ರಿಪ್ಪನ್‌ಪೇಟೆ : ಕರ್ಕಶ ಶಬ್ದ ಮಾಡುತಿದ್ದ ಬೈಕ್ ಸೈಲೆನ್ಸರ್ ಗಳನ್ನು ಸೈಲೆಂಟ್ ಮಾಡಿದ ಪೊಲೀಸರು|silencers

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆ ಕರ್ಕಶ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡಿರುವ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು ಸೈಲೆನ್ಸರ್ ಬದಲಾಯಿಸಿ ಭಾರಿ ದಂಡದ ಬಿಸಿ ಮುಟ್ಟಿಸಿದ್ದಾರೆ. ವಾಹನಗಳ ಸೈಲೆನ್ಸರ್‌ಗಳನ್ನು ಮಾರ್ಪಾಡು ಮಾಡಿ ಬಳಸುವುದರಿಂದ ವಾಹನಗಳ ಮೈಲೇಜ್ ಕೂಡ ಕಡಿಮೆಯಾಗುತ್ತದೆ. ಆರ್‌ಟಿಒ ನಿಯಮಗಳ ಅನುಸಾರ ಇದು ತಪ್ಪ ಕೂಡ. ಶಬ್ದ ಹೆಚ್ಚು ಬರುವುದರಿಂದ ಶಬ್ದ ಮಾಲಿನ್ಯದ ಜೊತೆಗೆ ವೃದ್ಧರು, ರೋಗಿಗಳಿಗೆ ತೊಂದರೆ ಆಗುತ್ತೆ. ಆದರೂ ಇದರ ಬಳಕೆ ಮಾತ್ರ…

Read More

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಡಿ ಎಸ್​ ಅರುಣ್

ಶಿವಮೊಗ್ಗ :  ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ…

Read More

ಆನಂದಪುರ ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ದಂಪತಿಗಳಿಗೆ ಗಾಯ :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಅನಾಹುತ ಸಂಭವಿಸಿದೆ. ಅಮಟೆಕೊಪ್ಪ ದಿಂದ ಹಾಲುಗುಡ್ಡೆಗೆ ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಇರುವಕ್ಕಿ ಬಳಿ   ಬೈಕ್ ನಲ್ಲಿ ಕೂತಿದ್ದ ಗಂಡ ಹೆಂಡತಿಯ ಮೇಲೆ ಚಲಿಸುತ್ತಿರುವಾಗಲೇ ಬೃಹತ್ ಆಕಾರದ ಮರ ಬಿದ್ದು ಬೈಕ್ ಸವಾರರಿಗೆ ತೀವ್ರ ಗಾಯವಾಗಿದೆ ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗುತ್ತಿದ್ದು  ಸ್ಥಳೀಯರ ಸಹಕಾರದಿಂದ ಇಬ್ಬರ ಜೀವ ಉಳಿದಂತಾಗಿದೆ. ಬೈಕ್ ಇದೀಗ ಮರದಡಿ ಅಪ್ಪಚ್ಚಿಯಾಗಿದ್ದು ತೆರವುಗೊಳಿಸುವ ಕಾರ್ಯ…

Read More

ತೀರ್ಥಹಳ್ಳಿ : ಎಬಿವಿಪಿ ತಾಲೂಕು ಅಧ್ಯಕ್ಷನ ಮೇಲೆ ಯುವಕರಿಂದ ಹಲ್ಲೆ!!!: ಲಘು ಲಾಠಿ ಪ್ರಹಾರ

ತೀರ್ಥಹಳ್ಳಿ : ಎಬಿವಿಪಿ ತಾಲೂಕು ಅಧ್ಯಕ್ಷ ಮತ್ತು ಆತನ ಸ್ನೇಹಿತನ ಮೇಲೆ 15 ಜನ ಯುವಕರು ಹಲ್ಲೆ ನಡೆಸಿದ್ದು ಗಲಾಟೆಯನ್ನ ಬಿಡಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿರುವ ಘಟನೆ ಪಟ್ಟಣದ ಬಾಳೆಬೈಲು ಸಮೀಪ ಇಂದು ನಡೆದಿದೆ. ತೀರ್ಥಹಳ್ಳಿಯ ಜಿಪಿಎಸ್ ಸಿ ಕಾಲೇಜಿನಲ್ಲಿ ಬಿಸಿಎ ಓದುತ್ತಿರುವ ಹಾಗೂ ಎಬಿವಿಪಿ ಸಂಘಟನೆಯ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡ ಮಳೆ ಅಧಿಕವಾಗಿರುವುದರಿಂದ ಮನೆಗೆ ತೆರಳಲು ಸ್ನೇಹಿತನಿಗೆ ಕಾರು ತರಲು ಹೇಳಿರುತ್ತಾನೆ. ಅದೇ ಸಮಯಕ್ಕೆ ನಿಶಾಂತ್ ಟಾಟಾ ಇಂಡಿಕಾ ಕಾರನ್ನ ತಂದಿದ್ದಾನೆ….

Read More

ಸೂಡೂರು ಸಮೀಪ ಟ್ಯಾಂಕರ್ ಹಾಗೂ ಇನ್ನೊವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :

ಪೆಟ್ರೋಲ್ ಟ್ಯಾಂಕರ್ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರಿನಲ್ಲಿರುವ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸೂಡೂರು ಸಮೀಪದ ತಿರುವಿನಲ್ಲಿ ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆಗೆ ತೆರಳುತಿದ್ದ ಪೆಟ್ರೋಲ್ ಟ್ಯಾಂಕರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಗೆ ತೆರಳುತಿದ್ದ ಇನ್ನೋವ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿವೆ. ಕಾರಿನಲ್ಲಿ ಪ್ರಯಾಣ ಮಾಡುತಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಆದರೆ ಪ್ರಾಣಾಪಾಯವಿಲ್ಲವೆಂದು ತಿಳಿದು ಬಂದಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪ್ರಕರಣ…

Read More

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು ಕೋಣಂದೂರು: ಬೈಕ್ ಸವಾರನೊಬ್ಬರು ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಚಂದ್ರ (60) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಬೈಕ್ನಲ್ಲಿ ಚಲಿಸುತ್ತಿರುವಾಗ ತನ್ನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದಾಗಿ ರಾಮಚಂದ್ರ ಅವರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅವರು…

Read More

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE

ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ : ನಾಳೆ ಬೆಳಗ್ಗೆ ರಾಜ್ಯಾಧ್ಯಕ್ಷರನ್ನ‌ ಬದಲಿಸಿದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ. ಈಶ್ವರಪ್ಪ ಸ್ಪರ್ಧೆಯಿಂದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದದರೆ ನಾನು ಸ್ಪರ್ಧಿಸಿ ಏನು ಮಾಡಲಿ ಎಂದು  ಕೆ ಎಸ್ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿದ ಅವರು ಅಮಿತ್ ಶಾ ಕರೆ ಮಾಡಿದ್ರು. ಅವರಿಗೆ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿಯಲ್ಲಿ ಬೆಳೆಯುತ್ತಿದೆ. ಅಪ್ಪಮಕ್ಕಳ ಕೈಯಲ್ಲಿರುವ ಪಕ್ಷವನ್ನ‌ ಮುಕ್ತಿಗೋಳಿಸಬೇಕಿದೆ…

Read More

ಹುಂಚಾ ಕೃಷಿ ಪತ್ತಿನ ಸಹಕಾರ ಸಂಘ 7 ಲಕ್ಷ ರೂ ನಿವ್ವಳ ಲಾಭ | ಗೊಂದಲಗಳ ನಡುವೆ ಸುಖಾಂತ್ಯಗೊಂಡ ವಾರ್ಷಿಕ ಸರ್ವ ಸದಸ್ಯರ ಸಭೆ

ರಿಪ್ಪನ್‌ಪೇಟೆ;- ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2021-22 ನೇ ಸಾಲಿನಲ್ಲಿ 4.22 ಕೋಟಿ ರೂ ವ್ಯವಹಾರ ನಡೆಸುವುದರೊಂದಿಗೆ 7.72.109 ಲಕ್ಷ ರೂ ನಿವ್ವಳ ಲಾಭ ಗಳಿಸಿದೆ ಎಂದು ಕೃಷಿ ಸಹಕಾರ ಬ್ಯಾಂಕ್ ಅಧ್ಯಕ್ಷ ಹೆಚ್.ಎಸ್.ಯದುಕುಮಾರ್ ಹೊಂಡಲಗದ್ದೆ  ತಿಳಿಸಿ ಮುಂದಿನ ದಿನಗಳಲ್ಲಿ ಸಂಘವನ್ನು ಉತ್ತುಂಗಕ್ಕೆ ತರುವ ಬಗ್ಗೆ ಹಲವು ಅಶೋತ್ತರಗಳನ್ನು ಇಟ್ಟುಕೊಂಡಿದ್ದು ಸಂಘದ ಸದಸ್ಯರು ಪ್ರೋತ್ಸಾಹಿಸಿದಲ್ಲಿ ಸಂಘವನ್ನು ಲಾಭದತ್ತ ತರುವ ಗುರಿ ನಮ್ಮದಾಗಿದೆ ಎಂದರು. ರಿಪ್ಪನ್‌ಪೇಟೆ  ಸಮೀಪದ ಹುಂಚಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ…

Read More

ತೀರ್ಥಹಳ್ಳಿ : ಆತಂಕಕ್ಕೆ ಕಾರಣವಾಗಿದ್ದ ಚಿರತೆಯ ಮೃತದೇಹ ಮಲ್ಲೇಸರ ಅರಣ್ಯ ಪ್ರದೇಶದಲ್ಲಿ ಪತ್ತೆ|leopard

ತೀರ್ಥಹಳ್ಳಿ- ಮಲ್ಲೇಸರ ಸಿಂದೋಡಿ ಬಳಿಯ ಅರಣ್ಯ ಸಮೀಪದಲ್ಲಿ ಚಿರತೆಯ ಮೃತದೇಹ ಪತ್ತೆ !! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಲ್ಲೇಸರ ಗ್ರಾಮದಲ್ಲಿ ಕಳೆದ ಕೆಲ ತಿಂಗಳಿನಿಂದ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯ ಮೃತದೇಹ ಪತ್ತೆಯಾಗಿದೆ. ಹಲವಾರು ತಿಂಗಳಿನಿಂದ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆಹಿಡಿಯಲು ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಬೋನನ್ನು ಸಿದ್ದಪಡಿಸಿ ಇಟ್ಟಿದ್ದರು. ಆದರೂ ಚಿರತೆಯ ಚಲವಲನದ ಕುರಿತು ಯಾವುದೇ ಮಾಹಿತಿ ಸಿಕ್ಕಿರಲಿಲ್ಲ ಆದರೆ ಇಂದು ಚಿರತೆ ಸೆರೆಹಿಡಿಯಲು ಇಟ್ಟಿದ್ದ ಬೋನಿನ ಸಮೀಪದ ಅರಣ್ಯದಲ್ಲಿ ಚಿರತೆಯ…

Read More