Headlines

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಸಾಗರ :  ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…

Read More

Thirthahalli | ಕಾಡಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !!!

ನೇಣಿಗೆ ಶರಣಾದ 9ನೇ ತರಗತಿ ವಿದ್ಯಾರ್ಥಿನಿ ! ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ  ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸೋಮವಾರ ಬಸವಾನಿ ಸಮೀಪದ ಕಾಡೊಂದರಲ್ಲಿ ಪತ್ತೆಯಾಗಿದೆ. ತಾಲೂಕಿನ ಬಸವಾನಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ ಕಳೆದ 15 ದಿನಗಳಿಂದ ಹೋಗಿರಲಿಲ್ಲ. ಶಾಲೆಗೆ ಬರುವಂತೆ ತಿಳಿಸಲಾಗಿತ್ತು. ಮನೆಯಲ್ಲಿ ಕಾರಣ ಕೇಳಿದ್ದಕ್ಕೆ ಸೋಮವಾರ ಬಸವಾನಿ ಬಳಿಯ ಪ್ಲಾಂಟೇಷನ್ ನಲ್ಲಿ  ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿ ಪೊಲೀಸ್ ಠಾಣಾ…

Read More

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ‌ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More

ಸಾಗರದ ಹೆಲಿಪ್ಯಾಡ್ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಸಾಗರದ ಹೆಲಿಪ್ಯಾಡ್ ನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಬೈಕ್ ನ್ನು ಹೆಲಿಪ್ಯಾಡ್ ನಲ್ಲಿ ಕೆಳಗೆ ಬೀಳಿಸಿ ಅಲ್ಲೆ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ತಾಳಗುಪ್ಪ ಸಮೀಪದ ಶಿರೂರು ಹಳ್ಳಿಯ ನಿವಾಸಿ ಅಣ್ಣಪ್ಪ  ( 33 ) ವರ್ಷ ಎಂದು ಗುರುತು ಪತ್ತೆಯಾಗಿದ್ದು ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read More

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ.

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ. ಹೊಸನಗರ: ದೇಶದ ಸಾಂಸ್ಕೃತಿಕ ಪರಂಪರೆಯ ಹಿರಿಯ ಕಲಾ ಪ್ರಕಾರಗಳಲ್ಲಿ ಒಂದಾದ ಯಕ್ಷಗಾನ ಕಲೆ ಆರಾಧಕರಾದ ಯಕ್ಷ ಕಲಾವಿದರಿಗೆ ರಾಜಾಶ್ರಯ ಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಸಾಧಕ ಪ್ರತಿಭಾವಂತ ಹಿರಿಯ ಕಲಾವಿದರನ್ನು ಗೌರವಿಸುವ ಕೆಲಸ ಮಾಡಬೇಕಾಗಿದೆ ಎಂದು ಹಿರಿಯ ಕಲಾವಿದ ಪುರಂದರ ಹೆಗಡೆ ಹೇಳಿದರು. ತಾಲ್ಲೂಕಿನ ಕಾರ್ಗಿಲ್ ಸಿದ್ಧಿವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ನಡೆದ ಹೆರಂಜಾಲು ಷಷ್ಠಬ್ಬಿ ಯಕ್ಷ ಕಾರ್ಯಕ್ರಮದಲ್ಲಿ ಕೂಡ ಮಾಡುವ ಹೆರಂಜಾಲು ಗೌರವ…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹಾಲಪ್ಪ ಹಣ ಪಡೆದಿದ್ದಾರೆ ಎಂದು ಧರ್ಮಸ್ಥಳದ ಸನ್ನಿಧಿಯಲ್ಲಿ ಪ್ರಮಾಣ ಮಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ !!!

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಹಣ ಪಡೆದಿರುವುದು ಖಂಡಿತವಾಗಿಯೂ ನಿಜ ಎಂದು ಆಣೆ ಪ್ರಮಾಣ ಮಾಡಿದರು. ಲಾರಿಯವರು ನನಗೆ ಕರೆ ಮಾಡಿ ಹಣವನ್ನು ನೀಡಿದ್ದೇವೆಂದು ಹೇಳಿದ್ದಾರೆ.ಇವರು 300  ಮರಳು ಲಾರಿ ಮಾಲೀಕರಿಂದ ಹಣ ಪಡೆದಿದ್ದಾರೆ. ಮರಳು ನೀತಿಯನ್ನು ಸಡಿಲೀಕರಣ ಮಾಡುವುದಕ್ಕೆ ನಿಮಗೆ ಏನು ರೋಗ ಎಂದು ಹರಿಹಾಯ್ದರು. ಕೋರೆ ಮಾಲೀಕರ ಹತ್ತಿರವೂ ಕೂಡ ಮಾಮೂಲಿ ಪಡೆಯುತ್ತಿದ್ದು ನನಗೆ ವರ್ಷಕ್ಕೆ ಇಂತಿಷ್ಟು ಹಣವನ್ನು…

Read More

ನಾಳೆ ನೂತನ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಮೊದಲ ಪ್ರಗತಿ ಪರಿಶೀಲನಾ ಸಭೆ|Beluru

ಸಾಗರ-ಹೊಸನಗರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ನಾಳೆ(ಗುರುವಾರ) ತಾಲ್ಲೂಕಿನ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಾಗರ ತಾಲೂಕು ಪಂಚಾಯತ್ ಕಾರ್ಯಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮೊದಲ ಪ್ರಗತಿ ಪರಿಶೀಲನಾ…

Read More

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!??

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!?? ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ. ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ…

Read More

ರಿಪ್ಪನ್ ಪೇಟೆ ಹೊಸನಗರ ರಸ್ತೆ ನಿವಾಸಿ ಶಫ಼ಿ ಅಹಮದ್ ಬ್ಯಾರಿ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ದಿವಂಗತ ಅಹಮ್ಮದ್ ಬ್ಯಾರಿಯವರ ತೃತೀಯ ಪುತ್ರ ಶಫಿ ಅಹಮದ್ ಬ್ಯಾರಿ (48) ಇಂದು ಮಧ್ಯಾಹ್ನ ಚೆನ್ನೈ ನಗರದಲ್ಲಿ ನಿಧನ ಹೊಂದಿದ್ದಾರೆ. ಅಲ್ಪಕಾಲದ ಖಾಯಿಲೆಯಿಂದ ಬಳಲುತಿದ್ದ ಶಫ಼ಿ ಅಹಮದ್ ಬ್ಯಾರಿ ರವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಂತರ ಇತ್ತಿಚೆಗೆ ಹೆಚ್ಚಿನ ಚಿಕಿತ್ಸೆಗೆ ಚೆನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು….

Read More