ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಸರಳ ಆಚರಣೆ:
ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಆಗಸ್ಟ್ 03 ರ ಮಂಗಳವಾರ ದಂದು ನಡೆಯುವ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವನ್ನು ಕೊರೊನಾ ಕಾರಣದಿಂದಾಗಿ ರಾಜ್ಯ ಸರಕಾರದ ಆದೇಶದ ಅನ್ವಯ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಬಸವರಾಜ್ ರವರು ಪೂರ್ವಿಕರು ನಡೆದು ಬಂದಂತಯೆ ನಾವುಗಳೂ ವರ್ಷಕ್ಕೆ ಎರಡು ಬಾರಿ ಜಾತ್ರೆ ಆಚರಿಸಿಕೊಂಡು ಬಂದಿದ್ದೇವೆ….