Headlines

RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು. ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ…

Read More

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ಥ ರೈತರೊಬ್ಬರು ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವ ಘಟನೆ ತಾಲೂಕಿನ ಚಿತ್ರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರಾವತಿ ಮುಳುಗಡೆ ಸಂತ್ರಸ್ಥ ರೈತರಾದ ನಿಡುಗೋಡು ರಾಮಪ್ಪ ಹಾಗೂ ಹಾಡಿಕೇವಿ ಈಶ್ವರ ಎಂಬುವವರು ಸಾಗುವಳಿ ಮಾಡುತ್ತಿದ್ದ ಜಮೀನುಗಳನ್ನು ತೆರವು ಮಾಡಿದ್ದಾರೆ. ರೈತರಾದ ನಿಡುಗೋಡು ರಾಮಪ್ಪ ಎಂಬುವವರ ತಮ್ಮ ಸಾಗುವಳಿ ಭೂಮಿಯಲ್ಲಿ 350 ಅಡಿಕೆ ಗಿಡ,100 ಕಾಫಿ ಗಿಡ,25 ತಾಳೆ ಗಿಡ,50…

Read More

ಸಾಲಭಾದೆಗೆ ಬೇಸತ್ತು ವಿಷ ಸೇವಿಸಿ ರೈತ ಸಾವು|Debt

ಸೊರಬ: ರೈತನೊರ್ವ ಸಾಲಬಾಧೆಯಿಂದ  ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.  ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ ನಲ್ಲಿ 8 ಲಕ್ಷ ರೂ., ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ., ಸೇರಿ ಒಟ್ಟು 15 ಲಕ್ಷ ರೂ….

Read More

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

ತೀರ್ಥಹಳ್ಳಿ : ಹನಿಟ್ರ್ಯಾಪ್ ಮೂಲಕ ಸೆರೆ ಸಿಕ್ಕ ಒಂಟಿ ಸಲಗ – ಬಂಡೀಪುರ ಅಭಯಾರಣ್ಯಕ್ಕೆ ಪುಂಡಾನೆಯ ರವಾನೆ|elephant

ತೀರ್ಥಹಳ್ಳಿ : ಪಟ್ಟಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.  ತಾಲೂಕಿನ ದೇವಂಗಿಯ ಮಳೂರು ಕಾಡಿನಲ್ಲಿ ಆನೆ ಸೆರೆ ಹಿಡಿಯಲಾಯಿತು. ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಕ್ರೆಬೈಲು ಬಿಡಾರದ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆನೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಆನೆಗೆ ಚುಚ್ಚು ಮದ್ದಿನ ಇಂಜೆಕ್ಷನ್ ಡಾರ್ಟ್ ಮಾಡಿ ಸೆರೆ ಹಿಡಿದಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಈ ಕಾಡಾನೆ ತೀರ್ಥಹಳ್ಳಿ ಪಟ್ಟಣದೊಳಗೆ ನುಗ್ಗಿತ್ತು….

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಈಗಾಗಲೇ ಒಬ್ಬರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನ ಡೆಂಗ್ಯೂ ಜ್ವರದಿಂದ ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪಟ್ಟಣದ ಎಲ್ಲ ಖಾಸಗಿ ಮೆಡಿಕಲ್ ಶಾಪ್ ಗಳಿಗೆ ತೆರಳಿ ವೈದ್ಯರ ಚೀಟಿಯಿಲ್ಲದೇ ಜ್ವರ ಸಂಬಂಧಿತ ಖಾಯಿಲೆಗಳಿಗೆ…

Read More

ವಿದ್ಯುತ್ ತಂತಿ ತಗುಲಿ ಮೂರು ವರ್ಷದ ಮಗು ಸಾವು :

ವಿದ್ಯುತ್  ತಂತಿ ಬೇಲಿಯ ಮೇಲೆ ಕೇಬಲ್ ಬಿದ್ದಿದ್ದು  ಕೇಬಲ್ ನ್ನು ಮೂರು ವರ್ಷದ ಹೆಣ್ಣು ಮಗು ಮುಟ್ಟಿದ್ದರ ಪರಿಣಾಮ  ಮಗು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಮನೆ ಬಳಿ ಹಾಕಿರುವ ವಿದ್ಯುತ್ ತಂತಿ ಬೇಲಿಯ ಮೇಲೆ ಟಿವಿ ಕೇಬಲ್ ಹರಿದು ಬಿದ್ದಿದೆ. ಈ ಕೇಬಲ್ ನ್ನ ಆಟಾಡುವ ವೇಳೆ ಮಗು  ಮುಟ್ಟಿದ ಹಿನ್ನಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಸಾವುಕಂಡಿದೆ. ತಂತಿ ಬೇಲಿ ಮೇಲೆ ಕೇಬಲ್ ತುಂಡಾಗಿ ಬಿದ್ದಿದ್ದರಿಂದ ಕೇಬಲ್…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ MSIL ಉದ್ಯೋಗಿ ನವೀನ್ ಕುಮಾರ್ ಕುಟುಂಬಕ್ಕೆ 5 ಲಕ್ಷದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ ಪಟ್ಟಣದ MSIL ಮದ್ಯ ಮಾರಾಟ ಮಳಿಗೆಯಲ್ಲಿ ADO ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರಸಾಳು ನಿವಾಸಿ ನವೀನ್ ಕುಮಾರ್ ರವರ ಕುಟುಂಬಕ್ಕೆ MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ರವರು MSIL ವತಿಯಿಂದ 5 ಲಕ್ಷ ರೂ ಪರಿಹಾರ ಧನದ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು. ಇತ್ತೀಚೆಗೆ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ…

Read More

ಐದು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಕಠಿಣ ಶಿಕ್ಷೆ ಪ್ರಕಟ

ತೀರ್ಥಹಳ್ಳಿ : ಐದು ವರ್ಷ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC–II (POCSO) 20 ವರ್ಷ ಕಠಿಣ ಶಿಕ್ಷೆ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. 2020 ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 05 ವರ್ಷದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವೊಂದು ತನ್ನ ಮನೆಯಲ್ಲಿ ಆಟವಾಡುತ್ತಾ ಇದ್ದಾಗ ವೆಂಕಟೇಶ್ ಎಂಬುವವನು ಸದರಿ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿತ್ತು. ಘಟನೆಯ ಬಗ್ಗೆ…

Read More