Headlines

ಮಕ್ಕಳಲ್ಲಿ ಧರ್ಮಜಾಗೃತಿ ಮೂಡಿಸುವುದೇ ಭವಿಷ್ಯದ ಧರ್ಮರಕ್ಷಣೆ – ಕು. ಹಾರಿಕಾ ಮಂಜುನಾಥ್

A Hindu Sangama program was held in Ripponpete where Hindu thinker and orator Harika Manjunath called for unity beyond caste and creed and emphasized the importance of preserving Sanatana Dharma, culture, and traditions. ರಿಪ್ಪನ್‌ಪೇಟೆ: ಜಾತಿ, ಮತ, ಪಂಥ, ಪಂಗಡಗಳ ಭೇದವನ್ನು ಮನೆಯೊಳಗೆ ಸೀಮಿತಗೊಳಿಸಿ, ಸಮಾಜದ ಹೊರಗೆ ಬಂದಾಗ ನಾವೆಲ್ಲರೂ ಹಿಂದೂ ಧರ್ಮೀಯರೆಂಬ ಒಗ್ಗಟ್ಟಿನ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹಿಂದೂ ಧರ್ಮದ ಚಿಂತಕಿ…

Read More

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!! ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ…

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ  ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…

Read More

ಕೊರೊನಾ ನಡುವೆ ಯಶಸ್ವಿಯಾಗಿ ನಡೆದ ಮೊದಲ ಹಂತದ SSLC ಪರೀಕ್ಷೆ :

ಆನಂದಪುರ: ಕೊರೋನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು ಮೊದಲನೇ ದಿನ ಯಶಸ್ವಿಯಾಗಿ ನೆರವೇರಿತು. ಸರ್ಕಾರ ಪರೀಕ್ಷೆ ನಡೆಸಬೇಕೋ ನಡೆಸಬಾರದೋ ಎಂಬ ಗೊಂದಲದಿಂದ ಅಂತೂ ದಿನಾಂಕವನ್ನು ಫಿಕ್ಸ್ ಮಾಡಿ ಪರೀಕ್ಷೆಯನ್ನು ನಡೆಸಿತು. ಸಾಗರ ತಾಲ್ಲೂಕ್ ಹಾಗೂ ಹೊಸನಗರ ತಾಲೂಕಿನಾದ್ಯಂತ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಿಗೆ ಬೆಳಿಗ್ಗೆನೇ ವೈದ್ಯಕೀಯ ಪರೀಕ್ಷೆ ನಡೆಸಿ ಥರ್ಮಲ್ ಸ್ಕ್ಯಾನಿಂಗ್ ನೊಂದಿಗೆ ಮಾಸ್ಕ್ ವಿತರಿಸಿ ಪ್ರತಿ ಕೊಠಡಿಗೆ ಹನ್ನೆರಡು ವಿದ್ಯಾರ್ಥಿಗಳಂತೆ ಪರೀಕ್ಷೆ ಬರೆಸಲಾಯಿತು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ನೀರಿನ…

Read More

ವಿಜೃಂಭಣೆಯ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ವಿಜೃಂಭಣೆಯ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ ರಿಪ್ಪನ್‌ಪೇಟೆ;-ಇಲ್ಲಿನ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಅಪರಾಹ್ನ 12. ಗಂಟೆ 45 ನಿಮಿಷದಲ್ಲಿ ಸಿದ್ದಿವಿನಾಯಕ ಸ್ವಾಮಿ ರಥವನ್ನೇರುತ್ತಿದ್ದಂತೆ ಭಕ್ತರ ಜಯಘೋಷಣೆ ಮುಗಿಲು ಮುಟ್ಟಿತು. ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ಮತ್ತು ನಿಟ್ಟೂರು ನಾರಾಯಣಗುರು ಮಠದ ರೇಣುಕಾನಂದ ಮಹಾಸ್ವಾಮಿಜಿ ಮತ್ತು ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ಧರ್ಮದರ್ಶಿ ಸಮಿತಿ ಆಧ್ಯಕ್ಷ ಈಶ್ವರಶೆಟ್ಟಿ ಇವರು ಹಾಜರಿದ್ದು ರಥೋತ್ಸವಕ್ಕೆ ಚಾಲನೆ ನೀಡಿದರು. ಜಾತ್ರಾ ಮಹೋತ್ಸವವು ಜನರಲ್ಲಿನ ಶ್ರದ್ದಾ…

Read More

ವೃಕ್ಷಮಾತೆ ತಿಮ್ಮಕ್ಕ ಸ್ಮರಣೆಗೆ ಶಿಗ್ಗಾವಿಯಲ್ಲಿ ಸಸಿ ನೆಡುವ ಮೂಲಕ ಗೌರವ

ಹಾವೇರಿ: ಜಿಲ್ಲೆಯ ಶಿಗ್ಗಾವಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸಂದರ್ಭದಲ್ಲಿ, ಶಿಗ್ಗಾವಿ ನಗರದಲ್ಲಿರುವ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಅವರ ಸ್ಮರಣಾರ್ಥವಾಗಿ ಸಸಿಗಳನ್ನು ನೆಡುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಸಿ ತಿಮ್ಮಕ್ಕ ಅವರ ಅಗಲಿಕೆಗೆ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ.ಎಸ್. ಪಾಟೀಲ್, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲೋಗಲ್, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಸೇರಿದಂತೆ ಅನೇಕರು ಭಾಗಿಯಾಗಿದ್ದರು. ವರದಿ : ನಿಂಗರಾಜ್…

Read More

ಹೊಸನಗರ ತಾಲೂಕ್ ತಹಶೀಲ್ದಾರ್ ವಿ ಎಸ್ ರಾಜೀವ್ ವರ್ಗಾವಣೆ – ಜಿಲ್ಲೆಯ ಮೂವರು ತಹಶೀಲ್ದಾರ್ ವರ್ಗಾವಣೆ|transfer

ಹೊಸನಗರ ತಾಲೂಕಿನ ತಹಶೀಲ್ದಾರ್ ವಿ ಎಸ್ ರಾಜೀವ್ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ರಾಜೀವ್ ಸೇರಿದಂತೆ  ಶಿವಮೊಗ್ಗ ಜಿಲ್ಲೆಯ ಮೂವರು ತಹಶೀಲ್ದಾರ್ ಗಳು ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ, ಹೊಸನಗರ ಮತ್ತು ಶಿವಮೊಗ್ಗ ತಹಶೀಲ್ದಾರ್ ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಉಡುಪಿಯ ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದರೆ, ಹೊಸನಗರ ತಾಲೂಕಿನ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಶಿವಮೊಗ್ಗ ತಾಲೂಕು…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹರತಾಳು ಹಾಲಪ್ಪರವರಿಗೆ ಕಮಿಷನ್ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಸಿದ್ಧ: ಬೇಳೂರು ಗೋಪಾಲಕೃಷ್ಣ

ಹೊಸನಗರ: ಹೊಸನಗರ-ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಹೊಸನಗರ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ  ಬೇಳೂರು ಗೋಪಾಲಕೃಷ್ಣರವರು ಸವಾಲು ಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಅವರು ತಾವು ಪ್ರಾಮಾಣಿಕರು ಮರಳು ಮಾಧ್ಯಮದವರಿಂದ…

Read More

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಬೇಳೂರು ಗೋಪಾಲಕೃಷ್ಣ ಅರ್ಜಿ|beluru

ಸಾಗರ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಪಕ್ಷದ ನಿಯಾಮವಳಿಯಂತೆ ಇಂದು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿದರು. ರಾಜ್ಯ ರಾಜಕಾರಣದಲ್ಲಿ ರಂಗುರಂಗಿನ ವ್ಯಕ್ತಿತ್ವ,ನೇರ ನುಡಿಯ ಮೂಲಕ ತನ್ನದೇ ಆದಂತಹ ಛಾಪು ಮೂಡಿಸಿಕೊಂಡು ಗ್ರಾಮೀಣ ಪ್ರದೇಶದಿಂದ ಹಿಡಿದು ನಗರ ಪ್ರದೇಶದವರೆಗೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಬೇಳೂರು ಗೋಪಾಲಕೃಷ್ಣ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ…

Read More

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಪ್ರತಿಫಲ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ ಶಿಕ್ಷೆಯೇ ಶಿಕ್ಷಣದ ಮಾನದಂಡ ಎಂಬಂತೆ ವರ್ತಿಸುವ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಮರುಳಾಗಿ,  ದೂರದಿಂದಲೇ  ಸರ್ಕಾರಿ ಶಾಲೆಗಳ ಕಾರ್ಯವೈಕರಿಯ ಬಗ್ಗೆ ಅಸಡ್ಡೆ ತೋರುವವರೆ ಹೆಚ್ಚು , ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಟ್ಟ ಹಳ್ಳಿಯ ಹಾಲಂದೂರಿನ ಸರ್ಕಾರಿ  ಶಾಲೆ ಸಾಕ್ಷಿಕರಿಸಿದೆ. ಇಲ್ಲಿನ ಶಿಕ್ಷಕ ಗೋಪಾಲ್ ಹೆಚ್. ಎಸ್….

Read More
Exit mobile version