Headlines

ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election

ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…

Read More

ಆಕ್ರಮ ಮರಳು ಸಾಗಾಟಕ್ಕೆ ದಿಟ್ಟ,ನಿರ್ದಾಕ್ಷಿಣ್ಯ ಕ್ರಮ:ವಿ ಎಸ್ ರಾಜೀವ್

ಹೊಸನಗರ :: ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಆಕ್ರಮವಾಗಿ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ದೂರುಗಳನ್ನು ನಮ್ಮ ಗಮನಕ್ಕೆ ತಂದಿದ್ದು,ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ಕಲ್ಲು,ಮರಳು ತುಂಬಿದ ವಾಹನಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ  ಸಂದೇಶ ರವಾನಿಸಿದ್ದಾರೆ. ಈ ಕುರಿತು ಹೊಸನಗರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ತಹಶಿಲ್ದಾರವರು ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ…

Read More

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ ಶಿವಮೊಗ್ಗ: ನಗರದ ಪಂಚವಟಿ ಕಾಲೋನಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಚೇರಿ ಮಧು ಕೃಪಾ ಕಟ್ಟಡದ  ಕೊನೆಯ ಮಹಡಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಿಂದ ಕಚೇರಿಯಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಹೋಗಿವೆ. ಪ್ರಮುಖವಾಗಿ ಹಾಸಿಗೆ ಮತ್ತು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ…

Read More

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ – ನೂರಾರು ಪ್ರತಿಭೆಗಳಿಗೆ ವೇದಿಕೆ: ಅದ್ದೂರಿ ವೇದಿಕೆ – ಸುಮಾರು 6000 ಮಂದಿ ಭಾಗಿ… ನೂರಾರು ಕಲಾವಿದರಿಗೆ ಗೌರವ – 300ಕ್ಕೂ ಹೆಚ್ಚು ಸಾಧಕರಿಗೆ ಒಂದೇ ವೇದಿಕೆಯಲ್ಲಿ ಗೌರವ – ರಾಜ್ಯದಲ್ಲೇ ವಿಭಿನ್ನ ಕಾರ್ಯಕ್ರಮ ಮಾಡಿ ಗೆದ್ದ ಸಂಸ್ಥೆ ರಾಜ್ಯದ ಪ್ರಸಿದ್ಧ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಸಂಸ್ಕೃತಿ ಮಂದಿರ ಆವರಣ ಹಾಗೂ ಗರ್ಲ್ಸ್ ಹೈ ಸ್ಕೂಲ್ …

Read More

ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.  ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…

Read More

ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು…

Read More

ರಿಪ್ಪನ್‌ಪೇಟೆಯ ಶಿಕ್ಷಕ ತಿಮ್ಮಪ್ಪರವರಿಗೆ ಒಲಿದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ |Rpet news

ರಿಪ್ಪನ್‌ಪೇಟೆಯ ಶಿಕ್ಷಕ ತಿಮ್ಮಪ್ಪರವರಿಗೆ ಒಲಿದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ | ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ತಿಮ್ಮಪ್ಪ ಸಿ ರವರು ಸೇರಿದಂತೆ ಹೊಸನಗರ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದಿದೆ. ಮೂಲತಃ ಆಯನೂರು ಸಮೀಪದ ಕುಂಸಿ ಗ್ರಾಮದ ನಿವಾಸಿ ತಿಮ್ಮಪ್ಪ ಸಿ ರವರು ಕಳೆದ 14 ವರ್ಷಗಳಿಂದ ಪಟ್ಟಣದ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ತಿಮ್ಮಪ್ಪ ಸಿ ರವರಿಗೆ…

Read More

ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಆಗುಂಬೆ ಘಾಟಿಯ  10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಮೂರು…

Read More

ಎಳ್ಳಮವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ರಾಮತೀರ್ಥದಲ್ಲಿ ಮಿಂದೆದ್ದ ಭಕ್ತ ಸಮೂಹ

ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ  ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ಶರ್ಮೀಣ್ಯಾವತಿ ನದಿ ತೀರದಲ್ಲಿ ನೆಲೆಸಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಎಳ್ಳಮಾವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡಿದರು. ಸುತ್ತಮುತ್ತಲ ಗ್ರಾಮಗಳಿಂದ ತಂಡೋಪತಂಡವಾಗಿ ಬಂದ ಭಕ್ತರು ನದಿಯಲ್ಲಿ ಮಿಂದೆದ್ದು, ನದಿ ತೀರದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಕೆಂಜಿಗಾಪುರದ ಶ್ರೀಧರ್ ಭಟ್ ಹಾಗೂ ದೇವಸ್ಥಾನದ ಅರ್ಚಕ ಎ.ವಿ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹೋಮ…

Read More

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ…

Read More
Exit mobile version