Headlines

ಬೈಕ್ ಅಪಘಾತ – ಯುವಕ ಸಾವು

ಬೈಕ್ ಅಪಘಾತ – ಯುವಕ ಸಾವು ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ…

Read More

ಅಪ್ಪು ನಮನ ಕಾರ್ಯಕ್ರಮದಲ್ಲಿ ಇಡೀ ಊರೂರಿಗೆ ಬಾಡೂಟ ಬಡಿಸಿ ಅಭಿಮಾನ ಮೆರೆದ ಚನ್ನಶೆಟ್ಟಿಕೊಪ್ಪ ಗ್ರಾಮಸ್ಥರು :

ಕರ್ನಾಟಕದ ಪವರ್ ಸ್ಟಾರ್ ಅಪ್ಪು ನಮ್ಮನ್ನ ಅಗಲಿ ಈಗಾಗಲೇ ಒಂದೂವರೆ ತಿಂಗಳು ಕಳೆದಿದೆ ಆದರೆ ಅವರ ಸಾಧನೆ ಸಾರ್ಥಕತೆ ಹಾಗೂ ಅವರ ದಾನ ಧರ್ಮದ ಕಾರ್ಯಗಳು ಎಂದು ಕೂಡ ನಮ್ಮ ಹೃದಯದಲ್ಲಿ ಅಚ್ಚಳಿಯದೆ ಉಳಿಯುತ್ತದೆ. ಕರ್ನಾಟಕದ ದೊಡ್ಮನೆ ಹುಡುಗನ ಹೆಸರಿನಲ್ಲಿ ಇದೀಗ ರಾಜ್ಯಾದ್ಯಂತ ಗಲ್ಲಿಗಲ್ಲಿಗಳಲ್ಲಿ ಸರ್ಕಲ್ ಸರ್ಕಲ್ ಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಅಪ್ಪು ಹೆಸರನ್ನು ನಾಮಕರಣ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಇದೀಗ ಚನ್ನಶೆಟ್ಟಿಕೊಪ್ಪ ವೃತ್ತಕ್ಕೆ ಪುನೀತ್…

Read More

ಗಡಿ ಗುರುತಿಗೆ ಬಂದ ಅರಣ್ಯಾಧಿಕಾರಿಗಳು – ಜಮೀನು ಕಳೆದುಕೊಳ್ಳುವ ಭಯದಲ್ಲಿ ರೈತ ಸಾವು|forest

ಅರಣ್ಯ ಇಲಾಖೆ ಅಧಿಕಾರಿಗಳು ಈಗ ರೈತರ ಸ್ವಾಧೀನದಲ್ಲಿರುವ ಜಾಗದಲ್ಲಿ ಅರಣ್ಯ ಗಡಿ ಗುರುತು ಹಾಕಲು ಬಂದಿದ್ದನ್ನು ನೋಡಿ, ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಮಂಜಪ್ಪ ಎಂಬವರೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟವರು. ಅವರಿಗೆ ಸೇರಿದ ಜಾಗದ ಅರಣ್ಯ ಇಲಾಖೆ ಅಧಿಕಾರಿಗಳು ಗಡಿಗುರುತಿನ ಬಾಂದ್‌ ಕಲ್ಲು ಹಾಕಿದ್ದರಿಂದ ಅವರು ಆತಂಕಿತರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿ ಸಂರಕ್ಷಣೆಯ ಭಾಗವಾಗಿ ಗಡಿ…

Read More

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ|araga

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ –  ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ…

Read More

ರಿಪ್ಪನ್‌ಪೇಟೆ : ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್

ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್ ರಿಪ್ಪನ್‌ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್‌ಗಳೇ ಸಾಕ್ಷಿಕರಿಸುತ್ತಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ…

Read More

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ ತೀರ್ಥಹಳ್ಳಿ : ಮನೆಯ ಹಿಂಭಾಗ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಹುತ್ತಳ್ಳಿ ಗ್ರಾಮದ ಗುರುಮೂರ್ತಿ ಬಂಧಿತ ಆರೋಪಿಯಾಗಿದ್ದು 2.50000 ಲಕ್ಷ ಮೌಲ್ಯದ ಹಸಿ…

Read More

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

Ripponpete | ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 117ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌. ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ…

Read More

ಜಾತ್ರೆಗೆ ತೆರಳುವಾಗ ನಡೆಯಿತು ಭೀಕರ ಅಪಘಾತ : ನಾಲ್ವರು ಸ್ಥಳದಲ್ಲಿಯೇ ಸಾವು,ಏಳು ಜನ ಗಂಭೀರ

ಉಕ್ಕಡಗಾತ್ರಿ ಜಾತ್ರೆಗೆ ಹೊರಟಿದ್ದ ಶಿಕಾರಿಪುರದ ನಾಲ್ವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು 7 ಜನರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆನಾಲ್ಟ್ ಕ್ವಿಡ್ ಮತ್ತು ಟಾಟಾ ಇಂಡಿಕಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಉಕ್ಕಡಗಾತ್ರಿಯ ಬಳಿಯ ಕಡೂರು ಕ್ರಾಸ್ ಬಳಿ ಲಾರಿಗೆ ಎರಡೂ ಕಾರುಗಳು ಡಿಕ್ಕಿ ಹೊಡೆದಿದೆ.  ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಯಗೊಂಡಿದ್ದ 7 ಜನರನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಶಿಕಾರಿಪುರ ತಾಲೂಕಿನ ಮಾಯತಮ್ಮನ ಮುಚೂಡಿಯ ಶಾಂತ(30), ಪೃಥ್ವಿ(12) ಕರ್ನಹಳ್ಳಿಯ ಸದಾ(10)ಮತ್ತಿಕೋಟೆಯ ಶಂಕರ ಗೌಡ(37), ಈ ನಾಲ್ವರೂ…

Read More