ಮುಖ್ಯಮಂತ್ರಿಗಳಿಂದ ಸಾಗರ ತಾಲ್ಲೂಕಿನಲ್ಲಿ 459.19 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ
ಸಾಗರ:ತಾಲ್ಲೂಕಿನ ಹಲವು ಕಾಮಗಾರಿಗಳಿಗೆ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ರವರು ಚಾಲನೆ ನೀಡಿದರು. ಅವರು ಇಲ್ಲಿನ ಗಾಂಧಿಮಂದಿರದ ಹೊರಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇರುವಕ್ಕಿ ಕೃಷಿ ವಿಶ್ವ ವಿದ್ಯಾಲಯ 155-00 ಕೋಟಿ ರೂಪಾಯಿಗಳು, ಜೋಗ ಅಭಿವೃದ್ಧಿ ಕಾಮಗಾರಿಗಳಿಗೆ 165-00ಕೋಟಿ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206 (69) ತುಮಕೂರು ಹೊನ್ನಾವರ ರಸ್ತೆಯ ಕಿ.ಮೀ. 278 ರಿಂದ 286.40ರವರೆಗೆ ಸಾಗರ ನಗರ ವ್ಯಾಪ್ತಿಯಲ್ಲಿ…