Headlines

ಶಿವಮೊಗ್ಗ ಕೃಷಿ ಕಾಲೇಜಿನ ಪ್ರೊಫೆಸರ್ ಚಿಕ್ಕಬಾಸೂರು ಕೆರೆಯಲ್ಲಿ ಶವವಾಗಿ ಪತ್ತೆ :

ಶಿವಮೊಗ್ಗ : ಇಲ್ಲಿನ ಕೃಷಿ ಕಾಲೇಜಿನ ಜಿ.ಪಿ.ಬಿ. ವಿಭಾಗದ ಮುಖ್ಯಸ್ಥರಾದ ಪ್ರೊ. ಗಂಗಾಪ್ರಸಾದ್ ಅವರ ಮೃತದೇಹ ಹೊನ್ನಾಳಿ ತಾಲೂಕಿನ ಸ ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಬಸವೇಶ್ವರ ನಗರದ ನಿವಾಸಿಯೂ, ಅಪಾರ ವಿದ್ಯಾರ್ಥಿಗಳ ಆಪ್ತ ಗುರುಗಳೂ ಆಗಿದ್ದ ಗಂಗಾಪ್ರಸಾದ್ (59) ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ.ಕೆರೆ ಮಗ್ಗುಲಲ್ಲಿ ಅವರ ಪ್ಯಾಂಟ್, ಚಪ್ಪಲಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡ( ವಿಜಯಪುರ) ಬಳಿ ಪತ್ತೆಯಾಗಿರುವ ಇವರ ಶವವನ್ನು ಕಾಲೇಜಿನ ವಿದ್ಯಾರ್ಥಿಯೋರ್ವ…

Read More

ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested

ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.  ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ. ಮಾರಾಟ ಮಾಡುವ…

Read More

ಹೊಸನಗರದ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ರೇಡ್ | Lokayukta Raid

ಹೊಸನಗರದ ತೋಟದ ಮನೆಯೊಂದ ಮೇಲೆ ಲೋಕಾಯುಕ್ತ ರೇಡ್ |  ಹೊಸನಗರ ತಾಲ್ಲೂಕಿನ ಜಯನಗರ ಸಮೀಪದ ಮಣಸಟ್ಟೆ ಗ್ರಾಮದಲ್ಲಿರುವ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರವಾರದ ಅಬಕಾರಿ ಅಧಿಕಾರಿ ರೂಪ ಎಂಬುವವರಿಗೆ ಸೇರಿದ ಆಸ್ತಿ ಇದಾಗಿದೆ ಎಂದು ಹೇಳಲಾಗುತ್ತಿದೆ.ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ  ಇನ್ನೂ ಹಲವಾರು ಕಡೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುತ್ತಾ ಬಳಿಯ ಮಣಸಟ್ಟೆ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಕುರಿತು ಅಧಿಕಾರಿಗಳು ಕಾರ್ಯಾಚರಣೆ ಮುಗಿದ ಬಳಿಕ ಮಾಹಿತಿ ನೀಡುವ…

Read More

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ಸುಮಿತ್ರಮ್ಮ ಅವಿರೋಧ ಆಯ್ಕೆ|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷರಾಗಿ ಸುಮಿತ್ರಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿಶ್ವಾಸ ನಿರ್ಣಯದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಸುಮಿತ್ರಮ್ಮ ರವರನ್ನು ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗೆ ಹೊಸನಗರ ತಾಲೂಕ್ ಅಕ್ಷರ ದಾಸೋಹ ಅಧಿಕಾರಿ ನಾಗರಾಜ್ ಪಾಲ್ಗೊಂಡಿದ್ದರು. ಹೆದ್ದಾರಿಪುರ ಗ್ರಾಪಂ ನೂತನ ಅಧ್ಯಕ್ಷೆ ಸುಮಿತ್ರಮ್ಮ ರವರಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಕೆರೆಹಳ್ಳಿ- ಹುಂಚಾ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಗಿರೀಶ್ ,ಸತೀಶ್…

Read More

ಚಲಾವಣೆಯಿಂದ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದ RBI

ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ ಕೈಗೊಂಡಿದೆ. ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.

Read More

ಹೊಂಬುಜದಲ್ಲಿ ಶಿಲ್ಪ ಸಹಿತ ಮೊದಲ ಕಂದುಕ (ಪೋಲೋ) ಕ್ರೀಡಾ ಶಾಸನಗಂಭ ಪತ್ತೆ|hombuja

ಶಿಲ್ಪ ಸಹಿತ ಮೊದಲ ಕಂದುಕ(ಪೋಲೋ)ಕ್ರೀಡಾ ಶಾಸನಗಂಭ ಪತ್ತೆ. ಶ್ರೀಕ್ಷೇತ್ರ ಹೊಂಬುಜದಲ್ಲಿ ಇತ್ತೀಚೆಗೆ ಶಿಲ್ಪ ಸಹಿತ ಕಂದುಕ ಕ್ರೀಡೆಯ ಮಹತ್ವದ ಮೊದಲ ಶಾಸನವೊಂದು ಪತ್ತೆಯಾಗಿದೆ. ಸ್ವಸ್ತಿ ಶ್ರೀ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯರ ನೇತೃತ್ವದಲ್ಲಿ ಹೊಂಬುಜದ ಅಧಿದೇವಿ ಪದ್ಮಾವತಿ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರ ಮಾಡುವ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ. ಪದ್ಮಾವತಿ ಅಮ್ಮನವರ ಬಸದಿಯ ಹಿಂದಿನ ಲಕ್ಕಿಗಿಡದ ಒತ್ತುಗಟ್ಟೆಯ ಗೋಡೆಯಲ್ಲಿದ್ದ ಈ ಶಾಸನಗಂಭದ ಒಂದೇ ಮುಖದ ಶಾಸನವು ಇದುವರೆಗೂ ಗೋಚರಿಸುತ್ತಿತ್ತು. ಈಗ ಈ ಶಾಸನವನ್ನು ಗೋಡೆಯಿಂದ ಹೊರ ತೆಗೆದಾಗ…

Read More

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ರಾಜುರೆಡ್ಡಿ

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ರಾಜುರೆಡ್ಡಿ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ರಾಜುರೆಡ್ಡಿ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ , ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಿಪ್ಪನ್‌ಪೇಟೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ ಹೃದಯಾಘಾತ, ರಕ್ತದೊತ್ತಡ,…

Read More

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.!

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.! ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಣಜಿ ಗ್ರಾಮದ ಹೊಸ ಮನೆಯ ವಾಸಿ ರತ್ನಮ್ಮ ಎಂಬುವವರು ಹೊಸನಗರ ಆರಕ್ಷಕ ಠಾಣೆಗೆ ದೂರು 12 ವರ್ಷದ ಹಿಂದೆ ಮನೆ ಬಿಟ್ಟು ಹೋಗಿರುವ ತನ್ನ ಪತಿ 69 ವರ್ಷದ ಶಿವಪ್ಪಗೌಡ ಎಂಬುವರನ್ನು ಹುಡುಕಿ ಕೊಡುವಂತೆ ದೂರು ನೀಡಿದ್ದಾರೆ. ಮಾನಸಿಕವಾಗಿ ದುರ್ಬಲವಾಗಿದ ಕುಡಿತದ ಚಟವನ್ನು ಹೊಂದಿದ್ದ ಶಿವಪ್ಪಗೌಡ ಈ ಹಿಂದೆ ಮೂರ್ ನಾಲ್ಕು ಬಾರಿ ಮನೆ…

Read More

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು

ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಓರ್ವ ಸಾವು ಆಯನೂರು ಸಮೀಪದ ದೊಡ್ಡದಾನವಂದಿ ಬಳಿ ಭಾನುವಾರ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ, ನಿವೃತ್ತ ಸಹಾಯಕ ಇಂಜಿನಿಯರ್ ನಾಗರಾಜ್ ( 75) ಮೃತಪಟ್ಟವರು. ಅವರ ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರದ ವಿಟ್ಲುಕೊಪ್ಪದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್‌ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಕುಂಸಿ…

Read More

ಹುಂಚಾ : ಗೃಹಮಂತ್ರಿಗಳ ಸ್ವಕ್ಷೇತ್ರದಲ್ಲಿ ಇಲ್ಲದವರ ಮೇಲೆ ಉಳ್ಳವರ ದರ್ಬಾರ್ : ಬಡ ವೃದ್ದೆಯ ಮೇಲೆ ದಬ್ಬಾಳಿಕೆ

ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಸರ್ವೇ ನಂಬರ್ 37 ರಲ್ಲಿ ಜಮೀನಿನ ಖಾತೆದಾರನಿಗೆ ಹಕ್ಕು ಪತ್ರ ನೀಡಲಾಗಿದ್ದರೂ ಕೂಡಾ ಸದರಿ ಜಾಗದ ಪಕ್ಕದ ರೈತನೋರ್ವ ದುರುದ್ದೇಶದಿಂದ ಅಧಿಕಾರಿಗಳನ್ನು ಬಳಸಿಕೊಂಡು ಓಡಾಟಕ್ಕೆ ಜಾಗ ಬಿಡುವಂತೆ ಒತ್ತಾಯಿಸಿ ತೆರವುಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸದರಿ ಗ್ರಾಮದ ಸರಿಯಾಗಿ ಕಣ್ಣು ಕಾಣಿಸದ ಮತ್ತು ಕಿವಿ ಕೇಳಿಸದ ಸುಮಾರು 75 ವರ್ಷದ ವೃದ್ಧೆ ಗೌರಮ್ಮ ಕೋಂ ಡಾಕಪ್ಪ ಎಂಬುವರಿಗೆ ಸರ್ವೇ ನಂಬರ್ 37 ರಲ್ಲಿ ಒಂದು…

Read More