Ripponpete | ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು

ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕಾರ್ಯನಿರ್ವಹಿಸುತಿದ್ದ ಕಾರ್ಮಿಕನೋರ್ವ ಅತಿಯಾದ ಮದ್ಯವಸನದಿಂದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಮೃತಪಟ್ಟಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ನಿವಾಸಿ ಷಣ್ಮುಖ(45) ಎಂಬಾತ ಕಳೆದ ಕೆಲವು ವರ್ಷಗಳಿಂದ ಬಾರ್ ನಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತಿದ್ದು ಅತೀಯಾದ ಮದ್ಯವಸನದಿಂದ ಅನಾರೋಗ್ಯ ಉಂಟಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತಿದ್ದನು. ಎಂದಿನಂತೆ ಇಂದು ಬೆಳಿಗ್ಗೆ ಕರ್ತವ್ಯಕ್ಕೆ…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು. ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.

Read More

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆಯೊಂದು ನಡೆದು ಕೆಲಕಾಲ ಬಿಗುವಿನಿಂದ ಕೂಡಿದ ವಾತಾವರಣ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದ ಮುಖಂಡರಿಂದ ವಿಷಾದ ಹಾಗೂ ಪೊಲೀಸರಿಂದ ಸಕಾಲಿಕ ಕಾನೂನು ಕ್ರಮ ಜರುಗಿಸುವ ಭರವಸೆ ಹಿನ್ನೆಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಣಪತಿಯ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಕೋಮು ಸೂಕ್ಷ್ಮ…

Read More

ಅಕಾಲಿಕ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತ : ದುರಸ್ತಿಗಾಗಿ ಗ್ರಾಮಸ್ಥರ ಒತ್ತಾಯ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಮಳವಳ್ಳಿ ಗಾಜಿನಗೋಡು ಗ್ರಾಮದ ಸಂಪರ್ಕ ರಸ್ತೆಯು ಇತ್ತೀಚೆಗೆ ಬಂದ ಅಕಾಲಿಕ ಭಾರಿ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ಅಳದ ಬೃಹತ್ ಹೊಂಡ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.  ಈ ರಸ್ತೆಯ ಮಾರ್ಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಮತ್ತು  ಕೃಷಿ ಚಟುವಟಿಕೆಗಾಗಿ ಓಡಾಡುವ ಸಂಪರ್ಕ ರಸ್ತೆಯಾಗಿದ್ದು ಭಾರಿ ಮಳೆಯಿಂದಾಗಿ ಗುಡ್ಡದ ನೀರು ಏಕಾಏಕಿ ನುಗ್ಗಿ ಚರಂಡಿ ತುಂಬಿ ಉಕ್ಕಿ ಹರಿದ ಪರಿಣಾಮ ಸಂಪರ್ಕ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಓಡಾಡಕ್ಕೆ ತುಂಬಾ…

Read More

ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ – ಘಟನೆಯಿಂದ ನೋವಾಗಿದೆ ,ಯಾರನ್ನು ಬಂಧಿಸಬೇಡಿ : ಯಡಿಯೂರಪ್ಪ|Bsy

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ತಮ್ಮ ಮನೆ ಮೇಲೆ ನಡೆದ ಕಲ್ಲೂ ತೂರಾಟದ ಘಟನೆಯ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಯಾರನ್ನು ಬಂಧಿಸಬೇಡಿ! ಬಂಜಾರ ಸಮುದಾಯದ ಕಾರ್ಯಕರ್ತರು ನಮ್ಮ ಮನೆಗೆ ಹಲ್ಲೆ ಮಾಡಿ, ಕಲ್ಲು ತೂರಾಟ ಮಾಡಿದಂತಹ ಘಟನೆಗಳು ನಡೆದಿವೆ. ಈ ಸಂಬಂಧ ಎಸ್​ಪಿ ಮತ್ತು ಡಿಸಿಯವರ ಬಳಿಯಲ್ಲಿ ಮಾತನಾಡಿ, ಬಂಜಾರ ಸಮುದಾಯದವರು ನಮ್ಮ ಜೊತೆ ಇದ್ದಾರೆ. ತಾಂಡಗಳ ಅಭಿವೃದ್ಧಿ ಮಾಡಿದ್ದೇನೆ, ತಪ್ಪು ಗೃಹಿಕೆಯಿಂದ ಈ ಘಟನೆ ಯಾಗಿದೆ. ಯಾರ ವಿರುದ್ಧವೂ ಕ್ರಮ…

Read More

ಸಾಗರ ಕ್ಷೇತ್ರವನ್ನು ಇಲ್ಲಿನ ಶಾಸಕರು ಕುಡುಕರ ಸಾಮ್ರಾಜ್ಯ ಮಾಡಲು ಹೊರಟಿದ್ದಾರೆ : ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ:ಸಾಗರ ಕ್ಷೇತ್ರದ ಶಾಸಕರು ಸಾಗರ ಮತ್ತು ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡದೆ ಕೇವಲ ಕೊರೊನಾ ನೆಪದಲ್ಲಿ  ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಗಂಭೀರವಾಗಿ ಆರೊಪಿಸಿದರು.  ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಳೆದ ತಿಂಗಳು ನಡೆದಂತಹ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಗಳಿಸುವ ಮೂಲಕ ನೈಜ ಮತದಾನ ಮಾಡುವ ಮೂಲಕ ಪಕ್ಷದ ಬಲವರ್ಧನೆಗೆ ಕಾರಣವಾಗಿದೆ. ಅದೆ…

Read More

ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಸಾಗರ : ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ ಈತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ ಇಲ್ಲದ ಕಾರಣ, ಆಕೆಯ ತಾಯಿ ಹಾಗೂ ಆಕೆಯ ತಂಗಿಯನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೆಂಡತಿಯ ತಂಗಿಯ ಜೊತೆ…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ಆಸ್ತಿಯಲ್ಲಿ ಪಾಲು ಕೊಡದೇ ಎರಡನೇ ಮದುವೆಯಾದ ಅಪ್ಪ – ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಮಕ್ಕಳು|Murder mystery

ಆಸ್ತಿಯಲ್ಲಿ ಪಾಲು ಕೊಡದೆ, ಎರಡನೇ ಮದುವೆಯಾಗಿ ಮಗು ಮಾಡಿಕೊಂಡ ಅಪ್ಪನನ್ನು ಮೂವರು ಮಕ್ಕಳೇ ಸುಪಾರಿ ಕೊಟ್ಟು ಕೊಲ್ಲಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.  ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ. ನ. 29ರಂದು ಕೆಎಸ್‌ಆರ್‌ಪಿಯ ನಿವೃತ್ತ ಎಸ್‌ಐ ನಾಗೇಂದ್ರಪ್ಪ ಎಂಬವರ ಶವ ಚರಂಡಿಯಲ್ಲಿ ಸಿಕ್ಕಿತ್ತು. ಇವರು ಶಿರಾಳಕೊಪ್ಪದ ಬೋವಿ ಗ್ರಾಮದವರು. ಆಸ್ತಿ ವಿಚಾರದಲ್ಲಿ ಕೊಲೆ ಶಂಕಿಸಿದ್ದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಕಂಬಿ ಎಣಿಸುವಂತೆ ಮಾಡಿದ್ದಾರೆ. ಬೋವಿ ಗ್ರಾಮದ ರಿಜ್ವಾನ್, ಹಬೀಬುಲ್ಲಾ, ಸುಹೇಲ್ ಎಂಬವರಿಂದ…

Read More

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು 81 ಸಾವಿರ ರೂ. ಮೌಲ್ಯದ ಅಡಕೆ, ಕಾಳುಮೆಣಸು ಮತ್ತು ಗೇರು ಬೀಜಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮಾಲು ಸಹಿತ ಹಾಗೂ ಕೃತ್ಯಕ್ಕೆ ಬಳಸಿದ್ದ ಕಳ್ಳತನದ ಕಾರನ್ನು ಸಾಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿವಪ್ಪ ನಾಯಕ ನಗರ  ನಿವಾಸಿಯಾದ ಮಹಮದ್ ಜಾಕೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಫೆಬ್ರವರಿಯಲ್ಲಿ ಸಾಗರ ನಗರದ ಸೈಯದ್ ಷಫಾಜ್‍ರವರ ಅರೆಕಾನೆಟ್ ಎನ್ನುವ ಚಿಲ್ಲರೆ ಮಳಿಗೆಯಲ್ಲಿ ಅಡಕೆ, ಕಾಳುಮೆಣಸು,…

Read More