Headlines

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ರಾಜಕಾರಣಿಗಳ ನಡವಳಿಕೆ ಜನರಲ್ಲಿ ಅಸಹ್ಯವುಂಟುಮಾಡಿದೆ,ಅದು ಪರಿವರ್ತನೆಯಾಗಬೇಕು: ಕೆ ದಿವಾಕರ್

ರಿಪ್ಪನ್‌ಪೇಟೆ: ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷದ ಸಾಗರ ವಿಧಾನಸಭಾ ಕ್ಷೇತ್ರ ಸಂಭಾವ್ಯ ಅಭ್ಯರ್ಥಿ ಕೆ. ದಿವಾಕರ್ ಹೇಳಿದರು. ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್‌ಆದ್ಮಿ ಪಕ್ಷದ ನೂತನ ಕಛೇರಿ ಉದ್ಘಾಟನೆಯ ನಂತರ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಇದುವರೆಗೆ ನಮ್ಮನ್ನಾಳಿದ ಶಾಸಕರುಗಳು ಉಂಡುಹೋದ ಕೊಂಡುಹೋದ ಮನಸ್ಥಿತಿಯವರಾಗಿರುವುದು ದುರಂತ. ನಮ್ಮಿಂದ ಆಯ್ಕೆಯಾದ ಕಳ್ಳರು, ಕಾಕರು, ದರೋಡೆ ಕೋರರು ಸಮಾಜವನ್ನು ಏನು…

Read More

ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ರಾಮತೀರ್ಥದಲ್ಲಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ: ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ಧ ಅಗಸ್ತ್ಯ ಮಹರ್ಷಿಗಳ ಪುಣ್ಯಾಶ್ರಮವಾದ ಶರ್ಮೀಣ್ಯಾವತಿ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ 40ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 9ನೇ ವರ್ಷದ ವಾರ್ಷಿಕೋತ್ಸವ ಏರ್ಪಡಿಸಲಾಗಿದೆ ಎಂದು ಶ್ರೀ ರಾಮೇಶ್ವರ ದೇವಸ್ಥಾನದ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 8.00 ಗಂಟೆಯಿಂದ ಪ್ರಧಾನ ಪುರೋಹಿತರಾದ ಕೆಂಜಿಗಾಪುರದ ಶ್ರೀಧರ್ ಭಟ್, ಶ್ರೀ ಸತ್ಯನಾರಾಯಣ…

Read More

ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ…

Read More

ಐಟಿ ಕಚೇರಿಗೆ ಮುತ್ತಿಗೆ ಯತ್ನ: ಕೈ ಕಾರ್ಯಕರ್ತರನ್ನು ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು​​

ಶಿವಮೊಗ್ಗ: ರಾಹುಲ್ ಗಾಂಧಿ ಮೇಲೆ ಕೇಂದ್ರ ಸರ್ಕಾರ ವೈಯಕ್ತಿಕ ದ್ವೇಷದಿಂದ ಇಡಿ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಸಿ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲ ಕಾಂಗ್ರೆಸ್​ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಆದಾಯ ತೆರಿಗೆ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಬಿಜೆಪಿ ಸರ್ಕಾರವು ಸೋನಿಯಾ ಗಾಂಧಿ ಅವರ ಕುಟುಂಬವನ್ನು ಟಾರ್ಗೆಟ್ ಮಾಡಿ, ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಇಡಿ ನೋಟಿಸ್…

Read More

ದಂಪತಿಗಳ ಪೋಷಾಕಿನಲ್ಲಿ ಬಾಡಿಗೆ ಮನೆ ಕೇಳಿಕೊಂಡು ಬಂದು ಮನೆಗೆ ನುಗ್ಗಿ ಕಳ್ಳತನ – ಖತರ್ನಾಕ್ ಮಹಿಳೆ ಬಂಧನ

ಮನೆ ಬಾಡಿಗೆಗೆ ಬೇಕು ಎಂದು ದಂಪತಿಗಳ ಪೋಷಾಕಿನಲ್ಲಿ ಬಂದ ಅಪರಿಚಿತ ಪುರುಷ ಮತ್ತು ಮಹಿಳೆ ಮಾಲೀಕನ ಮನೆಗೆ ನುಗ್ಗಿ ಚಿನ್ನಾಭರಣವನ್ನ ಹೊತ್ತೊಯ್ದ ಘಟನೆ ಶಿವಮೊಗ್ಗದ ಜಯನಗರದಲ್ಲಿ ನಡೆದಿದೆ.ಕಳ್ಳತನಕ್ಕೆ ಬುರ್ಖಾ ಧರಿಸಿ ಬಂದಿದ್ದ ಖತರ್ನಾಕ್ ಲೇಡಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನಲೆ : ಶಿವಮೊಗ್ಗ ನಗರದ  ಜಯನಗರ ಮೊದಲನೇ ತಿರುವಿನಲ್ಲಿರುವ ಸಮರ್ಥ ಅಪಾರ್ಟ್ ಮೆಂಟ್ ನ ಬಳಿ ಬುರ್ಕಾ ಹಾಕಿಕೊಂಡು ಬಂದ ಅಪರಿಚಿತ ಮಹಿಳೆ ಮತ್ತು ಅಪರಿಚಿತ ಪುರುಷ ಮನೆ ಬಾಡಿಗೆ ಇದೆಯಾ ಎಂದು ವಿಚಾರಿಸಿದ್ದಾರೆ..  ಪಕ್ಕದ…

Read More

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ:  ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

Read More

ಎಂಟು ವರ್ಷದ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ

ಎಂಟು ವರ್ಷದ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಎಂಟು ವರ್ಷದ ಬಾಲಕಿ ಮೇಲೆ 52 ವರ್ಷದ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ವರದಿಯಾಗಿದೆ.  ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಚಂದ್ರಪ್ಪ (52) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಹೊಸನಗರ ಸಮಾಜ ಕಲ್ಯಾಣ ಇಲಾಖೆಯಲ್ಲಿ ನೌಕರನಾಗಿದ್ದಾನೆ. ಭಾನುವಾರ ಸಂಜೆ ಸಮಯದಲ್ಲಿ ಆರೋಪಿ ಚಂದ್ರಪ್ಪ…

Read More

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More