗಳ 30 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜಿವಾಲಾ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ.ಮಧುಬಂಗಾರಪ್ಪನವರೊಂದಿಗೆ ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.   ಶಿವಮೊಗ್ಗದಲ್ಲಿ ಬೃಹತ್‌ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗುವ…

Read More