ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನತ್ತಿನಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಹತ್ಯೆ – ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ|murder

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪಟ್ಟಣದ ಸಮೀಪವಿರುವ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂದು ಗುರುತಿಸಲಾಗಿದೆ.   ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ.  ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ….

Read More

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ..!!

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ ಸಾಗರ ತಾಲೂಕಿನ ಆನಂದಪುರದಲ್ಲಿ  ಬೈಕ್ ಗೆ  ಜೆಸಿಬಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೋರ್ವನ ಪರಿಸ್ಥಿತಿ ಗಂಭೀರವಾಗಿದೆ.  ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಏಕಾಏಕಿ ಬಂದ ಹಿನ್ನಲೆಯಲ್ಲಿ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ…

Read More

ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ…

Read More

ಬ್ಯಾಂಕ್ ಉದ್ಯೋಗಿಗೆ ಆನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ – ದೂರು ದಾಖಲು

ಬ್ಯಾಂಕ್  ಉದ್ಯೋಗಿಗೆ  ಲಕ್ಷಾಂತರ ರೂ ವಂಚಿಸಿದ ಆನ್ ಲೈನ್ ಖದೀಮರು ಶಿವಮೊಗ್ಗ: ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ ಬಳಸಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು…

Read More

ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಬೀದಿಗಿಳಿದ ಜಿಲ್ಲಾ ಕಾಂಗ್ರೆಸ್ :

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಜಿಲ್ಲಾ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿಲ್ಲ. ಆಸ್ಪತ್ರೆ ಸಿಬ್ಬಂದಿ ವೈದ್ಯಕೀಯ ಪರಿಕರಗಳ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಕಾರ್ಯಕರ್ತರು ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Read More

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

ಯಡಿಯೂರಪ್ಪ ಪ್ರಯಾಣಿಸುತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ತಪ್ಪಿದ ಭಾರಿ ಅನಾಹುತ|BSY

ಇಂದು ಕಲಬುರಗಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು.ಇದು ಕೆಲಕಾಲ ಆತಂಕ ಮೂಡಿಸಿತ್ತು.  ನಡೆದಿದ್ದೇನು??? :  ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  ಘಟನೆಯ ಬಗ್ಗೆ ವಿವರಣೆ ನೀಡಿದ ಪೈಲೆಟ್ ಜೋಸೆಪ್​, ಕ್ಯಾಮರಾದಲ್ಲಿ ರೆಕಾರ್ಡ್…

Read More

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university

ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…

Read More

ಭೀಕರ ಲಾರಿ ಅಪಘಾತ – ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ|Accident

ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.   ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್​ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ.  ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,…

Read More

KSRTC ಬಸ್ ಹಾಗೂ ಬೈಕ್ ನಡುವೆ ಅಫಘಾತ – ಯುವಕ ಸ್ಥಳದಲ್ಲಿಯೇ ಸಾವು|

ಶಿಕಾರಿಪುರ : ಕೆಎಸ್‌ಆರ್‌ಟಿಸಿ‌ ಡಿಪೋ ಮುಂಭಾಗ ಅಪಘಾತ – ಯುವಕ ಬಲಿ..! ಶಿಕಾರಿಪುರ ಪಟ್ಟಣದ ಹೊರವಲಯದ ಕೆಎಸ್ ಆರ್ ಟಿಸಿ ಡಿಪೋ ಎದುರು ಒಂದೇ ವಾರದಲ್ಲಿ ಎರಡನೇ ಅಪಘಾತವಾಗಿದ್ದು 2ನೇ ಬಲಿಯಾಗಿದೆ. ಹೌದು ಶಿಕಾರಿಪುರ ಪಟ್ಟಣ ಹೊರವಲಯದಲ್ಲಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಡಿಪೋ ಎದುರು ಕಳೆದ ಎರಡು ದಿನಗಳ‌ ಹಿಂದೆ ಎರಡು ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿಯಾಗಿ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರು.ಮೂರು ಜನ‌ ಗಂಭೀರವಾಗಿ ಗಾಯಗೊಂಡಿದ್ದರು ಆ ಘಟನೆ ಮಾಸುವ ಮುನ್ನ ಇನ್ನೋಂದು ಅಪಘಾತವಾಗಿದೆ‌….

Read More
Exit mobile version