Headlines

ಜಿಲ್ಲಾ ಹಿಂದುಳಿದ ವರ್ಗ ಅಧಿಕಾರಿ ಕುಮಾರ್ ಹುಚ್ಚುತನಕ್ಕೆ ಬಲಿಪಶುಗಳಾದ ಮಹಿಳಾ ಅಡುಗೆಯವರು: ಹಣ್ಣು ತಿಂದವರಿಗಿಂತ ಸಿಪ್ಪೆ ತಿಂದವರಿಗೆ ಶಿಕ್ಷೆಯಾದ ಆನಂದಪುರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲಿನಲ್ಲಿ ನಡೆದ ರೋಚಕ ಸ್ಟೋರಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸಿದ್ದೇಶ್ವರ ಕಾಲೊನಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಹಾಸ್ಟೆಲ್ ವಾರ್ಡನ್ ಮಮತಾ ವಿದ್ಯಾರ್ಥಿಗಳಿಗೆ ನೀಡಿದ ಮೂವತ್ತು ಕ್ಕೂ ಹೆಚ್ಚು ಬೆಡ್ ಶೀಟ್ ಗಳನ್ನು ಬಚ್ಚಿಟ್ಟಿದ್ದರು.ಇದರಿಂದ ಮನನೊಂದ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಅವ್ಯವಹಾರ ನಡೆದಿದೆಯೆಂದು ಬಂದಂತಹ ಜನಪ್ರತಿನಿಧಿಗಳೆದರು  ದೂರಿದ್ದರು ಜನ ಜನಪ್ರತಿನಿಧಿಗಳ ಎದುರು ವಿದ್ಯಾರ್ಥಿಗಳು ಹಾಸ್ಟೆಲ್ ನ ವಾರ್ಡನ್ ಮಮತಾ ವಿರುದ್ಧ ಹಲವು ದೂರುಗಳನ್ನು ನೀಡಿದ್ದರು. ಬೆಡ್ ಶೀಟ್ ಗಳನ್ನು ಕಳೆದ 1ವರ್ಷದಿಂದ ನೀಡಿಲ್ಲ ಹಾಗೂ ಬಕೆಟ್ ಹಾಗೂ ಜಗ್ಗು…

Read More

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ :

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. 2019 ರ ಫೆ.10 ರಂದು ಬೆಳಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ (18) ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ….

Read More

ಸಾಗರದಲ್ಲಿ ಬಸ್ ಇಳಿಯುವಾಗ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವು : ಒಂದೇ ದಿನ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಸಾವು

ಬಸ್ ಇಳಿಯಲು ಹೊರಟಿದ್ದ ಪ್ರಯಾಣಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ಪಟ್ಟಣದ ಸಂಜೀವಿನಿ ಆಯುರ್ವೇದಿಕ್ ಆಸ್ಪತ್ರೆಯ ಬಳಿ ಸಂಭವಿಸಿದೆ. ಹೋಟೆಲ್ ಕೆಲಸಕ್ಕೆಂದು ಕಾರ್ಗಲ್ ಗೆ ತೆರಳಿದ್ದ ಮಹಾದೇವ ನಾಯ್ಕ್ ವಾಪಾಸ್ ಸಾಗರಕ್ಕೆ ಕುಮಧ್ವತಿ ಖಾಸಗಿ ಬಸ್ ನಲ್ಲಿ ಬಂದಿದ್ದಾರೆ. ಸಾಗರದ ಅಗಡಿಮಠ ಹತ್ತಿರ ಮನೆ ಮಾಡಿಕೊಂಡಿರುವ ಮಹದೇವ ನಾಯ್ಕ್ ಬಸ್ ಸಾಗರ ಕೆಎಸ್ ಆರ್ ಟಿ ಬಸ್ ನಿಲ್ದಾಣದ ಮುಂದೆ ಬರುತ್ತಿದ್ದಂತೆ ಸೀಟ್ ನಿಂದ ಎದ್ದು ಹಿಂಬದಿ ಡೋರ್ ಬಳಿ ಬಂದು ನಿಂತಿದ್ದಾರೆ. ಸಂಜೀವಿನಿ ಆಯುರ್ವೇದಿಕ್…

Read More

RIPPONPETE | ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್)

ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಗುಡ್ಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ಚಾರಣ(ಟ್ರೆಕ್ಕಿಂಗ್) ಮಾಡುವ ಮೂಲಕ ಜೇನುಕಲ್ಲಮ್ಮ ದೇವಿ ಆಶೀರ್ವಾದ ಪಡೆದರು. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿರುವ ದೇವಿಯ ಮೂಲ ಸ್ಥಾನವಿರುವ ಗುಡ್ಡಕ್ಕೆ ಪೊಲೀಸ್ ಸಿಬ್ಬಂದಿಗಳು ಚಾರಣ ( ಟ್ರೆಕ್ಕಿಂಗ್) ಮೂಲಕ ಸಾಗಿ ಮೂಲ ದೇವಸ್ಥಾನದ ದರ್ಶನ ಪಡೆದು ಆ ನಂತರ ಶ್ರೀ…

Read More

ನಾಳೆ(01-05-2023) ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್|ಬೇಳೂರು ಪರ ಚುನಾವಣಾ ಪ್ರಚಾರ

ರಿಪ್ಪನ್‌ಪೇಟೆ : ದಿನಾಂಕ 0152023 ರ ಸೋಮವಾರ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಮತ ಯಾಚಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ, ಹೊಸನಗರ,ಆನಂದಪುರ ಮತ್ತು ಸಾಗರಕ್ಕೆ ಆಗಮಿಸಲಿದ್ದಾರೆ. ಇಂದು ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ರವರ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಳೆ 10.30 ಕ್ಕೆ ಹೊಸನಗರ ,ಮಧ್ಯಾಹ…

Read More

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;- ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ೬.೧೨ ಕೋಟಿ ರೂಪಾಯಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಮತ್ತು ಕೈಗಾರಿಕಾಭಿವೃಧ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ  ಬೇಳೂರು ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಘೋಷಿಸಿದಂತೆ…

Read More

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಎರಡು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಪಂ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಮಕ್ಕಳನ್ನು ಬಾವಿಗೆ ದೂಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಲಭಿಸಿದೆ. ಎರಡು ಪುಟ್ಟ ಮಕ್ಕಳನ್ನು ಬಾವಿಗೆ ದೂಡಿ ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ಬುಧವಾರ( ಆ.7) ನಡೆದಿತ್ತು.ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12),…

Read More

ನಿಧನ ವಾರ್ತೆ: ಕೆರೆಹಳ್ಳಿ ಗ್ರಾಮದ ಕೃಷಿಕ ಅಶೋಕ್ ಇನ್ನಿಲ್ಲ

ರಿಪ್ಪನ್ ಪೇಟೆ : ಇಲ್ಲಿಯ ಕೆರೆಹಳ್ಳಿ ಗ್ರಾಮದ ನಿವಾಸಿ ಕೃಷಿಕ ಅಶೋಕ್ (39) ವರ್ಷ ಇವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆನ್ನೆ ದಿನ ಹೃದಯಾಘಾತಕ್ಕೆ ಒಳಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.  ಇವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಟಿ.ಸುಂದರೇಶ್ ಸೇರಿದಂತೆ ಐವರು ಸಹೋದರರು ಹಾಗೂ ಓರ್ವ ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಇವರ ನಿಧನಕ್ಕೆ ರಾಮೇಶ್ವರ ದೇವಸ್ಥಾನದ…

Read More

ಕಚ್ಚಿಗೆಬೈಲು ಗ್ರಾಮದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಪುತ್ಥಳಿ ಅನಾವರಣ :

ಹೊಸನಗರ : ಸಮೀಪದ ಕಚ್ಚಿಗೆಬೈಲು ಗ್ರಾಮದಲ್ಲಿ ಪುನೀತ್‌ ರಾಜ್‌ಕುಮಾರ್ ಪುತ್ಥಳಿ ಅನಾವರಣ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಹಾಗೂ ಇದೇ ಸಂಧರ್ಭದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಚ್ಚಿಗೆಬೈಲು ಮುಖ್ಯ ರಸ್ತೆಯಿಂದ ಸಂಪಳ್ಳಿ ಗ್ರಾಮದವರೆಗೂ   ಎತ್ತಿನಗಾಡಿ ಹಾಗೂ ಟ್ರಾಕ್ಟರ್ ಗಳ ಮೂಲಕ ಪುನೀತ್ ರಾಜ್‌ಕುಮಾರ್ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಈ ಸಂಧರ್ಭದಲ್ಲಿ ನಾಮಫಲಕ ಉದ್ಘಾಟಿಸಿದ ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಸ್ವಾಮಿಗಳಾದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು…

Read More