RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…

Read More

ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ಪೂರ್ಣ – ವಾಹನ ಸಂಚಾರ ಪುನರಾರಂಭ|hulikal ghat

ಕರಾವಳಿ ಹಾಗೂ ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಬಾಳೆಬರೆ (ಹುಲಿಕಲ್‌) ಘಾಟ್‌ನ ‌ಕಾಂಕ್ರಿಟೀಕರಣ ಕಾಮಗಾರಿಯು ಪೂರ್ಣಗೊಂಡಿದ್ದು, ಶನಿವಾರ (ಏ.15) ರಾತ್ರಿಯಿಂದ ವಾಹನ ಸಂಚಾರ ಪುನಃ ಆರಂಭಗೊಂಡಿದೆ. ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗಾಗಿ ಫೆ. 5 ರಿಂದ ಏ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಏ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ….

Read More

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ – ಬಿ ವೈ ರಾಘವೇಂದ್ರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಬಗ್ಗೆ ಕೆಲವು ನಾಯಕರು ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ. ರಾಜಕಾರಣ ಮಾಡಲು ಬೇರೆ ವಿಚಾರಗಳಿದೆ. ಅದನ್ನೆಲ್ಲ ಬಿಟ್ಟು ಅಲ್ಲಿ ಆರ್ ಎಸ್ ಎಸ್ ಅನ್ನು ಎಳೆಯುವಂತಹದ್ದು ಸರಿಯಲ್ಲ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.  ತೀರ್ಥಹಳ್ಳಿಯಲ್ಲಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ ಆರ್ ಎಸ್ ಎಸ್ ಎಂಬುದು ದೇಶಕ್ಕೋಸ್ಕರ, ಹಿಂದೂ ರಾಷ್ಟ್ರಕ್ಕೊಸ್ಕರ…

Read More

ಸೇನಾ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಪ್ರಧಾನಿ‌ ಮೋದಿ|modi

ಜನಸಂಕಲ್ಪ ಮಹಾಸಂಗಮ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ನವದೆಹಲಿಗೆ ಪ್ರಯಾಣ ಬೆಳೆಸಿದರು. ಪ್ರಧಾನಿ ನರೇಂದ್ರ ಮೋದಿ, ಅವರ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಮೂರು ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಶಾಸಕರಾದ ಹಲತಾಳು ಹಾಲಪ್ಪ, ಎಂಎಲ್’ಸಿಗಳಾದ ಡಿ.ಎಸ್. ಅರುಣ್,…

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ದರ್ಪ : ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ

ತೀರ್ಥಹಳ್ಳಿ :  ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಥಳೀಯ ಮೇಲಿನ ಕುರುವಳ್ಳಿ ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಮೇಲಿನ ಕುರುವಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಹೊರಬೈಲು ಪ್ರಭಾಕರ್ ಆರೋಪಿಸಿದ್ದಾರೆ. ಪಟ್ಟಣದ ತಾಲ್ಲೂಕು ಕಛೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅವಿನಾಶ್ ರವರು ಕಳೆದ ಕೆಲ ದಿನಗಳಿಂದ ಮೇಲಿನ ಕುರುವಳ್ಳಿಯಲ್ಲಿನ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಬಂದು ಕಾರ್ಮಿಕರು ಕಷ್ಟ ಪಟ್ಟು…

Read More

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | Railway

ರೈಲ್ವೆ ನಿಲ್ದಾಣದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ | ಶಿವಮೊಗ್ಗ : ಇಲ್ಲಿನ ರೈಲುನಿಲ್ದಾಣದಲ್ಲಿ ಭದ್ರಾವತಿ ಕಡೆಗೆ ಹೋಗುವ ಕೊನೆಯ ರೈಲ್ವೆ ಟ್ರಾಕ್ ಮೇಲೆ ಸುಮಾರು 30 ವರ್ಷದ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ.  ಕರ್ತವ್ಯದಲ್ಲಿದ್ದ ಕೀ ಮ್ಯಾನ್ ಟ್ರ್ಯಾಕ್ ಪರಿಶೀಲನೆ ವೇಳೆಯಲ್ಲಿ ಶವ ಪತ್ತೆಯಾಗಿದೆ. ಶವವು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಗಾರದಲ್ಲಿರುತ್ತದೆ. ಮೃತ ವ್ಯಕ್ತಿಯ ಚಹರೆ ಸುಮಾರು 5.8 ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ತಲೆಯಲ್ಲಿ…

Read More

Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ

Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಕಳ್ಳತನವಾದ ಬೈಕ್‌ನ್ನು ಕೇವಲ 2 ಗಂಟೆಯೊಳಗೆ ಪತ್ತೆ ಮಾಡಿ ಮಾಲು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ತೊಪ್ಪಿನಘಟ್ಟದ ಡ್ರೈವರ್ ಕೆಲಸ ಮಾಡುವ 23 ವರ್ಷದ ಸತೀಶ್ ಎಲ್ ಎಸ್ ಹಾಗೂ ಅಪ್ರಾಪ್ತ (ಕಾನೂನು ಸಂಘರ್ಷಕ್ಕೊಳಗಾದ ಬಾಲಕ) ಸೇರಿದಂತೆ ಇಬ್ಬರು ಬಂಧಿತ ಆರೋಪಿಗಳಾಗಿದ್ದಾರೆ. ಶನಿವಾರ ರಾತ್ರಿ ದೂನ…

Read More

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು. ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

IPL Auction ನೆನಪಿಸುವಂತೆ ನಡೆದ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ಪ್ರಕ್ರಿಯೆ….!!!!!!!

ಹೆದ್ದಾರಿಪುರ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ರಿಕೆಟ್‌ ಪ್ರೀಮಿಯರ್ ಆಯೋಜನೆ ಗರಿಗೆದರತೊಡಗಿವೆ.  ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರದಲ್ಲಿ ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್(HPL) ಕ್ರಿಕೆಟ್ ಟೂರ್ನಿ ಆಯೋಜನೆಗೆ ಈಗ ಭರ್ಜರಿ ಚಾಲನೆ ಸಿಕ್ಕಿದ್ದು, ಭಾನುವಾರ ವೃತ್ತಿಪರ ಶೈಲಿಯಲ್ಲಿ ಐಪಿಎಲ್ ಹರಾಜು ನೆನಪಿಸುವಂತೆ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ನಡೆದಿದೆ. ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 12 ತಂಡಗಳು ಪಾಲ್ಗೊಳ್ಳುತ್ತಿದ್ದು,…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ | ಅರಣ್ಯ ಇಲಾಖೆಯ ಕಾರ್ಯಾಚರಣೆ , ಕರಡಿ ಸೆರೆ

A bear entered Shivamogga Airport premises in Sogane, creating panic after being spotted in nearby Vinayaka Nagar. Forest officials have launched a search operation. ಶಿವಮೊಗ್ಗ: ನಗರದ ಸೋಗಾನೆ ಪ್ರದೇಶದಲ್ಲಿರುವ ವಿಮಾನ ನಿಲ್ದಾಣದ ಒಳಗೆ ಕರಡಿ ನುಗ್ಗಿದ ಘಟನೆ ಸೋಮವಾರ ಬೆಳಿಗ್ಗೆ ಆತಂಕ ಸೃಷ್ಟಿಸಿದೆ. ಆಹಾರ ಅರಸುತ್ತ ಬಂದಿದ್ದ ಕರಡಿಯೊಂದು ಮೊದಲಿಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿದೆ. ಸ್ಥಳೀಯ ಮನೆಗಳು ಹಾಗೂ ತೋಟಗಳ ಸುತ್ತ ಕರಡಿ…

Read More