ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…

Read More

ಆಸ್ತಿ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ :

ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. >ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ  ಗ್ರಾಮದವರಾದ ರಾಮನಾಯ್ಕ,…

Read More

ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಪ್ರತಿಭಟನೆ :ಗ್ರಾಪಂ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾದರೂ ಏಕೆ ?? ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪನವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಗ್ರಾಮ ಪಂಚಾಯತ್ ಆವರಣದಲ್ಲಿ  ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಂದ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದ ಮಹಾಲಕ್ಷ್ಮಿ  ಅಣ್ಣಪ್ಪರವರು ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ರವರ ಸಮ್ಮುಖದಲ್ಲಿ  ಬಿಜೆಪಿಗೆ ಸೇರಿದ್ದರು. ಈ ಬಗ್ಗೆ ಆಕ್ರೋಶಗೊಂಡಿರುವ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಮಹಾಲಕ್ಷ್ಮಿ  ಅಣ್ಣಪ್ಪರವರು ಈ ಕೂಡಲೇ ಉಪಾಧ್ಯಕ್ಷ…

Read More

ಶಿವಮೊಗ್ಗ: ಒತ್ತುವರಿ ಕೆರೆಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ಖಡಕ್ ಆದೇಶ:

ಶಿವಮೊಗ್ಗ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More

Ripponpete | ಅಡಿಕೆ ಅಡಮಾನ ಸಾಲ ಯೋಜನೆಯನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು – ಆರ್ ಎಂ ಮಂಜುನಾಥ್ ಗೌಡ

Ripponpete | ಅಡಿಕೆ ಅಡಮಾನ ಸಾಲ ಯೋಜನೆಯನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಅಡಿಕೆ ಅಡಮಾನ ಸಾಲ ಯೋಜನೆಯನ್ನು ಉತ್ತಮ ರೀತಿಯಲ್ಲಿ ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಹೇಳಿದರು. ಪಟ್ಟಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಡಿಕೆ ಅಡಮಾನ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿ ಅಡಿಕೆಯ ದರ ಏರಿಳಿತವಾಗುತ್ತಿರುತ್ತದೆ…

Read More

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ

A youth leader has been appointed as Taluk General Secretary of the Youth Congress INTUC in Thirthahalli constituency, receiving widespread congratulations from party leaders and workers. ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ ತೀರ್ಥಹಳ್ಳಿ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ…

Read More

ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ – ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ|faire

ಹೊಸನಗರ : ಇಲ್ಲಿನ ದ್ಯಾವರ್ಸದಲ್ಲಿರುವ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅದ್ದೂರಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 9 ಗಂಟೆಯಿಂದ ಪೂಜಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 8ಗಂಟೆಗೆ ಹೊಸನಗರದ ಗಣಪತಿ ದೇವಸ್ಥಾನದ ಮುಂಭಾಗ ಮಾರಿಯಮ್ಮನವರ ಮೂರ್ತಿಗೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾರಿಯಮ್ಮನವರಿಗೆ ಕೃಷ್ಣಮೂರ್ತಿ ಭಟ್ ಮತ್ತು ಸಹೋದರರಿಂದ ಪೂಜೆ ಸಲ್ಲಿಸಿ ಶಿವಪ್ಪನಾಯಕ ರಸ್ತೆಯ ಮಾರ್ಗವಾಗಿ ಶ್ರೀ ದುರ್ಗಾಂಬಾ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕ…

Read More

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ..!!|deadbody

ತೀರ್ಥಹಳ್ಳಿ : ಪಟ್ಟಣದ ಹೊಸ ಕೋರ್ಟ್ ಬಳಿ  ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. 4 ದಿನಗಳ ಹಿಂದೆಯೇ ಲಾರಿಯಲ್ಲೇ ಹೃದಯಾಘಾತದಿಂದ  ಸಾವನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯಿಂದ ಲಾರಿಯಲ್ಲಿ ಲೋಡ್ ತುಂಬಿಸಿಕೊಂಡು ಬಂದು ತೀರ್ಥಹಳ್ಳಿಯಲ್ಲಿ ಇಳಿಸಿ ರಾತ್ರಿ ಊಟ ಮಾಡಿ ಲಾರಿಯಲ್ಲಿ ಮಲಗಿದ್ದಾಗ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಂದಾಜು 50 ವರ್ಷದ ವ್ಯಕ್ತಿ ಎನ್ನಲಾಗುತಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More