ಭದ್ರೆ ಪ್ರತಿ ಬಾರಿ ಪೂರ್ಣ ಪ್ರಮಾಣದಲ್ಲಿ ತುಂಬಲಿ, ಕೊನೆಯ ಭಾಗದ ರೈತರಿಗೂ ನೀರು ತಲುಪಲಿ : ಬಿ ಕೆ ಸಂಗಮೇಶ್ವರ್
ಭದ್ರಾವತಿ : ಕ್ಷೇತ್ರದ ಶಾಸಕ ಬಿ ಕೆ ಸಂಗಮೇಶ್ವರ್ ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗೆ ಪೂಜೆ ನೆರೆವೇರಿಸಿದರು. ತಾಲೂಕಿನ ಜೀವನದಿಯಾದ ಭದ್ರಾ ಜಲಾಶಯ ಪ್ರತಿ ವರ್ಷ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಮೂಲಕ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಲಿ ಎಂದು ಶಾಸಕ ಬಿ ಕೆ ಸಂಗಮೇಶ್ವರ್ ಹೇಳಿದರು. ಅವರು ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು,…