Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ

Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದ ನಿವಾಸಿ ರವಿ ಎಲ್ ಗೌಡ (55 ) ಎಂಬುವವರ ಶವ ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊದಲ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ. ರವಿ ಗೌಡ ಶುಕ್ರವಾರ ಸಂಜೆಯಿಂದ ಕಾಣೆಯಾಗಿದ್ದು ಕುಟುಂಬಸ್ಥರು ಎಲ್ಲಾ ಕಡೆ ಹುಡುಕಿ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಇಂದು ಶವವಾಗಿ ಪತ್ತೆಯಾಗಿದ್ದಾರೆ. ರವಿ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು…

Read More

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ  ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…

Read More

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್ ರಿಪ್ಪನ್ ಪೇಟೆ;  ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲು ಹೇಳಿ ಆ ಹಣವನ್ನು ಸರ್ಕಾರಕ್ಕೆ ವಾಪಾಸ್ ಹೋಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ….

Read More

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

Read More

ಬುಲೆಟ್ ಬೈಕ್‌ ನಲ್ಲಿ ಅವಿತು ಕುಳಿತ ಬುಸ್ ಬುಸ್ ನಾಗಪ್ಪ|snake

ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ  ಫ್ಯಾಕ್ಟರಿ ಔಟ್​ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್​ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು. ನೋಡನೋಡುತ್ತಿದ್ದಂತೆ ಬುಲೆಟ್​ನ ಹೆಡ್​ಲೈಟ್​ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್​ಲೈಟ್​ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್​ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ.  ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ…

Read More

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ : ಸದನದಲ್ಲಿ ಗುಡುಗಿದ ಶಾಸಕ ಹರತಾಳು ಹಾಲಪ್ಪ|halappa

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಸದನದಲ್ಲಿ ಗುಡುಗಿದ್ದಾರೆ. ಅಧಿವೇಶನದಲ್ಲಿ ಮಾತನಾಡುತ್ತಾ ಶರಾವತಿ ಮುಳುಗಡೆ ಸಂತ್ರಸ್ಥರನ್ನು ತೆರವುಗೊಳಿಸಲು ಹೊರಟರೆ ರಕ್ತಕ್ರಾಂತಿಯೊಂದಿಗೆ ಸಾಮೂಹಿಕ ಆತ್ಮಹತ್ಯೆ ನಡೆಯುತ್ತದೆ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದರು. ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಿಸಲು ಸರ್ಕಾರ ಸುಮಾರು 8 ಸಾವಿರ ಕುಟುಂಬಗಳನ್ನು ರಾತ್ರೋರಾತ್ರಿ ಎಬ್ಬಿಸಿ, ಬೇರೆ ಬೇರೆ ಕಡೆಗಳಲ್ಲಿ ತಂದು ಬಿಟ್ಟಿತು. ಈಗಲೂ ಇವರ ಹೆಸರಿಗೆ…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

Ripponpete | ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು

ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ  ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು    ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ…

Read More

ಸಾಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನ – ಮಾರಕಾಸ್ತ್ರಗಳ ಸಮೇತ ಆರೋಪಿಗಳ ಬಂಧನ|drugs

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್‌ ದಂಧೆ ಇದೀಗ ಮಲೆನಾಡಿಗೂ ವ್ಯಾಪಿಸಿದೆ. ಮಂಗಳೂರಿನಿಂದ ಮಾದಕ ದ್ರವ್ಯಗಳನ್ನು ತಂದು ಸಾಗರದಲ್ಲಿ ಮಾರಲು ಮಂದಾಗಿದ್ದ ತಂಡವೊಂದನ್ನು ಸಾಗರ ನಗರ ಠಾಣೆ ಪೊಲೀಸರು ಹತ್ತಿಕ್ಕಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಇದರ ಹಿಂದಿರುವ ಒಂದು ಕೊಲೆ ಯತ್ನದ ಪ್ಲ್ಯಾನ್‌ ಕೂಡಾ ಬಯಲಾಗಿದೆ. ಮಂಗಳೂರಿನಿಂದ ಮಾದಕ ವಸ್ತು ತಂದು ಸಾಗರದಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರದ ಅಣಲೆಕೊಪ್ಪ ಬಳಿ ಪೊಲೀಸರು ದಾಳಿ ಸಂಘಟಿಸಿದ್ದರು. ಈ ವೇಳೆ, ಸೃಜನ್ ಶೆಟ್ಟಿ, ತಿಲಕ್…

Read More

ಖಾಸಗಿ ವೀಡಿಯೋ ಚಿತ್ರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ – ಪ್ರಕರಣ ದಾಖಲು|cybercrime

ಶಿವಮೊಗ್ಗ : ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ಮತ್ತು ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಸಿ ತನ್ನ ಬಳಿ ಬರುವಂತೆ ಬ್ಲ್ಯಾಕ್ ಮೇಲ್ ಮಾಡಿ, ಮಹಿಳೆಯ ಸಂಬಂಧಿಕರಿಗೆ ಆ ಖಾಸಗಿ ಫೋಟೊ, ವಿಡಿಯೋಗಳನ್ನು ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಮಹಿಳೆಯೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಬೆಂಗಳೂರಿನಲ್ಲಿದ್ದಾಗ ಮಹಿಳೆಯ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಹಿಳೆಯು ಶಿವಮೊಗ್ಗದಲ್ಲಿ ವಾಸವಿದ್ದು ಆಕೆಗೆ ಕರೆ ಮಾಡಿ ತನ್ನೊಂದಿಗೆ ಬಂದಿರುವಂತೆ ಒತ್ತಡ ಹೇರುತ್ತಿದ್ದ. ಇಲ್ಲದ್ದಿದ್ದರೆ ಸಂಬಂಧಿಕರಿಗೆ ಖಾಸಗಿ…

Read More