ಆನಂದಪುರದ ಬಳಿ ಮಧ್ಯ ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್ |Fire
ಕೆಟ್ಟು ನಿಂತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಬಸ್ ಸುಟ್ಟು ಹೋಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ಬಳಿ ಘಟನೆ ಸಂಭವಿಸಿದೆ. ಖಾಸಗಿ ಬಸ್ ಕೆಟ್ಟು ರಸ್ತೆ ಬದಿ ನಿಂತಿತ್ತು. ಇವತ್ತು ರಿಪೇರಿ ಕೆಲಸ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿಕೊಂಡಿದೆ. ಕಳೆದ ಎರಡು ದಿನಗಳಿಂದ ಸಾಗರದ ಗಜಾನನ ಸಾರಿಗೆ ಬಸ್ ಆನಂದಪುರದ ರೈಲ್ವೆ ಗೇಟ್ ಹತ್ತಿರ ಕೆಟ್ಟು ನಿಂತಿತ್ತು.ಸೋಮವಾರ ಬೆಳಗಿನ ಜಾವ…


