Headlines

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು  ರಿಪ್ಪನ್‌ಪೇಟೆ : ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಟ್ಟಣದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ರಶ್ಮಿ ಆರ್ ನಾಯಕ್(42) ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟಣದ ರಾಘವೇಂದ್ರ ನಾಯಕ್ ಎಂಬುವವರ ಪತ್ನಿ ರಶ್ಮಿ ಆರ್.ನಾಯಕ್ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ  ಫಲಕಾರಿಯಾಗದೇ…

Read More

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..!

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..! ಸಾಗರ : ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಅಕ್ರಮ ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದ ಮೂವರ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಂಗಳವಾರ ಪ್ರಕರಣ ದಾಖಲಾಗಿದೆ. ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಮೂವರು ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ನಾಲ್ಕೂವರೆ ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಭಾಕರ್,…

Read More

ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮೂರು ಮಕ್ಕಳು ಸೇರಿದಂತೆ ನಾಲ್ವರು ಸಾವು

A tragic road accident at Bharatipura Cross in Tirthahalli taluk claimed three lives including a child after a Swift car collided with a KSRTC bus. Three others were seriously injured. ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್…

Read More

ಸಾಗರದ ಮಾಜಿ ಶಾಸಕರಾದ ಬಿ ಧರ್ಮಪ್ಪ ನಿಧನ|ex mla

ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ವಯೋಸಹಜ ನಿಧನರಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಸಂಜೆ 3.40 ರ ಸಮಯದಲ್ಲಿ ಕೊನೆಯುಸಿರೆಳೆದರು. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಮೂಲತಃ ಸಾಗರ ತಾಲೂಕಿನ ತಂಗಳವಾಡಿಯವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಕೆಲವು ದಿನಗಳ…

Read More

ಹೊಂಬುಜ : ಶ್ರವಣಬೆಳಗೊಳದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಶ್ರದ್ಧಾಂಜಲಿ|hombuja

ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ  ಶ್ರದ್ಧಾಂಜಲಿಯ ನುಡಿನಮನಗಳು ಆಧುನಿಕ ಬೆಳಗೊಳದ ಶಿಲ್ಪಿ, ಅತಿಶಯ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು 54 ವರ್ಷ ಜನಸಮುದಾಯ ಹಾಗೂ ಶ್ರೀಮಠವನ್ನು ಮುನ್ನಡೆಸಿದ ಪ್ರಾತಃ ಸ್ಮರಣೀಯರು ಹಾಗೂ ಮಾರ್ಗದರ್ಶಕರೂ ಆಗಿದ್ದ ಅವರ ನೇತೃತ್ವವನ್ನು ಕಳೆದುಕೊಂಡ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.  ಪೂಜ್ಯರು ತಮ್ಮ ಬಾಲ್ಯ ಜೀವನದ ವಿದ್ಯಾಭ್ಯಾಸವನ್ನು ಶ್ರೀಕ್ಷೇತ್ರ ಹೊಂಬುಜದ ಶ್ರೀಮಠದ ಗುರುಕುಲದಲ್ಲಿ ಮಾಡಿದ್ದರು ಎಂಬುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದೆ….

Read More

ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..!

ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..! ಪ್ರಾಪ್ತಿ (21) ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾಭ್ಯಾಸದಲ್ಲಿ ಸದಾ ಮುಂದಿದ್ದ, ಮಿತವ್ಯಯಿ ಹಾಗೂ ಚುರುಕು ಸ್ವಭಾವದ ವಿದ್ಯಾರ್ಥಿನಿ ಪ್ರಾಪ್ತಿ, ನವೆಂಬರ್ 14ರ ಬೆಳಿಗ್ಗೆ ಸುಮಾರು 4:00 ಗಂಟೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ತೀರ್ಥಹಳ್ಳಿ – ಬಾಳೆಬೈಲು ಕಾಲೇಜುವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದದಬ್ಬಣ ಗದ್ದೆ ಸಮೀಪದ ಬಚ್ಚನಕೊಡಿಗೆ ರಮೇಶ್ಆಚಾರ್ ಎಂಬುವರ ಪುತ್ರಿ ಪ್ರಾಪ್ತಿ (21) ಎಂಬಯುವತಿ ಬಾಳೆಬೈಲು…

Read More

ಶಾಸಕ ಹಾಲಪ್ಪರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ಸಾಗರ ಹೊಸನಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ  ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆರೆಹಳ್ಳಿ  ಹೋಬಳಿಯಲ್ಲಿ ಈಗಾಗಲೇ 200 ಕೋಟಿಗೂ ಅಧಿಕ  ಅಭಿವೃದ್ಧಿ ಕಾಮಗಾರಿಗಳು ನೆರವೇರಿದ್ದು ಈಗಾಗಲೇ  ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ರಿಪ್ಪನ್ ಪೇಟೆ ಯ ಸರಕಾರಿ ಪ್ರಥಮದರ್ಜೆ  ಕಾಲೇಜಿನಿಂದ  ವಿನಾಯಕ ವೃತ್ತದವರೆಗೆ…

Read More

ಬಗರ್ ಹುಕುಂ ಸಾಗುವಳಿ ಅರ್ಜಿದಾರರಿಗೆ ತಕ್ಷಣದಲ್ಲೇ ಸಾಗುವಳಿ ಚೀಟಿಯನ್ನು ನೀಡಿ : ಕಾಗೋಡು ತಿಮ್ಮಪ್ಪ

ಸಾಗರ :ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಪ್ರಕರಣಗಳ ಸಾಗುವಳಿ ಚೀಟಿಯನ್ನು ತಕ್ಷಣದಲ್ಲಿ ನೀಡುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಗರ ವತಿಯಿಂದ ಸಾಗರ ತಹಶೀಲ್ದಾರ್ ರಿಗೆ ಮನವಿಯನ್ನು ಸಲ್ಲಿಸಿದರು.  ಪ್ರತಿಭಟನೆಯ ನೇತೃತ್ವವನ್ನು ವಹಿಸಿದ ಮಾಜಿ ಸಚಿವರು ಮಾಜಿ ವಿಧಾನಸಭಾ ಅಧ್ಯಕ್ಷರು ಆದ ಶ್ರೀ ಕಾಗೋಡು ತಿಮ್ಮಪ್ಪನವರು ಮಾತನಾಡುತ್ತಾ ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ  ರೈತರ ಬಗರ್ ಹುಕುಂ ಜಮೀನು ಗಳಿಗೆ ಅರ್ಜಿ ಸಲ್ಲಿಸಿ ಸಾಕಷ್ಟು ಸಮಯ ಆದರೂ ಕೂಡ ಇದುವರೆಗೂ ಸಾಗುವಳಿ ಚೀಟಿಯನ್ನು ನೀಡಿಲ್ಲ ರೈತರು ಅತಂತ್ರ…

Read More

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉಧ್ಘಾಟಿಸಿದ ಬಿ ಎಸ್ ಯಡಿಯೂರಪ್ಪ

ಶಿಕಾರಿಪುರದ : ನಗರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ. ಈ ಪುಣ್ಯ ಸಮಯ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ. ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ…

Read More

ನಿಟ್ಟೂರು ಸಮೀಪದ ಹೊಳೆಯಲ್ಲಿ ಪುರುಷನ ಶವ ಪತ್ತೆ :

ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟುಕ ಗ್ರಾಮದ ಸೇತುವೆ ಬಳಿ ಪುರುಷನೊಬ್ಬನ ಶವ ಪತ್ತೆಯಾಗಿದೆ. ನಿಟ್ಟೂರು ಸಮೀಪದ ಮರಕುಟುಕ ಸೇತುವೆ ಬಳಿಯ ಹೊಳೆಯಲ್ಲಿ ಪುರುಷನೊಬ್ಬನ ಶವ ಗಿಡಗಂಟಿಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯವರು ಎಂದು ಶಂಕಿಸಲಾಗಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ತೆರಳಿದ್ದು ತನಿಖೆ ಕೈಗೊಂಡಿದ್ದಾರೆ.

Read More