ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More

ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ

ರಿಪ್ಪನ್‌ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…

Read More

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹೇಳಿದರು. ರಿಪ್ಪನ್‌ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ  “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…

Read More

ಬಸವಾಪುರ : ರಸ್ತೆ ಅಗೆದು ಕೆರೆಯ ಕೋಡಿ ನೀರನ್ನು ಹರಿಯಬಿಟ್ಟ ಪ್ರಭಾವಿ ವ್ಯಕ್ತಿಗಳು,ಜೆಸಿಬಿ ತಡೆದು ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾವಪುರ ಗ್ರಾಮದ ಸರ್ವೆ ನಂ 26 ರ  ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ಖಾಸಗಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡುವ ಉದ್ದೇಶದಿಂದ ಸರ್ಕಾರಿ ರಸ್ತೆಯ ಮೇಲೆ ಜೆಸಿಬಿ ಮೂಲಕ ಕಾಲುವೆ ತೋಡಿ ನೀರನ್ನು ಹರಿಯಬಿಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.  ಬಸಾವಪುರ ಗ್ರಾಮದ ಗುಂಡೂರು ಮೂಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆಯ ಮೇಲೆ ಖಾಸಗಿ ಪ್ರಭಾವಿ ವ್ಯಕ್ತಿಗಳು ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ರಸ್ತೆಯ ಮೇಲೆ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (09/02/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (09/02/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/02/25 ರಂದು ಬೆಳಿಗ್ಗೆ 08-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 08-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 7ನೇ ಬಾರಿ ಶೇಕಡಾ100% ಫಲಿತಾಂಶ

ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 7 ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 32 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೋಷಕರಿಗೂ ಹಾಗೂ ಶಿಕ್ಷಣ ಸಂಸ್ಥೆಯವರಿಗೆ ಹೆಮ್ಮೆಯನ್ನು ತಂದಿರುತ್ತಾರೆ….

Read More

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR)

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR) ರಿಪ್ಪನ್‌ಪೇಟೆ : ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆ ಪತ್ರಕರ್ತರ ಬಳಗ , ಪೊಲೀಸ್ ಇಲಾಖೆ ,ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಜುಲೈ 06 ರ ಶನಿವಾರ ವಾಹನ ಪೂರ್ವ ಚಾಲನ ಪರವಾನಗಿ(LLR) ಶಿಬಿರವನ್ನು ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ವಾಹನ ಪೂರ್ವ ಚಾಲನ ಪರವಾನಗಿ…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

ಶಿಕಾರಿಪುರ : ಮೂರು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ :ಆರೋಪಿ ಪದವಿ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಶಿಕಾರಿಪುರ : ನಗರದ ಬಡಾವಣೆಯೊಂದರಲ್ಲಿ ಕಾಮುಕನ ಅಟ್ಟಹಾಸಕ್ಕೆ ಏನು ಅರಿಯದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪೈಶಾಚಿಕ ಕೃತ್ಯ ಎಸಗಿದ ಘಟನೆ ನಗರದಲ್ಲಿ ನಡೆದಿದೆ. ಮೂರು ವರ್ಷದ ಮಗುವಿನ ಮೇಲೆ ಪಕ್ಕದ ಮನೆಯಲ್ಲಿ ಪದವಿ ಓದುತ್ತಿರುವ ಯುವಕನೇ ಅತ್ಯಚಾರ ಮಾಡಿರುವ ಘಟನೆ ಇಂದು ಶಿಕಾರಿಪುರದಲ್ಲಿ ನಡೆದಿದೆ.ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿಕಾರಿಪುರ ತಾಲ್ಲೂಕಿನ ವಾಸಿ ಮೂರು ವರ್ಷದ ಅಪ್ರಾಪ್ತ ಬಾಲಕಿಯು ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಾ ಪಕ್ಕದ ಮನೆಗೆ ಹೋಗಿದ್ದಾಗ, ಆ ಮನೆಯ ಪದವಿ ಓದುತ್ತಿರುವ…

Read More