Headlines

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ ಶಿವಮೊಗ್ಗ : ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು, ತಾಲೂಕಿನ ಹಲವು ಶಾಲೆಯ ಮಕ್ಕಳು ಸ್ವಾತಂತ್ರ್ಯೋತ್ಸವದ ಪಥಸಂಚಲನಕ್ಕಾಗಿ ಆಗಮಿಸಿದ್ದರು. ಈ ವೇಳೆ ಪಥಸಂಚಲನದಲ್ಲಿ ಭಾಗಿಯಾಗಿದ್ದ 3 ಮಕ್ಕಳು ದಿಡೀರ್ ಕೆಳಗೆ ಬಿದ್ದಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ, ಅಲ್ಲಿಯೇ ಇದ್ದ ಸರ್ಕಾರಿ…

Read More

ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ತಡರಾತ್ರಿ PFI ,SDPI ಕಾರ್ಯಕರ್ತರ ಮನೆ ಮೇಲೆ ದಾಳಿ : ಐವರು ವಶಕ್ಕೆ

ಶಿವಮೊಗ್ಗ : ಪಿಎಫ್‌ಐ ಸಂಘಟನೆ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮುಂದುವರೆದಿದೆ. ಇವತ್ತು ಬೆಳಗಿನ ಜಾವ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ದಾಳಿ ನಡೆದಿವೆ. ಶಿವಮೊಗ್ಗ ನಗರದ ಎರಡು ಕಡೆ ಮತ್ತು ಭದ್ರಾವತಿಯಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ಈಗಾಗಲೇ ಐವರನ್ನು ವಶಕ್ಕೆ ಪಡೆದಿರುವ ಕುರಿತು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಪೊಲೀಸರು…

Read More

ಅದ್ದೂರಿಯಾಗಿ ಜರುಗಿದ ಕೆಂಚನಾಲ ಉರೂಸ್ ಕಾರ್ಯಕ್ರಮ :

ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರಾದ ಮೊಹಮ್ಮದ್ ಝುಲ್ಪಿಕರ್ ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು.ಈ ಸಂಧರ್ಭದಲ್ಲಿ ಶಿವಮೊಗ್ಗದ ಮುರ್ಷದ್ ರವರು ಸಂದಲ್ ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್ ಮೆರವಣಿಗೆಗೆ ರಂಗು ತಂದರು.ನೂರಾರು ಭಕ್ತಾದಿಗಳು…

Read More

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು

ರಿಪ್ಪನ್‌ಪೇಟೆ: ಚಲಿಸುತಿದ್ದ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಕ್ಕೆ  ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಿರೇಮೈಥೆ ಗ್ರಾಮದ ವಾಸಿ ರಾಘವೇಂದ್ರ (43) ಮೃತ ದುರ್ದೈವಿಯಾಗಿದ್ದಾನೆ.  ಮನೆ ಕೆಲಸಕ್ಕೆ ಬೇಕಾಗಿದ್ದ ಮರಳು ತರಲು ಬಾಡಿಗೆ ಕೆಎ-15-TA-9879 ಟ್ರ್ಯಾಕ್ಟರ್ ನಲ್ಲಿ ಮನೆ ಸಮೀಪವಿರುವ ಹಳ್ಳದಿಂದ ಮರಳು ತುಂಬಿಸಿಕೊಂಡು ಬರುತ್ತಿರುವಾಗ   ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ರಾಘವೇಂದ್ರ ಕೆಳಗೆ ಬಿದ್ದು ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದೆ ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ…

Read More

ಕಾಗೋಡು ತಿಮ್ಮಪ್ಪ ಹೆಂಡ ಮತ್ತು ಸಿಗರೇಟ್ ಮಾರುತ್ತಾರೆ ಎಂದ ಹರತಾಳು ಹಾಲಪ್ಪ : ಶಾಸಕರ ವಿರುದ್ದ ಕಾಂಗ್ರೆಸ್ ಕಿಡಿಕಿಡಿ- ಪ್ರತಿಭಟನೆಯ ಎಚ್ಚರಿಕೆ|Sagara

ಸಾಗರ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ಶಾಸಕ ಹಾಲಪ್ಪ ಹರತಾಳು ಸರ್ಕಾರಿ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಶಾಸಕರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳದೆ ಹೋದಲ್ಲಿ ಅವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ನಗರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಲಪ್ಪ, ಹಿರಿಯ ಮುತ್ಸದ್ಧಿ ಹಾಗೂ ಮಾಜಿ ಸಚಿವ ಕಾಗೋಡು…

Read More

ಶಿವಮೊಗ್ಗ : ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ 12ರ ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ್ದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಥವಾ ಯಾವ ಕಾರಣಕ್ಕಾಗಿ ಈ…

Read More

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ ಶಿವಮೊಗ್ಗ : ವ್ಯಕ್ತಿಯೋರ್ವರ ಮೊಬೈಲ್ ಪೋನ್ ನಂಬರ್ ಹ್ಯಾಕ್ ಮಾಡಿ, ಅವರ ಬ್ಯಾಂಕ್ ಖಾತೆಯಿಂದ ಸಾವಿರಾರು ರೂ. ವಂಚನೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿ ಪ್ರಭಾಕರ ಬಿ ವಿ (47) ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರುದಾರ ಪ್ರಭಾಕರ ಬಿ ವಿ ಅವರ ಪೋನ್ ಪೇ ಸ್ಕ್ಯಾನರ್’ಗೆ…

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಸಾಗರ : ಪೊಲೀಸರ ಮಿಂಚಿನ ಕಾರ್ಯಾಚರಣೆ : ಅಕ್ರಮ ಗೋ ಕಳ್ಳರ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಕ್ರಮವಾಗಿ ಗೋವು ಕಳ್ಳತನ ಮಾಡುತ್ತಿದ್ದ ಗೋ ಕಳ್ಳರನ್ನು ಸಾಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐದು ಆರೋಪಿ ಗಳನ್ನು ಹಾಗೂ ದನಕಳ್ಳತನಕ್ಕೆ ಬಳಸುತ್ತಿದ್ದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ರಾತ್ರಿ ವೇಳೆ ಗೋವುಗಳನ್ನು ವಾಹನದಲ್ಲಿ ತುಂಬಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋ ಕಳ್ಳತನ ಮಾಡುವ  ಐದು ಜನರ ಗುಂಪನ್ನು ವಾಹನ ಸಮೇತ ಶನಿವಾರ  ಸಾಗರ  ಪೇಟೆ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಜಂಟಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ…

Read More

ಬಿಸ್ಕೆಟ್ ಪ್ಯಾಕ್ ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ

ಬಿಸ್ಕೆಟ್ ಪ್ಯಾಕ್ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಭದ್ರಾವತಿ ನಗರದ ನಿವಾಸಿಗಳಾದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ. ಸಂಜೆ 4.30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಆಗಮಿಸಿದ್ದ ಈ ಇಬ್ಬರು ಯುವಕರು ಮೂರು ವೀಟಾ ಮಾರಿ ಗೋಲ್ಡ್ ಬಿಸ್ಕೆಟ್ ಪ್ಯಾಕೆಟ್‌ಗಳನ್ನು…

Read More