ರಸ್ತೆ ಮೇಲೆ ಹರಿಯುವ ಮಳೆ ನೀರು..!ರಸ್ತೆ ತಡೆದು ಪ್ರತಿಭಟನೆಯ ಎಚ್ಚರಿಕೆ:ಗ್ರಾಪಂ ಸದಸ್ಯ ಸುಂದರೇಶ್ ಟಿ.
ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆ ಯಲ್ಲಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿಗಳು ಫಜೀತಿಗೊಳಗಾಗುತ್ತಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಯಾಗುತ್ತಿದೆ ಇದರ ಬಗ್ಗೆ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಚರಂಡಿಯ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಮನವಿ…