ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ A timber cutting worker was allegedly murdered by two co-workers in Sonale village of Hosanagara taluk, Shivamogga district, after an argument over family matters. Hosanagara Police have registered a murder case and launched an investigation. ಹೊಸನಗರ: ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಂಡು ಇಬ್ಬರು ಸೇರಿ ಟಿಂಬರ್…

Read More

Ripponpet | ನಾಯಕ್ ಜನರಲ್ ಸ್ಟೋರ್ಸ್ ಮಾಲೀಕ ಮಾಧವ ನಾಯಕ್‌ ನಿಧನ

ರಿಪ್ಪನ್ ಪೇಟೆ : ಪಟ್ಟಣದ ಜಿ.ಎಸ್‌.ಬಿ ಸಮಾಜದ ಮಾಜಿ ಅಧ್ಯಕ್ಷರು ಹಾಗೂ ನಾಯಕ್ ಜನರಲ್ ಸ್ಟೋರ್ಸ್ ಇದರ ಮಾಲೀಕರಾದ ಮಾಧವ ನಾಯಕ್ (85) ಇಂದು ಬೆಳಿಗ್ಗೆ ವಯೋಸಹಜ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಪಟ್ಟಣದ ಗಾಂಧಿನಗರದ ಹಿಂದೂ ರುದ್ರ ಭೂಮಿಯಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .

Read More

ಬಸವಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮ::

ರಿಪ್ಪನ್ ಪೇಟೆ:ಇಲ್ಲಿಗೆ ಸಮೀಪದ ಬಸವಾಪುರ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ,ಅರಣ್ಯ ಇಲಾಖೆ, ಹಾಗೂ ಸ್ಥಳೀಯ ದೇವಸ್ಥಾನ ಸಮಿತಿಯವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪರಿಸರದ ಅಳಿವು-ಉಳಿವು  ಮುಂದಿನ ಪೀಳಿಗೆಗೆ ಪರಿಸರ ಅಗತ್ಯತೆ ಏನು? ಎಂಬುದರ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ತಿಳಿಸಿಕೊಡಲಾಯಿತು. ಈ ಸಮಾರಂಭದಲ್ಲಿ ಗ್ರಾ.ಪಂ.ಸದಸ್ಯರಾದ ದೇವರಾಜ್,  ಶಾಂತಕುಮಾರಿ, ಒಕ್ಕೂಟದ ಅಧ್ಯಕ್ಷರಾದ ಅಶೋಕ್, ವಲಯ ಮೇಲ್ವಿಚಾರಕ ನಾಗೇಶ್, ಸೇವಾ ಪ್ರತಿನಿಧಿ ವಸಂತ , ಅರಣ್ಯ…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ ಶಿವಮೊಗ್ಗ:  ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ  ಶಿವಮೊಗ್ಗದಲ್ಲಿ ನಡೆದಿದ್ದು,  ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್…

Read More

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ – ಏಳು ಜನರ ಬಂಧನ|enforcement

ಸಾಗರ : ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ ನಿರ್ಮಿಸಲು ಹೋಗಿದ್ದ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ  ಏಳು ಜನರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ತಾಲ್ಲೂಕಿನ ಕಸಬಾ ಹೋಬಳಿ ಮಡಸೂರು ಗ್ರಾಮದ ಸರ್ವೇ ನಂ. 71ರ ಸರ್ಕಾರಿ ಜಮೀನಿನಲ್ಲಿ ಒತ್ತುವರಿ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದೆ….

Read More

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ! ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ನಗರಸಭೆ ಕಾರ್ಮಿಕ ಸಾವು :

 ಭದ್ರಾವತಿಯ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಕ್ರಿಕೆಟ್‌ ಪಂದ್ಯಾವಳಿಯ ಸಂದರ್ಭದಲ್ಲಿ ದುರ್ಘನೆಯೊಂದು ನಡೆದಿದೆ. ಭದ್ರಾವತಿ ನಗರಸಭೆ ವತಿಯಿಂದ ಕಾರ್ಮಿಕರು ಹಾಗು ಸಿಬ್ಬಂದಿಯವರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುವ ವೇಳೆ ದಿನೇಶ್‌ರಾವ್ (38) ಎಂಬುವವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ ಆರೋಗ್ಯ ಸಿಬ್ಬಂದಿಯಿಂದ ದಿನೇಶ್ ತಪಾಸಣೆ ನಡೆಸಲಾಗಿದ್ದರೂ, ಕುಸಿದು ಬಿದ್ದ ತಕ್ಷಣವೇ ದಿನೇಶ್ ಮೃತಪಟ್ಟ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಸ್ಪಷ್ಟಪಡಿಸಿದ್ದಾರೆ. ನಂತರ ಮೃತದೇಹವನ್ನು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Read More
Exit mobile version