ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ವಿಷಯ ತಿಳಿದ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿ, ಸುಂಕದಹೊಳೆ ಸಮೀಪದ ಏಳಮಲೈ ನಿವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿತನಿಂದ ದೇವಾಲಯದಲ್ಲಿ…

Read More

ಮಳೆ ಬಂದಾಗ ಕೆಸರು ಗದ್ದೆಯಂತಾಗುವ ಬೆನವಳ್ಳಿ – ಮಸರೂರು ರಸ್ತೆ : ಜನಪ್ರತಿನಿಧಿಗಳೇ ಇನ್ನಾದರೂ ಇತ್ತ ಗಮನಹರಿಸಿ!!!!!

ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ-ಮಸರೂರು-ಆಚಾಪುರ ಸಂಪರ್ಕದ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯ್ತಿ ರಸ್ತೆಮಳೆ ಬಂದಾಗ ಕೆಸರು ಗದ್ದೆಯಂತಾಗಿ ಸಾರ್ವಜನಿಕರು ಓಡಾಡದ ಸ್ಥಿತಿ ನಿರ್ಮಾಣವಾಗುತ್ತಿದೆ.  ಬೆನವಳ್ಳಿಯಿಂದ ಮಸರೂರು, ಮಾಣಿಕರೆ, ಹಾಲಬಾವಿ, ಕೆಂಚನಾಲ, ಆಲುವಳ್ಳಿ, ಗಾಳಿಬೈಲು, ವಿರಕ್ತಮಠ, ಕಮದೂರು, ಮಾದಾಪುರ, ಕುರುಬರಜಡ್ಡು, ಲಕ್ಕವಳ್ಳಿ, ಕೆರೆಹಿತ್ತಲು, ಗಿಳಾಲಗುಂಡಿ, ಮುರುಘಾಮಠ ಆಚಾಪುರ ಇಸ್ಲಾಂಪುರ ಅಂದಾಸುರ ಹೀಗೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯ ಸಂಪರ್ಕದ ರಸ್ತೆಯಾಗಿದ್ದು ಈ ರಸ್ತೆಯನ್ನು ಕಳೆದ ಹಲವಾರು ವರ್ಷಗಳಿಂದ ಈ…

Read More

ಶಿವಮೊಗ್ಗದ ಕವಯತ್ರಿ ನಿತ್ಯಶ್ರೀ ಗೆ ಒಲಿದ ರಾಜ್ಯ ಮಟ್ಟದ ಉತ್ತಿಷ್ಟ ಸಾಧಕ ಪ್ರಶಸ್ತಿ :

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಸುಜಾತಾ, ಗೌರಧ್ಯಕ್ಷರು ಶ್ರೀ…

Read More

ಭದ್ರಾವತಿ ನಗರಸಭೆ: ಜೆಡಿಎಸ್​​ ಅಭ್ಯರ್ಥಿಗೆ ಭರ್ಜರಿ ಗೆಲುವು, ಠೇವಣಿ ಕಳೆದುಕೊಂಡ ಬಿಜೆಪಿ

ಭದ್ರಾವತಿ : ಇಲ್ಲಿನ ನಗರಸಭೆ 29ನೇ ವಾರ್ಡ್‌ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲ್ ಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 450 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಗೆಲುವಿನಿಂದ ಭದ್ರಾವತಿ ನಗರಸಭೆ ಯಲ್ಲಿ ಜೆಡಿಎಸ್ ಸ್ಥಾನ 12ಕ್ಕೆ ಏರಿಕೆಯಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಜೆಡಿಎಸ್​ನ ನಾಗರತ್ನ ಅನಿಲ್‌ ಕುಮಾರ್ 1,282 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಲೋಹಿತಾ ನಂಜಪ್ಪ 832 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ…

Read More

ವರದಕ್ಷಿಣೆಗಾಗಿ ಪತ್ನಿಯ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ : ನಾಲ್ವರ ವಿರುದ್ಧ ಪ್ರಕರಣ ದಾಖಲು

ರಿಪ್ಪನ್ ಪೇಟೆ : ವರದಕ್ಷಿಣೆಗಾಗಿ ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಅತ್ತೆ-ಮಾವ ಸೇರಿದಂತೆ ನಾಲ್ವರ ವಿರುದ್ಧ ಮಹಿಳೆಯೊಬ್ಬರು ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶಂಗೇರಿಯ ವೆಲ್ ಕಮ್ ಗೇಟ್‌ನ ಸಂತ್ರಸ್ತೆಯ ಪತಿ ಸಲ್ಮಾನ್, ಅತ್ತೆ ಸಾಹೀರಾ, ಮಾವ ಶೌಕತ್ ಖಾನ್ ಮತ್ತು ನಾದಿನಿ ಸಮೀನಾ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕಿನ ಹುಂಚ ಹೋಬಳಿಯ ಗ್ರಾಮವೊಂದರ ಸಂತ್ರಸ್ತೆಗೆ ಮತ್ತು ಶೃಂಗೇರಿ ವೆಲೆ ಕಮ್ ಗೇಟ್‌ನ ಸಲ್ಮಾನ್ ಜೊತೆ ವಿವಾಹ…

Read More

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ ರಿಪ್ಪನ್ ಪೇಟೆ : ಕಾಂತರಾಜ್ ಆಯೋಗದ ಅವೈಜ್ಞಾನಿಕ ಜಾತಿಗಣತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ್ ಅಧ್ಯಕ್ಷ ಅಧ್ಯಕ್ಷ ಉಮೇಶ್ ಮಸರೂರು ಹೇಳಿದರು. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮಾಧ್ಯಮಗಳಲ್ಲಿ ಬರುತ್ತಿರುವ ಜಾತಿಗಣತಿ ಸುದ್ದಿಯಂತೆ ನಮ್ಮ ಸಮುದಾಯದ ಸಂಖ್ಯೆಯನ್ನು ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂದು ತೋರಿಸಲಾಗುತ್ತಿದೆ. ಆದರೆ ಇವೆರೆಡು ಒಂದೇಯಾಗಿವೆ. ಮಾಧ್ಯಮಗಳಲ್ಲಿ…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು!

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತಿದ್ದ ಮೂವರು ಯುವಕರು ಪೊಲೀಸರ ವಶಕ್ಕೆ – ಸಾರ್ವಜನಿಕರಿಂದ ಧರ್ಮಧೇಟು! Three youths wearing burqas were detained by Shivamogga police after locals grew suspicious of their movements. Investigation revealed they were allegedly sent by an undertrial prisoner to threaten his wife. Two cases have been registered. ಶಿವಮೊಗ್ಗ, ಜೂನ್ 11: ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು…

Read More

ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ…

Read More

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ Shivamogga MLA B. Gopalakrishna Belur criticizes former minister K.S. Eshwarappa over environmental issues, highway projects, pump storage opposition, arecanut crisis, airport development and electricity privatization. ಶಿವಮೊಗ್ಗ, ಜು.09: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಬಿ. ಗೋಪಾಲಕೃಷ್ಣ ಬೇಳೂರು ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು…

Read More