ಶಿವಮೊಗ್ಗ ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ

ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಿದರು. ನಗರದಲ್ಲಿ ಮೆರವಣಿಗೆ ಸಾಗುವ ಹಾದಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲಿದ್ದು,. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ರ್‍ಯಾಪಿಡ್ ಆಕ್ಷನ್ ಫೋರ್ಸ್ ಸಹ ಬೀಡುಬಿಟ್ಟಿದೆ. ಗಾಂಧಿ ಬಜಾರ್, ಸೇರಿದಂತೆ ಹಲವು ಕಡೆಗಳಲ್ಲಿ ಪ್ರಸಾದ ವಿನಿಯೋಗ,…

Read More

ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರನ ಕಾಲು ಮುರಿತ..!!!!|accident

ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬನ ಕಾಲು ಮುರಿತವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನನಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಿರಸಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ಸಾಗುತ್ತಿದ್ದ ಕಾರಿನ ನಡುವೆ ಐಗಿನ ಬೈಲ್ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ…

Read More

ಶಿವಮೊಗ್ಗದಲ್ಲಿ ರೌಡಿಗಳಿಂದ ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ – ಇಬ್ಬರ ಬಂಧನ | ವೀಡಿಯೋ ವೈರಲ್ SMG

ಸಾರ್ವಜನಿಕವಾಗಿ ರೌಡಿ ಪಟಾಲಂಗಳು ಶಿವಮೊಗ್ಗದಲ್ಲಿ ಮತ್ತೆ ಗರಿಬಿಚ್ಚಿದ್ದು, ಹಾಡಹಗಲೇ, ಅದರಲ್ಲೂ ಪೊಲೀಸ್ ಸಿಬ್ಭಂದಿ ಮೇಲೆ ಮರ್ಡರ್ ಬೆದರಿಕೆ, ಅವಾಚ್ಯವಾಗಿ ಬೈದು ಧಮ್ಕಿ ಹಾಕಿರುವ ಘಟನೆ ಸದ್ಯ ಮಲೆನಾಡಿನಲ್ಲಿ ಸಂಚಲನ ಮೂಡಿಸಿದೆ. ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರಿಗೇ ಅವಾಜ್ ಹಾಕಲಾಗಿದೆ. ನಟೋರಿಯಸ್ ಹಿನ್ನೆಲೆಯುಳ್ಳ ಪುಡಾರಿಗಳು, ಟ್ರಾಫಿಕ್ ಪೊಲೀಸರು ಹಿಡಿಯುತ್ತಾರೆ ಅಂತಾ ತಾವೇ ಬೈಕಿನಲ್ಲಿ ಬಿದ್ದು, ತಾವೇ ವಿಡಿಯೋ ಮಾಡಿ ತಗಲಾಕಿಕೊಂಡಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಭಂಧಿಗೆ ಪ್ರಾಣ ಬೆದರಿಕೆ ಒಡ್ಡಿರುವ ರೌಡಿ ಶೀಟರ್ ಗಳು, ತಮ್ಮ ಹುಡುಗರನ್ನು ಕರೆಸಿ, ಹಲ್ಲೆ ಮಾಡಲು…

Read More

ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ

ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು  ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡನ ಬಂಧನ

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡ ಬಂಧನ A woman died by suicide in Soraba, allegedly due to harassment by her husband, a BJP leader and former municipal president. Police have arrested the accused and launched an investigation. ಸೊರಬ: ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೊರಬ ಪೊಲೀಸರು ಬಿಜೆಪಿ ಮುಖಂಡ ಹಾಗೂ…

Read More

ಬಡ ಬಾಲಕನ ಚಿಕಿತ್ಸೆಗೆ ವ್ಯವಸ್ಥೆ – ಮಾನವೀಯತೆ ಮೆರೆದ ಸಂಸದ ಬಿ ವೈ ರಾಘವೇಂದ್ರ|BYR

ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್‍ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಲೋ ಶುಗರ್‌ನಿಂದ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ…

Read More

ವಯೋವೃದ್ಧ ದಂಪತಿಗಳ ಅನುಮಾನಾಸ್ಪದ ಸಾವು – ಚಿನ್ನಾಭರಣ ನಾಪತ್ತೆ!

An elderly couple was found dead under suspicious circumstances in Bhadravati, Karnataka. Gold ornaments were reported missing. Police have launched an intensive investigation. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ತರಿಕೆರೆ ರಸ್ತೆಯ ಸೀರಾಕ್ ಹೋಟೆಲ್ ಹಿಂಭಾಗದ ಭೂತನಗುಡಿ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರ ಮನೆಯಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಇನ್ನಷ್ಟು ಗಂಭೀರತೆ ತಂದಿದೆ….

Read More

ರಿಪ್ಪನ್‌ಪೇಟೆ – ಓಮಿನಿ ಕಾರಿಗೆ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಅಪ್ಪಳಿಸಿದ ಎರ್ಟಿಗಾ ಕಾರು – ಸರಣಿ ಅಪಘಾತ|accident

ಓಮಿನಿ ಕಾರಿಗೆ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಅಪ್ಪಳಿಸಿದ ಕಾರು ರಿಪ್ಪನ್‌ಪೇಟೆ ; ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ರಿಪ್ಪನ್‌ಪೇಟೆ – ಹೊಸನಗರ ರಾಜ್ಯ ಹೆದ್ದಾರಿ ಕೋಡೂರಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆ ಚಲಿಸುತ್ತಿದ್ದ ಮಾರುತಿ ಎರ್ಟಿಗಾ ಕಾರು (KA15 N 8342) ದಿಢೀರನೆ ರಸ್ತೆಗೆ ಅಡ್ಡ ಬಂದ ಮಾರುತಿ ಓಮ್ನಿ ವಾಹನಕ್ಕೆ ಗುದ್ದಿದ ಪರಿಣಾಮ ಎರ್ಟಿಗಾ ಕಾರಿನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ…

Read More

ಶಿವಮೊಗ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿ ಸಾದಿಕ್ ಕೊಲೆ!

ಶಿವಮೊಗ್ಗ: ನಗರದ ಕಲ್ಲೂರು ಮಂಡ್ಲಿಯ ಸಮೀಪ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಮೃತ ದುರ್ದೈವಿ. ಕಲ್ಲೂರು ಮಂಡ್ಲಿಯ ತೋಟದಲ್ಲಿ  ಕೊಲೆ ನಡೆದಿರುವ ಸಾಧ್ಯತೆಯಿದೆ. ಸಾದಿಕ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರಕ್ಕೆ ಸಂಬಂದಿಸಿದಂತೆಯೇ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.  ತುಂಗಾನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.  

Read More
Exit mobile version