ಬೈಂದೂರು – ರಾಣೆಬೆನ್ನೂರು ದ್ವಿಪಥ ರಸ್ತೆ ನಿರ್ಮಾಣ : ಸಂಸದ ಬಿ ವೈ ರಾಘವೇಂದ್ರ…. ಸಂಪೆಕಟ್ಟೆಯಿಂದ – ಹೊಸನಗರದ ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :

ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು – ರಾಣೇ ಬೆನ್ನೂರು ರಸ್ತೆ ರಾಜ್ಯದ ಮಧ್ಯ ಭಾಗ ಹಾಗು ಕರಾವಳಿ ಭಾಗವನ್ನು ಸಂಪರ್ಕಿಸುವ ಏಕಪಥ ಹಾಗೂ ಮದ್ಯಂತರ ಪಥದ ರಸ್ತೆಗಳಾಗಿವೆ. ಇವುಗಳನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೋರಿದ ಫಲವಾಗಿ ಕೊಲ್ಲೂರು ಪಟ್ಟಣ, ನಾಗೋಡಿ, ಜಯನಗರದಿಂದ ಹೊಸನಗರ ಬಟ್ಟೆ ಮಲ್ಲಪ್ಪದಿಂದ ಯಡೇಹಳ್ಳಿ, ಕಿಟ್ಟದ ಹಳ್ಳಿಯಿಂದ ಮಾಸೂರು ರಟ್ಟಿ…

Read More

ವಿದ್ಯಾರ್ಥಿಗಳ ಅನುಪಸ್ಥಿತಿ ಇದ್ದರೂ ಶಾಲೆಗಳು ಸ್ವಾತಂತ್ರ್ಯೋತ್ಸವ ಆಚರಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಈ ಆಚರಣೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದೆ.   ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ರೆಕಾರ್ಡ್ ಮಾಡಿಕೊಂಡು ಆನ್ ಲೈನ್ ಮೂಲಕ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ….

Read More

ಸಾಗರ ಪೋಲಿಸರ ಭರ್ಜರಿ ಕಾರ್ಯಾಚರಣೆ : ಮೂವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಸಾಗರ ನಗರ ಪೊಲೀಸ್‌ ಠಾಣೆಯ ಪೊಲೀಸರು ಮೂವರು ಅಂತರ್‌ ಜಿಲ್ಲಾ ಬೈಕ್ ಕಳ್ಳತನದ ಆರೋಪಿತರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣ,ಭದ್ರಾವತಿ,ಹರಿಹರ ದಾವಣಗೆರೆ ಮತ್ತು ಹಾಸನ ಜಿಲ್ಲೆಯ ಪೊಲೀಸ್‌ ಠಾಣೆಗಳಲ್ಲಿ ನಡೆದಿದ್ದ ಒಟ್ಟು 6  ಪ್ರಕರಣಗಳನ್ನು ಭೇದಿಸಿ 8ಲಕ್ಷ 20ಸಾವಿ ರೂಗಳ ಮೌಲ್ಯದ 6ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಎ.ಎಸ್.ಪಿ ರೋಹನ್ ಜಗದೀಶ್ ಮತ್ತು ಇನ್ಸ್ ಪೆಕ್ಟರ್ ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ತಿರುಮಲೇಶ್,ಸಾಗರ್ಕರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರತ್ನಾಕರ್,ಸಂತೋಷ್ ನಾಯ್ಕ್…

Read More

ಜಮೀನಿನಲ್ಲಿ ಹೂವಿನ ಗಿಡ ನೆಟ್ಟಿದ್ದಕ್ಕೆ ಅಣ್ಣನಿಂದ ತಮ್ಮನಿಗೆ ಗುಂಡೇಟು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಜಮೀನಿಗೆ ಹೋಗುವ ದಾರಿಯಲ್ಲಿ ಗಿಡಗಳನ್ನು ಹಾಕಿದ್ದಕ್ಕೆ ಸಿಟ್ಟಿಗೆದ್ದ ಅಣ್ಣ ನಾಡ ಬಂದೂಕಿನಿಂದ ತಮ್ಮನಿಗೆ ಶೂಟ್ ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆ ನಡೆದ ಘಟನೆ ಇದಾಗಿದ್ದು, ಭದ್ರಾವತಿ ತಾಲೂಕಿನ ಸಿದ್ದರಮಟ್ಟಿಯಲ್ಲಿ ಮುನಿಸ್ವಾಮಿ ಎಂಬಾತ ತನ್ನ ಸಹೋದರ ಮುರುಗೇಶ್​ನಿಗೆ ನಾಡ ಬಂದೂಕಿನಿಂದ ಶೂಟ್ ಮಾಡಿದ್ದಾನೆ. ಇದರಿಂದ‌ ಮುರುಗೇಶನ ತೊಡೆ ಸೀಳಿ ಹೋಗಿದೆ. ತಕ್ಷಣ ಮುರುಗೇಶ್​ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.  ಸಿದ್ದರಮಟ್ಟಿಯಲ್ಲಿ…

Read More

ಚನ್ನಗಿರಿಯ ಯುವಕ ಆಗುಂಬೆ ಸ್ಮಶಾನದ ಶೆಡ್ ನಲ್ಲಿ ಶವವಾಗಿ ಪತ್ತೆ :

ಆಗುಂಬೆ : ಕಳೆದ ವಾರ ಮನೆಯಿಂದ ನಾಪತ್ತೆಯಾಗಿದ್ದ ಯುವಕನೊಬ್ಬ ಸ್ಮಶಾನದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ  ನಡೆದಿದೆ. ಚನ್ನಗಿರಿ ತಾಲೂಕಿನ ಕಾಗತ್ತೂರು ಗ್ರಾಮದ ಎಂ.ಕೆ.ಸ್ವಾಮಿ(27) ಮೃತಪಟ್ಟಿರುವ ದುರ್ಧೈವಿಯಾಗಿದ್ದಾನೆ.ಆಗುಂಬೆ ಗ್ರಾಮದ ಸ್ಮಶಾನದ ಶೆಡ್​ನಲ್ಲಿ ಈತ ನೇಣಿಗೆ ಶರಣಾಗಿದ್ದಾನೆ. ಮೇ 24ರಂದು ಸ್ವಾಮಿ ನಾಪತ್ತೆಯಾಗಿದ್ದ. ಮಗ ಕಾಣೆಯಾದ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಯುವಕನ ಮೊಬೈಲ್ ನೆಟ್​ವರ್ಕ್​ ಆಧರಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆಗುಂಬೆಯ ಸ್ಮಶಾನದಲ್ಲಿ ಡೆತ್​ನೋಟ್​ ಬರೆದಿಟ್ಟು ದುರಂತ ಅಂತ್ಯಕಂಡಿದ್ದಾನೆ. …

Read More

ರಿಪ್ಪನ್ ಪೇಟೆ: ಗುರು ರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನ ಮಹೋತ್ಸವ:

ರಿಪ್ಪನ್‌ಪೇಟೆ:ಇಲ್ಲಿನ ಬೈರಾಪುರದ ಕಿರುಮಂತ್ರಾಲಯ ಶ್ರೀಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 23 ರಿಂದ 25 ರವರೆಗೆ ಗುರುರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನಾ ಮಹೊತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಟಿ.ಪುರುಷೋತ್ತಮ್‌ರಾವ್ ಮತ್ತು ಕಾರ್ಯದರ್ಶಿ ಕೆ.ದೇವರಾಜ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊರೊನಾ ಮಾರ್ಗಸೂಚಿಯನ್ವಯ ಸರಳ ಸಂಪ್ರದಾಯದಂತೆ 23ರಂದು ಸೋಮವಾರ ಬೆಳಗ್ಗೆ ಪೂರ್ವಾರಾಧನೆ ಮತ್ತು ವಿಶೇಷ ಪೂಜೆಗಳು ತೀರ್ಥಪ್ರಸಾದ ವಿತರಣೆ, ಆಗಸ್ಟ್ 24 ರಂದು ಮಂಗಳವಾರ ಗುರುರಾಯರ ಆರಾಧನೆ ವಿಶೇಷ ಪೂಜೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ…

Read More

RIPPONPETE | ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ

ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ವಿಜಯವಾಣಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿದಾನಂದ ಸ್ವಾಮಿ ಅವರ ತಾಯಿ ಮುರಿಗೆಮ್ಮ (85) ಅವರು ನಿಧನರಾಗಿದ್ದಾರೆ. ಶಿವಮೊಗ್ಗ ರಸ್ತೆಯ ನಿವಾಸಿಗಿದ್ದ ದಿ. ಗುರುಪಾದಯ್ಯರವರ ಧರ್ಮಪತ್ನಿ ಹಾಗೂ ಪತ್ರಕರ್ತ ಚಿದಾನಂದ ಸ್ವಾಮಿಯವರ ತಾಯಿ ಮುರಿಗೆಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ಭಾನುವಾರ ಸಂಜೆ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು. ಮೃತರು ಪುತ್ರರು, ಸೊಸೆ, ಮಕ್ಕಳು , ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಸಂತಾಪ :ಅಲ್ಪಕಾಲದ ಅನಾರೋಗ್ಯದಿಂದ ಲಿಂಗೈಕ್ಯರಾದ…

Read More

ಸ್ಕೂಟಿ ಹಾಗೂ ಬಸ್ ನಡುವೆ ಭೀಕರ ಅಪಘಾತ : ಇಬ್ಬರ ಸಾವು

  ಶಿವಮೊಗ್ಗ : ಮಾಚೇನಹಳ್ಳಿಯ ಶಿಮುಲ್ ಡೈರಿ ಎದುರುಗಡೆ ಕೆಎಸ್ ಆರ್ ಟಿ ಸಿ ಬಸ್  ಸ್ಕೂಟಿಗೆ  ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿರುವ ಘಟನೆ ಇಂದು ನಡೆದಿದೆ. ದ್ವಿಚಕ್ರ ವಾಹನ ಭದ್ರಾವತಿ ಕಡೆಯಿಂದ ಡೈರಿ ಹಿಂಭಾಗದ ಜಯಂತಿ ಗ್ರಾಮಕ್ಕೆ ತಿರುಗುವ ವೇಳೆ ದ್ವಿಚಕ್ರ ವಾಹನಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ಸವಾರಾದ ಮಂಜುನಾಥ್ (25) ಹಾಗೂ ಆಂಥೋಣಿ ಎಂಬುವರು ಸ್ಥಳದಲ್ಲಿಯೇ…

Read More

Veeresh Aluvalli, a politician without theory:: block congress Ripponpet

Ripponpet:: Former legislator Shri Belur Gopalakrishna has vindicated Veerash Aluvalli, who has no qualms about either Gopalakrishna or Congress leaders.  He is also a person who has not worked for the BJP in the marine constituency and the JDS in the Tirthahalli assembly constituency in the last assembly elections. Ripponpet congress block committee drew a…

Read More

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿರುವ ಉರ್ದು ಮಾಧ್ಯಮ ಶಾಲೆಯ ಮೇಲೆ ಬೃಹತ್ ಮರವೊಂದು‌ ಬಿದ್ದು ಕಟ್ಟಡ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳು ಮಳೆಗೆ ಕೆಂಚನಾಲದ ಉರ್ದು ಶಾಲೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಯಾಗಿದೆ.ಕೊಠಡಿಯೊಳಗಿದ್ದ ಪೀಠೋಪಕರಣಗಳು ಜಖಂಗೊಂಡಿದೆ.ಕಟ್ಟಡದ ಮಧ್ಯಭಾಗದ ಮೇಲೆ ಬಿದ್ದಿರುವುದರಿಂದ ಆಚೆ ಈಚೆ ಹೊಂದಿಕೊಂಡಿರುವ ಕೊಠಡಿಗಳಿಗೂ ಹಾನಿಯಾಗಿದೆ.  ಶಾಲೆಗಳಿಗೆ ರಜೆಯಾಗಿದ್ದರಿಂದ ಅದೃಷ್ಟವಶಾತ್  ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More