ಶಿವಮೊಗ್ಗ: ಜಿಲ್ಲೆಯ ಈ ನಾಲ್ವರಲ್ಲಿ ಯಾರಿಗೆ ಒಲಿಯುವುದು ಸಚಿವ ಸ್ಥಾನ ?
ಶಿವಮೊಗ್ಗ : ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಗುರುವಾರ ರಚನೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಸಚಿವ ಸ್ಥಾನ ಯಾರಿಗೆ ? ಎಂಬ ತೀವ್ರ ಚರ್ಚೆ ಸಾರ್ವಜನಿಕ ವಲಯದಲ್ಲಿ ಪ್ರಾರಂಭಗೊಂಡಿದೆ. ಆಯಾ ಭಾಗದ ಶಾಸಕರ ಬೆಂಬಲಿಗರು ತಮ್ಮ ಶಾಸಕರೇ ಮಂತ್ರಿಯಾಗುತ್ತಾರೆ ಎಂದು ಪ್ರಬಲ ವಾದ ಮಂಡಿಸುತ್ತಿರುವು ಕೇಳಿ ಬರುತ್ತಿದೆ. ಈ ಮೊದಲು ರಾಜ್ಯದಲ್ಲಿ ಯಡಿಯೂರಪ್ಪ ಸರಕಾರವಿದ್ದಾಗ ಪಕ್ಷದ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಜಿಲ್ಲಾ ಉಸ್ತುವಾರಿ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಹಿರಿತನ…


