‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್ ತನಿಖೆ
ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ…