ಪುನೀತ್ ರಾಜಕುಮಾರ್ ನಿಧನಕ್ಕೆ ಕನ್ನಡಪರ ಸಂಘಟನೆಗಳಿಂದ ನಾಳೆ ರಿಪ್ಪನ್ ಪೇಟೆ ಬಂದ್ ಗೆ ಕರೆ:
ರಿಪ್ಪನ್ ಪೇಟೆ : ಜನಪ್ರಿಯ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನಕ್ಕೆ ರಿಪ್ಪನ್ ಪೇಟೆಯ ಪುನೀತ್ ರಾಜ್ ಅಭಿಮಾನಿ ಬಳಗ ಹಾಗೂ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ನಾಳೆ ಬೆಳಿಗ್ಗೆ 6ರಿಂದ 12 ಗಂಟೆ ತನಕ ರಿಪ್ಪನ್ ಪೇಟೆ ಸಂಪೂರ್ಣವಾಗಿ ಬಂದ್ ಗೆ ಕರೆ ನೀಡಲಾಗಿದೆ. ರಿಪ್ಪನ್ ಪೇಟೆಯ ವರ್ತಕರು, ಸಾರ್ವಜನಿಕರು ,ಪುನೀತ್ ರಾಜ್ ಅಭಿಮಾನಿ ಬಳಗದವರು, ಸ್ವಯಂ ಪ್ರೇರಿತರಾಗಿ ಬಂದ್ ಮಾಡಲಿದ್ದು , ಬೆಳಿಗ್ಗೆ 11:30 ಕ್ಕೆ ಗ್ರಾಮ…