Headlines

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ | Traffic fine

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು ಮತ್ತು ಬೀಟ್/ಡಿಫೆಕ್ಟಿವ್ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಉಂಟಾಗುವ ರೀತಿಯಲ್ಲಿ ತನ್ನ ವಾಹನವನ್ನು ಚಲಾಯಿಸುತ್ತಿದ್ದಾನೆಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೂರ್ವ ಸಂಚಾರ ಪೊಲಸ್ ಠಾಣೆಯ ಪಿಎಸ್‌ಐ ನವೀನಕುಮಾರ್ ಮಠಪತಿ ಮತ್ತು ಸಿಬ್ಬಂದಿಗಳಾದ ಸಂತೋಷ ಕೆ,ಹೆಚ್…

Read More

ಸಾಗರದಲ್ಲಿ ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಹರಿದ ಘಟನೆ | ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿ ಸಾವು|sagara

ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ, ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದರು.ಆ ಅಪಘಾತದಲ್ಲಿ ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿಯವರು ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್​ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಈ ಘಟನೆಯ ಬೆನ್ನಲ್ಲೆ ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು.  ಇದರ ಬೆನ್ನಲ್ಲೆ ನಿನ್ನೆ ಅನಾರೋಗ್ಯ…

Read More

ಹೊಸನಗರ ಪೊಲೀಸರ ಭರ್ಜರಿ ಭೇಟೆ : ಮೀನು ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ :

ಹೊಸನಗರ: ಇಲ್ಲಿನ ಸಮೀಪದ ಮಾವಿನಕೊಪ್ಪ ಬಳಿ ಇಂದು ಬೆಳಗಿನ ಜಾವ ಮೀನು ತುಂಬಿದ್ದ ಗೂಡ್ಸ್ ಗಾಡಿಯಲ್ಲಿ ಸುಮಾರು ಒಂದು ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.  ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ನಾಯ್ಕ್ ರವರ ನೇತೃತ್ವದ ತಂಡ ಇಂದು ಬೆಳಗಿನಜಾವ ಮಿಂಚಿನ ದಾಳಿ ನಡೆಸಿ ಒಂದು ಕೆ.ಜಿ ಗಾಂಜಾ ಹಾಗೂ ಆರೋಪಿ ಸಹಿತ ಒಂದು ಗೂಡ್ಸ್ ಆಟೋವನ್ನು ವಶಪಡಿಸಿಕೊಂಡಿದ್ದಾರೆ. ಡಿ.ವೈ.ಎಸ್.ಪಿಯವರ ಆದೇಶದ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಮಧುಸೂಧನ್‌ರವರ ಮಾರ್ಗದರ್ಶನದಲ್ಲಿ ಈ ಕಾರ್ಯಚರಣೆ ನಡೆಸಲಾಗಿದ್ದು ಬಟ್ಟೆಮಲ್ಲಪ್ಪದಿಂದ ಬರುತ್ತಿದ್ದ ಮೀನು ತುಂಬಿದ್ದ ಗೂಡ್ಸ್ ಆಟೋದಲ್ಲಿ…

Read More

ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು | Bull bully competition

ಹೋರಿ ಬೆದರಿಸುವ ಸ್ಪರ್ಧೆ  – ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು |  ಶಿಕಾರಿಪುರ(shikaripura) ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ( Bull bully competition) ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.  ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿಕಾರಿಪುರ ತಾಲೂಕಿನ ಈಸೂರು(esuru) ಗ್ರಾಮದ ರಾಮು(26) ಎಂದು ಗುರುತಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಕೈ ಅಭ್ಯರ್ಥಿಯಾಗ್ತಾರ ಬಿಜೆಪಿಯ ಮಾಜಿ ಶಾಸಕ..?|ಯಡಿಯೂರಪ್ಪ ಪುತ್ರನನ್ನು ಖೆಡ್ಡಾಕ್ಕೆ ಕೆಡವಲು ಕಾಂಗ್ರೆಸ್ ರಣತಂತ್ರ???

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಪುತ್ರ ಸಂಸದ ಬಿವೈ ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್  ರಣತಂತ್ರ ರಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ  ಮೂಲಕ ಆಪರೇಷನ್ ಕಾಂಗ್ರೆಸ್​ಗೆ  ಮುಂದಾಗಿದೆಯಂತೆ. ಒಂದು ವೇಳೆ ಆಪರೇಷನ್ ಕಾಂಗ್ರೆಸ್ ಯಶಸ್ವಿಯಾದ್ರೆ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ. ಹೌದು, ಕಾಗೋಡು ತಿಮ್ಮಪ್ಪ ಅವರ ಮೂಲಕ ಮಾಜಿ ಶಾಸಕ…

Read More

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ ಶಿವಮೊಗ್ಗ : ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬರ ಸರವನ್ನು ಕಳ್ಳನೊಬ್ಬ ಎಳೆದು ಕದ್ದೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಪೇಪರ್ ಫ್ಯಾಕ್ಟರಿಯ ಶಾರದ ನಗರ ನಿವಾಸಿಯಾದ ಯುವತಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಸವಾರ ಕಳ್ಳನೊಬ್ಬ ಆಕೆಯ ಕೊರಳಲ್ಲಿದ್ದ 9 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಕದ್ದೊಯ್ದಿದ್ದಾನೆ. ಅಕಸ್ಮಿಕ ಎಳೆಯಾಟದಿಂದ ಯುವತಿ ಬೈಕ್‌ನಿಂದ ಕೆಳಗೆ ಬಿದ್ದು…

Read More

ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ…

Read More

SSLC Results | ಶಿಕ್ಷಣ ಸಚಿವರ ತವರು ಜಿಲ್ಲೆಗೆ ದಾಖಲೆಯ ಫಲಿತಾಂಶ – 28 ರಿಂದ 3ನೇ ಸ್ಥಾನಕ್ಕೆ ಜಿಗಿದ ಶಿವಮೊಗ್ಗ ಜಿಲ್ಲೆಯ ಫಲಿತಾಂಶ

SSLC ಫಲಿತಾಂಶ ಪ್ರಕಟ | ಶಿವಮೊಗ ಜಿಲ್ಲೆಗೆ ದಾಖಲೆಯ ಫಲಿತಾಂಶ  ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ. ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,420…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More

ಆವಿನಹಳ್ಳಿ ಸಮೀಪದಲ್ಲಿ ರಸ್ತೆ ಅಪಘಾತ – ಗಂಡು ಕಾಡುಕೋಣ ಸಾವು|accident

ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ. ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಆವಿನಹಳ್ಳಿ…

Read More
Exit mobile version