Headlines

ರಸ್ತೆ ಮೇಲೆ ಹರಿಯುವ ಮಳೆ ನೀರು..!ರಸ್ತೆ ತಡೆದು ಪ್ರತಿಭಟನೆಯ ಎಚ್ಚರಿಕೆ:ಗ್ರಾಪಂ ಸದಸ್ಯ ಸುಂದರೇಶ್ ಟಿ.

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆ ಯಲ್ಲಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿಗಳು ಫಜೀತಿಗೊಳಗಾಗುತ್ತಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ  ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಯಾಗುತ್ತಿದೆ ಇದರ ಬಗ್ಗೆ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಚರಂಡಿಯ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಮನವಿ…

Read More

ಮರ ಬಿದ್ದು ರಸ್ತೆ ಸಂಚಾರ ಹಾಗೂ ವಿದ್ಯುತ್ ಸಂಪರ್ಕ ಕಡಿತ:

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಪೂಜಾರದಿಂಬ ಎಂಬಲ್ಲಿ  ರಸ್ತೆ ಮೇಲೆ ಮರ ಬಿದ್ದು ಬಟ್ಟೆಮಲ್ಲಪ್ಪ ರಿಪ್ಪನ್ ಪೇಟೆ ರಸ್ತೆಸಂಪರ್ಕ ಕಡಿತಗೊಂಡಿದೆ.  ಮರ ಬಿದ್ದ ಸ್ಥಳದಲ್ಲಿ ವಿದ್ಯುತ್ ಕಂಬವಿದ್ದು, ವಿದ್ಯುತ್ ವಯರ್ ಗಳು ತುಂಡಾಗಿ ಬಿದ್ದಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಸಂಬಂಧಪಟ್ಟ ಇಲಾಖೆ ಸೂಕ್ತಕ್ರಮ ಕೈಗೊಂಡು ವಿದ್ಯುತ್ ಸಂಪರ್ಕ ಸರಿಪಡಿಸುವುದರೊಂದಿಗೆ, ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ರಿಪ್ಪನ್ ಪೇಟೆ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ…

Read More

ರಿಪ್ಪನ್ ಪೇಟೆ:ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರ ಗುರುಸ್ಮರಣೆ

ರಿಪ್ಪನ್ ಪೇಟೆ : ಇಲ್ಲಿಯ ಗೌಡಸಾರಸ್ವತ ಕಲ್ಯಾಣ ಮಂದಿರದಲ್ಲಿ ಮಂಗಳವಾರದಂದು ಗೌಡ ಸಾರಸ್ವತ ಸಮಾಜ ಬಾಂಧವರು ಸಭೆ ಸೇರಿ ಸೋಮವಾರ ಹರಿಪಾದ ಸೇರಿದ ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ  ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ಒಡೆರ್ ಸ್ವಾಮೀಜಿಯವರ ಪುಣ್ಯಸ್ಮರಣ ಕಾರ್ಯಕ್ರಮ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ  ಮಂಜುನಾಥ ಕಾಮತ್ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜ ಸ್ಥಾಪನೆಗೆ  ಪೂಜ್ಯರು ಕಾರಣರಾಗಿದ್ದನ್ನು ಸ್ಮರಿಸಿದರು. ಪೂಜ್ಯರ ಮಠಕ್ಕೂ ರಿಪ್ಪನ್ ಪೇಟೆ ಗೌಡ ಸಾರಸ್ವತ ಸಮಾಜಕ್ಕೂ ಅನೇಕ ಕಾಲದಿಂದಲೂ…

Read More

ಜಿಲ್ಲಾ ಪಂಚಾಯತ್ ಚುನಾವಣೆ2021:ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧ : ಎನ್.ಸತೀಶ್.

 ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಪಂಚಾಯತಿ ಕ್ಷೇತ್ರವಾದ ರಿಪ್ಪನ್ ಪೇಟೆಯಿಂದ ಈ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಆಸಕ್ತಿಯನ್ನು ಹೊಂದಿದ್ದೇನೆ ಎಂದು ಸಮಾಜ ಸೇವಕ ಹಾಗೂ ರಿಪ್ಪನ್ ಪೇಟೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸತೀಶ್ ಹೇಳಿದ್ದಾರೆ.  ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಬಾರಿ ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತಿ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾಗಿದ್ದು ನಾನು ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದು ಬಿಜೆಪಿ…

Read More

ರಿಪ್ಪನ್ ಪೇಟೆ: ಫಲಿತಾಂಶಕ್ಕೆ ಹೆದರಿ SSLC ವಿಧ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದ ವಿಧ್ಯಾರ್ಥಿ ಅಂಕಗಳು ಕಡಿಮೆ ಬರಬಹುದೆಂದು ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ  ಎಸ್ಎಸ್ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದ ಕೆಂಚನಾಲದ ವಿಧ್ಯಾರ್ಥಿನಿಯೊಬ್ಬಳು ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು  ಮನೆಗೆ ತೆರಳಿ  ಫಲಿತಾಂಶದಲ್ಲಿ ಕಡಿಮೆ ಅಂಕ ಬರಬಹುದು ಎಂದು ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಕೂಡಲೇ ಸಂಬಂಧಿಕರು ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ…

Read More

ಕೊರೊನಾ ನಡುವೆ ಯಶಸ್ವಿಯಾಗಿ ನಡೆದ ಮೊದಲ ಹಂತದ SSLC ಪರೀಕ್ಷೆ :

ಆನಂದಪುರ: ಕೊರೋನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು ಮೊದಲನೇ ದಿನ ಯಶಸ್ವಿಯಾಗಿ ನೆರವೇರಿತು. ಸರ್ಕಾರ ಪರೀಕ್ಷೆ ನಡೆಸಬೇಕೋ ನಡೆಸಬಾರದೋ ಎಂಬ ಗೊಂದಲದಿಂದ ಅಂತೂ ದಿನಾಂಕವನ್ನು ಫಿಕ್ಸ್ ಮಾಡಿ ಪರೀಕ್ಷೆಯನ್ನು ನಡೆಸಿತು. ಸಾಗರ ತಾಲ್ಲೂಕ್ ಹಾಗೂ ಹೊಸನಗರ ತಾಲೂಕಿನಾದ್ಯಂತ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಿಗೆ ಬೆಳಿಗ್ಗೆನೇ ವೈದ್ಯಕೀಯ ಪರೀಕ್ಷೆ ನಡೆಸಿ ಥರ್ಮಲ್ ಸ್ಕ್ಯಾನಿಂಗ್ ನೊಂದಿಗೆ ಮಾಸ್ಕ್ ವಿತರಿಸಿ ಪ್ರತಿ ಕೊಠಡಿಗೆ ಹನ್ನೆರಡು ವಿದ್ಯಾರ್ಥಿಗಳಂತೆ ಪರೀಕ್ಷೆ ಬರೆಸಲಾಯಿತು. ವಿಶೇಷವಾಗಿ ವಿದ್ಯಾರ್ಥಿಗಳಿಗೆ ನೀರಿನ…

Read More

ಕರ್ನಾಟಕ ದಲ್ಲಿ SSLC ಪರೀಕ್ಷೆ :ಸಾಗರದ ವಿದ್ಯಾರ್ಥಿಗಳಿಗೆ ಶಾಸಕ ಹರತಾಳು ಹಾಲಪ್ಪ ರವರಿಂದ ಮಾಸ್ಕ್ ಕೊಟ್ಟು ‌ಶುಭ ಹಾರೈಕೆ

ಸಾಗರ : ಎಸ್ಎಸ್ಎಲ್ಸಿ‌ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ  ಶುಭ ಹಾರೈಸಿದ ಶಾಸಕರಾದ ಹರತಾಳು ಹಾಲಪ್ಪ ರವರು ಸಾಗರದ ಸರ್ಕಾರಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಿ ಸ್ವಾಗತಿಸಿ ಗಮನ ಸೆಳೆದಿದ್ದಾರೆ. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳು‌ ಅಂಜಿಕೊಳ್ಳುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಆರೋಗ್ಯ ದಲ್ಲಿ ಏರುಪೇರು ಇದ್ದರೆ ಕೂಡಲೆ ಶಾಲೆ ಮುಖ್ಯಸ್ಥರ ಗಮನಕ್ಕೆ ತನ್ನಿ ನಾವು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡುತ್ತೇವೆ ಸಾಗರ ಶಾಸಕ ಹರತಾಳು ಹಾಲಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ನೀಡಿ,…

Read More

ಎಡೆಬಿಡದೆ ಸುರಿದ ಮಳೆಗೆ ಕೋಡಿ ಹರಿದು ಜಮೀನುಗಳು ಜಲಾವೃತ !!

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕಜೇನಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಬಪ್ಪಿಗ  ಹಾಗೂ ಕಲ್ಲುಗಟ್ಟ ಸಂಪರ್ಕ ರಸ್ತೆಯ ನಾರಾಯಣಯ್ಯ ಅವರ ಮನೆ ಹತ್ತಿರ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹತ್ತಿರದ ತಾವರೆಕೆರೆ ತುಂಬಿ ಕೋಡಿ ಹರಿದಿದ್ದು ಗದ್ದೆಗಳು ನೀರಿನಲ್ಲಿ ಮುಳುಗಿದ್ದು ಜನರು ಓಡಾಡುವ ಸಂಪರ್ಕ ರಸ್ತೆಯೂ ಸಹ ನೀರಿನಿಂದ ಜಲಾವೃತವಾಗಿದೆ.ಈ ಮಾರ್ಗದಲ್ಲಿ ಓಡಾಡುವ ಜನರು ಹಾಗೂ ಬೈಕ್ ಸವಾರರು ಈ ರಸ್ತೆಯಲ್ಲಿ  ಬಿದ್ದು ಕೈಕಾಲು ಮುರಿದುಕೊಂಡ  ಪ್ರಕರಣಗಳು ನಡೆದಿವೆ.  ಈ ಸಂಪರ್ಕ ರಸ್ತೆ ಹಾಗೂ…

Read More

ರಿಪ್ಪನ್ ಪೇಟೆಯ ಸಮೀಪದ ಅರಸಾಳು ಬಳಿ ಕಾರು ಬಸ್ಸು ಮುಖಾಮುಖಿ ಡಿಕ್ಕಿ:

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಬಳಿ ಬಸ್ ಹಾಗೂ ಕಾರ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ‌. ಶಿವಮೊಗ್ಗದಿಂದ ರಿಪ್ಪನ್ ಪೇಟೆ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಕಾರ್ ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಇಬ್ಬರು ಮಕ್ಕಳಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರೂ ಸಾಗರ ಮೂಲದವರೆಂದು ತಿಳಿದುಬಂದಿದೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಕಡೆ ತೆರಳುತ್ತಿದ್ದ…

Read More

ಗೋಡೆ ಕುಸಿತ ಪ್ರಕರಣ: 24ಕ್ಕೇರಿದ ಸಾವಿನ ಸಂಖ್ಯೆ,ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಮುಂಬೈ: ಮಹಾಮಳೆಯ ಕಾರಣದಿಂದ ಮುಂಬೈನ ಚೆಂಬೂರ್ ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿದ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಹಲವರನ್ನು ಇದುವರೆಗೆ ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ನಗರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನರು ಮುಕ್ತವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಮಹಾನಗರ ಪಾಲಿಕೆ ಬಿಎಂಸಿ ಪ್ರಕಾರ ಭಾನುವಾರ ಬೆಳಿಗ್ಗೆ ವಿಖ್ರೋಲಿ ಪ್ರದೇಶದಲ್ಲಿ ಗ್ರೌಂಡ್-ಪ್ಲಸ್ ಒನ್ ವಸತಿ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಚೆಂಬೂರಿನ ಭಾರತ್ ನಗರ ಪ್ರದೇಶದಿಂದ ಹದಿನೈದು ಜನರನ್ನು ಮತ್ತು ವಿಕ್ರೊಲಿಯ ಸೂರ್ಯನಗರದ ಒಂಬತ್ತು…

Read More