ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಶ್ರೀಕಾಂತ್ ಪುನರಾಯ್ಕೆ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಹುಟ್ಟಿಸಿದೆ : ಆರ್ ಎನ್ ಮಂಜುನಾಥ್
ಶಿವಮೊಗ್ಗ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ರವರು ಪುನರ್ ಆಯ್ಕೆಯಾಗಿರುವುದಕ್ಕೆ ಹೊಸನಗರ ತಾಲೂಕಿನ ಜೆಡಿಎಸ್ ಮುಖಂಡರಾದ ಆರ್ ಎನ್ ಮಂಜುನಾಥ್ ಹರ್ಷ ವ್ಯಕ್ತ ಪಡಿಸಿದ್ದಾರೆ. ಯುವಕರ ಕಣ್ಮಣಿ, ಬಡವರ ಬಂಧುವಾದ ಎಂ ಶ್ರೀಕಾಂತ್ ನಾಯಕರನ್ನು ಸೃಷ್ಟಿಮಾಡುವ ನಾಯಕತ್ವದ ಗುಣವನ್ನು ಹೊಂದಿರುವ ಉನ್ನತ ಹೃದಯವಂತ ವ್ಯಕ್ತಿ. ಜಿಲ್ಲೆಯ ಯುವಕರ ಪಾಲಿಗೆ ಅಣ್ಣನ ಸ್ಥಾನದಲ್ಲಿದ್ದು, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿರುವುದು ಅಭಿನಂದನೀಯ ಅವರಿಗೆ ಹೊಸನಗರ ಕಾರ್ಯಕರ್ತರ ಪರವಾಗಿ ಹಾರ್ದಿಕ ಅಭಿನಂದನೆಗಳು…


