ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ
ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ…