Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ

Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ ರಿಪ್ಪನ್‌ಪೇಟೆ: ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಸರ್ವೇ ನಂ.12ರ ಗುಳಗುಳಿ ಶಂಕರದಲ್ಲಿ ಕೆರೆ ಒತ್ತುವರಿ ಮಾಡಿ ಅಕ್ರಮ ಕಟ್ಟಡ ನಿರ್ಮಿಸುರುವುದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ಬೆಳ್ಳೂರು-ಆಯನೂರು-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿನ ಪ್ರಸಿದ್ಧ ಗುಳಗುಳಿ ಶಂಕರೇಶ್ವರ ದೇವಸ್ಥಾನ ಮತ್ತು ಜಟಾತೀರ್ಥದ ಎದುರು ಇರುವ ಕೆರೆಯನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಕೆರೆ ನೀರನ್ನು ಆಶ್ರಯಿಸುವ…

Read More

ಅತ್ತೆಯ ಸಾವಿನ ಸುದ್ದಿ ತಿಳಿದು ಅಳಿಯ ಹೃದಯಾಘಾತದಿಂದ ನಿಧನ|sagara

ಹೃದಯಾಘಾತದಿಂದ ಸೋದರತ್ತೆಯ ಮೃತಪಟ್ಟ ಸುದ್ದಿ ತಿಳಿದು ಅಳಿಯ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ನಡೆದಿದೆ. ಲಕ್ಷಮ್ಮ(58) ಮತ್ತು ಅವರ ಅಳಿಯ ಗುಲ್ಫತ್ ಸಿಂಗ್(45) ಮೃತಪಟ್ಟರಾಗಿದ್ದಾರೆ. ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದ ಲಕ್ಷಮ್ಮರನ್ನು ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದರು. ಬಸ್ಸು ಆನಂದಪುರ ಸಮೀಪ ತಲುಪಿದಾಗ ಲಕ್ಷಮ್ಮರಿಗೆ ಹೃದಯಾಘಾತಕ್ಕೀಡಾಗಿದ್ದು, ಅವರು ಅಲ್ಲೇ ಮೃತಪಟ್ಟರೆನ್ನಲಾಗಿದೆ. ಈ ವಿಚಾರವನ್ನು ಬಸ್ ನಿರ್ವಾಹಕ ಲಕ್ಷಮ್ಮ ಸಂಬಂಧಿಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ಸುದ್ದಿಯನ್ನು ಸಂಬಂಧಿಕರು ಕರೆ ಮಾಡಿ…

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 615 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಅಭಿನಂದಿಸಿದ್ದಾರೆ. ಪಟ್ಟಣದ ಬೆಟ್ಟಮಕ್ಕಿಯ ಶಿಕ್ಷಕ ದಂಪತಿಗಳಾದ ದಾನೇಶ ಮತ್ತು ನಾಗರತ್ನ ಅವರ ಪುತ್ರಿ ರಜತಾ ರವರನ್ನು ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಿದರು ಎಸ್ ಎಸ್ ಎಲ್ ಸಿ…

Read More

ಅಧಿಕಾರಕ್ಕಿಂತ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ – ಆರ್ ಎನ್ ಮಂಜುನಾಥ್ ಗೌಡ|RMM

ತೀರ್ಥಹಳ್ಳಿ : ಸಹಕಾರಿ ಕ್ಷೇತ್ರದಲ್ಲಿ ಮಂಜುನಾಥ್ ಗೌಡರ ಇನ್ನಿಂಗ್ಸ್ ಮುಗಿತು ಮಂಜುನಾಥ್ ಗೌಡರನ್ನು ಮುಗಿಸಿ ಬಿಟ್ವಿ ಅಂತ ಬಹಳ ಜನ ಎಂದು ಕೊಳ್ಳುತ್ತಾರೆ ಕನಸು ಕಾಣುತ್ತಾರೆ. ನಾವು ಕನಸು ಕಂಡರೆ ನನಸು ಆಗುವಂತಹ ಕನಸು ಕಾಣಬೇಕು.  ಡಿಸಿಸಿ ಅಥವಾ ಯಾವುದೇ ಸೊಸೈಟಿಯಲ್ಲಿ ಭಾಗಿಯಾಗಬೇಕಾದರೆ ಶಿವಮೊಗ್ಗದ ಟಿಎಪಿಸಿಎಂಎಸ್ ಅಲ್ಲಿ ಗೆದ್ದರೆ ಮಾತ್ರ. ಆದ್ದರಿಂದ ಅಲ್ಲಿ ಸೋಲಿಸಬೇಕೆಂದು ನಮ್ಮ ವಿರೋಧ ಪಕ್ಷದವರ ಆಸೆಗೆ ಅಲ್ಲಿನ ಜನರು ಸುಳ್ಳು ಮಾಡಿ ನನನ್ನು ಗೆಲ್ಲಿಸಿದರು. ಅಲ್ಲಿನ ಗೆಲುವಿನ ಮೂಲಕ  ಅಲ್ಲಿಂದ ನನ್ನ ಎರಡನೇ…

Read More

ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ…!!!

ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರನನ್ನು ಮಲೇಬೆನ್ನೂರು ನಿವಾಸಿ ಹಬೀಬುಲ್ಲಾ ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ತೀವ್ರ ಪೆಟ್ಟು ಬಿದ್ದಿದ್ದು ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಆಯನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಯನ್ನು ಇಲ್ಲಿ ವೀಕ್ಷಿಸಿ👇

Read More

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹೇಳಿದರು. ರಿಪ್ಪನ್‌ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ  “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…

Read More

ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ…

Read More

ಅಡಿಕೆ ಸಸಿಗಳನ್ನು ನಾಶಗೊಳಿಸಿದ ಅರಣ್ಯಾಧಿಕಾರಿಗಳು ,ರೈತರ ಆಕ್ರೋಶ – ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ತಿಳಿವಳಿಕೆ ನೀಡದೆ ಏಕಾಏಕಿ ನಾಶಗೊಳಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆಂದು ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸರ್ವೇ ನಂ 30 ರಲ್ಲಿ ಅರಣ್ಯ ಇಲಾಖೆಯವರು ಅಡಿಕೆ ಸಸಿಗಳನ್ನು ಕಿತ್ತು, ಕಡಿದು ಹಾಕಿದ ಸ್ಥಳಕ್ಕೆ ಭೇಟಿ…

Read More

ಸಮುದಾಯ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ರಿಪ್ಪನ್ ಪೇಟೆಯಲ್ಲಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ:

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಇಂದು ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ ನಡೆಸಲಾಯಿತು. ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ವಿನಾಯಕ ವೃತ್ತದವರೆಗೂ ಭಾರಿ ಮಳೆಯ ನಡುವೆ ಪಾದಯಾತ್ರೆ ನಡೆಸಿ ನಂತರ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ನಂತರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ಪ್ರಾಥಮಿಕ ಆರೋಗ್ಯ…

Read More