ರೌಡಿಸಂ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಇನ್ನಷ್ಟು ಬಲ:ಸೈಬರ್ ಕ್ರೈಂ ತಡೆಗೆ ಪ್ರತಿ ಜಿಲ್ಲೆಗೂ ಸಾಧನ ಒದಗಿಸಲಾಗುವುದು : ಆರಗ ಜ್ಞಾನೇಂದ್ರ
ಶಿವಮೊಗ್ಗ: ರಾಜ್ಯದಲ್ಲಿ ರೌಡಿಸಂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೌಡಿಗಳಿಗೆ ಏನೇನು ಭಯ ಹುಟ್ಟಿಸಬೇಕೋ ಆ ಎಲ್ಲಾ ಕೆಲಸಗಳು ಮಾಡಲಾಗುತ್ತಿದೆ.ರೌಡಿಸಂ, ಮಾದಕವಸ್ತುಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವನ್ನ ಮಟ್ಟಹಾಕಬೇಕಿದೆ. ನೊಂದಿತರು ಆಕಾಶ ನೋಡದಂತೆ ಅಸಾಹಯಕರನ್ನಾಗಿ ಮಾಡಬಾರದು. ಹಾಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದರು. ಕ್ರೈಂ ಟ್ರಯಲ್ ಹಾಗೂ ಕನ್ವಿಕ್ಷನ್…