ಮಹಾಮಳೆಗೆ ಆನಂದಪುರದಲ್ಲಿ ಮನೆ ಗೋಡೆ ಕುಸಿತ : ಅದೃಷ್ಟಾವಶತ್ ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರು.

ಮಹಾಮಳೆ ಇದೀಗ ಜನರ ಜನಜೀವನವನ್ನು ಅಸ್ತವ್ಯಸ್ಥಗೊಳಿಸುತ್ತಿದೆ ಅತ್ತ ಕಡೆ ರೈತ ಕೂಡ ಮಹಾಮಳೆಗೆ ಕಂಗಾಲಾಗಿ ದೇವರ ಮೊರೆ ಹೋಗುತ್ತಿದ್ದಾರೆ.ಮಹಾಮಳೆಯ ರೌದ್ರನರ್ತನ ಅಷ್ಟಿಷ್ಟಲ್ಲ ಮಳೆಯಿಂದ ಇದೀಗ ಅನಾಹುತಗಳೇ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಶೋಕ ರಸ್ತೆಯ ನಿವಾಸಿ ರಾಮಣ್ಣ ರವರ ಮನೆಯ ಗೋಡೆ ಕುಸಿದಿದ್ದು ಮನೆಯ  ಹೊರಮುಖದಲ್ಲಿ ಗೋಡೆ ಕುಸಿದಿದ್ದು ಕುಟುಂಬಸ್ಥರಿಗೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಆರ್ ಶಂಕರ್ ಆಗಮಿಸಿದ್ದು ಸ್ಥಳ ಪರಿಶೀಲಿಸಿ ವರದಿ ಪಡೆದಿರುತ್ತಾರೆ. ವರದಿ : ಪವನ್…

Read More

ರಿಪ್ಪನ್‌ಪೇಟೆಯಲ್ಲಿ ನಾಳೆ(22-09-2023) ಶುಭಾರಂಭಗೊಳ್ಳಲಿದೆ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್

ರಿಪ್ಪನ್‌ಪೇಟೆ : ಸೆಪ್ಟೆಂಬರ್ 22 ರ ಶುಕ್ರವಾರ ಪಟ್ಟಣದ ವಿಶ್ವಮಾನವ ಸಭಾಂಗಣದ ಮುಂಭಾಗದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ಶುಭಾರಂಭಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವರಾದ ಹರತಾಳು ಹಾಲಪ್ಪ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ. ಅತ್ಯಾಧುನಿಕವಾಗಿ ಪ್ರಾರಂಭಗೊಳ್ಳಲಿರುವ ನೂತನ ಫ್ಯಾಕ್ಟರಿಯಲ್ಲಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು SQ ರಾಡ್ಸ್ ,ಆಂಗಲ್ಸ್ ಚಾನಲ್ಸ್ ,…

Read More

ರಿಪ್ಪನ್ ಪೇಟೆ ಜಿಪಂ,ತಾಪಂ ಮೀಸಲಾತಿ ಪ್ರಕಟ: ಟವೆಲ್ ಹಾಕಲು ಸಿದ್ದರಾದ ಆಕಾಂಕ್ಷಿಗಳು

ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿಯ ಚುನಾವಣಾ ಮೀಸಲಾತಿ ಪ್ರಕಟಗೊಂಡಿದ್ದು ಜಿಲ್ಲಾ ಪಂಚಾಯತ್ ಗೆ ಸಾಮಾನ್ಯ ಹಾಗೂ ತಾಲೂಕ್ ಪಂಚಾಯತ್ ಗೆ ಸಾಮಾನ್ಯ ಮಹಿಳೆ ಕೆಟಗೆರಿ ಬಂದಿದ್ದು ಚುನಾವಣ ಕಣ ರಂಗೇರಿದೆ. ರಿಪ್ಪನ್ ಪೇಟೆ ಜಿಪಂ ಮತ್ತು ತಾಪಂ ಸ್ಥಾನಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳಲ್ಲಿ ಪ್ರಬಲ ಪೈಪೋಟಿ ಏರ್ಪಟ್ಟಿದ್ದು ಕೊನೆಯಲ್ಲಿ ಯಾರಿಗೇ ಟಿಕೇಟ್ ಖಾತ್ರಿಯಾಗುತ್ತದೆ ಎಂದು ಕಾದು ನೋಡಬೇಕಾಗಿದೆ. ಬಿಜೆಪಿ ಯಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ ಅದರಲ್ಲಿ ಮುಂಚೂಣಿಯಲ್ಲಿ ಕಳೆದ ಬಾರಿ…

Read More

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More

ಶಿವಮೊಗ್ಗ ಮೂಲದ ಮಹಿಳೆ ನಾಪತ್ತೆ|missing

ಶಿವಮೊಗ್ಗ ಮೂಲದ ಕೆ.ಶುಭಾ ಎಂಬವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.   ಈಕೆ ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಲಿಂದ ತಮ್ಮ ಗಂಡನ ಮನೆ ಇರುವ ಉಡುಪಿ ಜಿಲ್ಲೆಯ ಗೋಪಾಲಪುರಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಆ ಬಳಿಕ ನಾಪತ್ತೆಯಾಗಿದ್ದಾರೆ.  ಇವರ ಗುರುತು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತ ನಾಡುತ್ತಾರೆ.  ಇವರ ಬಗ್ಗೆ ಮಾಹಿತಿ…

Read More

Accident | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ.  ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…

Read More

ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More

ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More