Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More

ಹೊಸನಗರದ ದಕ್ಷ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ:

ಹೊಸನಗರ :- ತಾಲ್ಲೂಕಿನಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ‌ ಹೆಸರಾಗಿರುವ ಪಿ.ಎಸ್.ಐ ರಾಜೇಂದ್ರನಾಯ್ಕ್ ರವರನ್ನು ಯಾವುದೇ ಕಾರಣಕ್ಕೂ ವರ್ಗಾಯಿಸಬಾರದು ಎಂದು ಸಾರ್ವಜನಿಕರಿಂದ ತಾಲ್ಲೂಕು ದಂಡಾಧಿಕಾರಿ (ತಹಶಿಲ್ದಾರ್) ಮೂಲಕ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕರಿಂದ ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ರವರಿಗೆ ಸಲ್ಲಿಸಿದ ಮನವಿಯಲ್ಲಿ ತಾಲ್ಲೂಕಿನಾಧ್ಯಂತ ಮರಳು ಮಾಫಿಯವಾಗಲಿ, ಡ್ರಕ್ಸ್ ಮಾಫಿಯಾ, ಹೆಣ್ಣುಮಕ್ಕಳಿಗೆ ಕೆಲಸದ ಆಮಿಷ ತೋರಿಸಿ ಅನೈತಿಕ ಸಂಬಂಧಗಳಿಗೆ ಬಳಸುವಂತಹಾ ಕ್ರೂರಿಗಳಿಗೆ, ಕಲ್ಲು ಕೋರೆ, ಗಾಂಜಾ ಸೇರಿದಂತೆ ವಿವಿಧ ರೀತಿಯ ಕಳ್ಳ ದಂದೆಯಲ್ಲಿ ತೊಡಗಿದವರಿಗೆ…

Read More

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ?

ಹುಲಿಕಲ್ ಘಾಟ್ ದುರಂತ: ಹೊಣೆಗಾರಿಕೆ ಕೇವಲ ಗುತ್ತಿಗೆದಾರನದೋ ಅಥವಾ ಇಡೀ ವ್ಯವಸ್ಥೆಯದ್ದೋ? ಲಕ್ಷಗಟ್ಟಲೆ ಸಂಬಳ ಪಡೆಯುವ ತಾಂತ್ರಿಕ ಅಧಿಕಾರಿಗಳು ಎಡವಿದ್ದೆಲ್ಲಿ? ಏಕಪಕ್ಷೀಯ ಆರೋಪಗಳ ಆಚೆಗೆ ನಿಂತು ನೋಡಬೇಕಾದ ವಾಸ್ತವಗಳು A deadly landslide at Hulikal Ghat in Shivamogga raises serious questions about accountability. Was it contractor negligence or systemic failure involving engineers and authorities? A deeper look beyond one-sided blame. ​ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳನ್ನು…

Read More

ತೀರ್ಥಹಳ್ಳಿ:ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ಜಾಥಾ

ತೀರ್ಥಹಳ್ಳಿ :ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಕಾಂಗ್ರೆಸ್ ವತಿಯಿಂದ  ನಡೆಯುತ್ತಿದ್ದು , ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ಶ್ರೀ  ಸಾಮಾನ್ಯ ಜನರ ಬಳಕೆಯ ವಸ್ತುಗಳಬೆಲೆಯನ್ನು ಯನ್ನು ನಿರಂತರವಾಗಿ  ಕೇಂದ್ರ ಸರಕಾರವು ಬೆಲೆ ಏರಿಕೆ ಇಂದು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ದಲ್ಲಿ ಪ್ರತಿಭಟನೆ ನಡೆಸಲಾಯಿತು.  ಶಿವ ರಾಜಪುರದ ಗಣಪತಿ ದೇವಸ್ಥಾನದ ಮುಂಭಾಗದಿಂದ ಸ್ವತಃ ಕಿಮ್ಮನೆ ರತ್ನಾಕರ್ ಅವರು ಸೈಕಲ್ ಏರಿ ಪಟ್ಟಣದ ತಾಲ್ಲೂಕು ಕಚೇರಿಯ ವರೆಗೆ…

Read More

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More

ಬಿದನೂರಿನಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ – ಪೂರ್ವಭಾವಿ ಸಭೆ|nagara

ಶಾಂತವೇರಿ ಗೋಪಾಲಗೌಡರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾರ್ಚ್ ತಿಂಗಳಲ್ಲಿ ನಡೆಸಲಿದ್ದು ಆ ಹಿನ್ನಲೆಯಲ್ಲಿ ಗೋಪಾಲಗೌಡ ಅಧ್ಯಯನ ವೇದಿಕೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಪ್ರಪ್ರಥಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ದಲ್ಲಿ ದಿವಂಗತ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ನಗರ ಭಾಗದ ಎಲ್ಲಾ ಪಕ್ಷದ ಸಮಾನ ಮನಸ್ಕ ಮುಖಂಡರ ಜೊತೆ ಚರ್ಚಿಸಲಾಯಿತು. ಜನವರಿ 30 ರಂದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು  ಗೋಪಾಲಗೌಡ ಅಭಿಮಾನಿಗಳು ಹಾಗೂ ಸಮಾನ ಮನಸ್ಕರ ಸಭೆ ಕರೆಯಲು…

Read More

Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ 18ನೇ ಮೈಲಿಕಲ್ಲು ಸಮೀಪದಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಚಾಲಕನ ಕಾಲು ಮುರಿದಿರುವ ಘಟನೆ ಗುರುವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಕಲ್ಲುಕೊಪ್ಪ ಗ್ರಾಮದ ಸತೀಶ್ ಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. 18ನೇ ಮೈಲಿಕಲ್ಲಿನ ಬಳಿಯಲ್ಲಿ ಮಾರುತಿ ಓಮಿನಿ ಕಾರು ಹಾಗೂ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ರಿಯಲ್ ಎಸ್ಟೇಟ್ ವಲಯಕ್ಕೆ ಆಘಾತ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ

Confident Group founder and real estate entrepreneur C.J. Roy was found dead at his Bengaluru office in an apparent suicide. Police suspect pressure following Income Tax raids as a possible reason. ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ (Confident Group) ಸಂಸ್ಥಾಪಕ-ಅಧ್ಯಕ್ಷ ಸಿ.ಜೆ. ರಾಯ್ ಅವರು ಶುಕ್ರವಾರ ಸಂಜೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ…

Read More

Hosanagara | ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ…

Read More