ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ…

Read More

Konanduru | ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ

ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಣಂದೂರಿನ ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ( 68) ವರ್ಷ ಇಂದು ಬುಧವಾರ ಮದ್ಯಾನ್ಹ ವಿಧಿವಷರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಕೋಣಂದೂರು ಭಾಗದಲ್ಲಿ ಪತ್ರಿಕಾ ವಿತರಕರಾಗಿ, ವರದಿಗಾರರಾಗಿ ಸುಮಾರು 3 ದಶಕಗಳಿಗೂ ಹೆಚ್ಚು ಕಾಲ ತಮ್ಮ ಸೌಮ್ಯ ಮತ್ತು ಮೃದು ಸ್ವಭಾವದಿಂದ ಎಲ್ಲರೊಂದಿಗೆ ಪ್ರೀತಿ ಪಾತ್ರರಾಗಿ ಕರ್ತವ್ಯ ನಿರ್ವಹಿಸಿ ಕೋಣಂದೂರು ಭಾಗದಲ್ಲಿ ಜನಮನ್ನಣೆ ಪಡೆದಿದ್ದರು. ಆ ಭಾಗದಲ್ಲಿ ಬಂಡಾರಿ ಸಮುದಾಯದ ಏಳಿಗೆಗಾಗಿ…

Read More

ಕಾಲೇಜು ವೇಳಾಪಟ್ಟಿ ಬದಲಾವಣೆಗೆ ವಿರೋದಿಸಿ ಸಾಗರ ಪದವಿ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ : ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ

ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ…

Read More

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಚರಣೆ : ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ವಾಪಾಸ್

ಶಿವಮೊಗ್ಗ: 2021 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 518 ಸ್ವತ್ತು ಕಳವು ಪ್ರಕರಣ ವರದಿಯಾಗಿದ್ದು ಅಂದಾಜು ಮೌಲ್ಯ 6,23,91,2147 ರೂ. ಎಂದು ಅಂದಾಜಿಸಲಾಗಿದೆ. ಅದರಲ್ಲಿ 3,03,59,176 ರೂ. ಮೌಲ್ಯದ ಮಾಲುಗಳನ್ನು ಪತ್ತೆ ಮಾಡಲಾಗಿದ್ದು, ಸದರಿ ಮಾಲಿನ ವಾರಸುದಾರರಿಗೆ ಬಿಟ್ಟು ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ. ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಮಾಲ್ ಗಳನ್ನು ವಾರಸುದಾರರಿಗೆ ಬಿಟ್ಟುಕೊಡುವ ಸಮಾರಂಭದ ಸುದ್ದಿಗಾರರೊಂದಿಗೆ ಮಾತನಾಡಿದರು….

Read More

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ | Thirthahalli

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ಆರು ತಿಂಗಳಿಂದ ಸರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಕೊಡದೇ ಅಲೆದಾಡಿಸುತ್ತಿದ್ದ ಅಧಿಕಾರಿಗಳಿಗಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಜಾತಿ ಪ್ರಮಾಣ…

Read More

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ ಶಿವಮೊಗ್ಗ: ಜಿಲ್ಲಾ ಕೇಂದ್ರದ ತಹಶೀಲ್ದಾರ್ ಕಾರ್ಯಾಲಯದ ಮೇಲೆ ಇಂದು ಲೋಕಾಯುಕ್ತ ಪೊಲೀಸರ ತಂಡ ಹಠಾತ್ ಭೇಟಿ ನೀಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ಆದೇಶದ ಮೇರೆಗೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂದಿರುವ 15 ಅಧಿಕಾರಿಗಳ ತುಕಡಿಯು ತಹಶೀಲ್ದಾರ್ ಕಚೇರಿ ಸೇರಿದಂತೆ ಕಂದಾಯ ನಿರೀಕ್ಷಕರ (R.I) ಕಚೇರಿಗಳಲ್ಲಿನ ನೂರಾರು ಕಡತಗಳನ್ನು ಪರಿಶೀಲನೆಗೆ ಒಳಪಡಿಸಿದೆ. ನಗರದ ಹೊರವಲಯದ ಗೋವಿಂದಾಪುರದಲ್ಲಿ ಸುಮಾರು 5.36 ಎಕರೆ ವಿಸ್ತೀರ್ಣದ ಸರ್ಕಾರಿ…

Read More

Shivamogga |ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಲೋಕೇಶ್ ಎಂಬುವವರು, 10ನೇ ತರಗತಿ ವಿದ್ಯಾರ್ಥಿ ಧನುಷ್ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಾಲು, ತೊಡೆ, ಬೆನ್ನಿಗೆ ಬಾಸುಂಡೆ ಬಂದಿದೆ. ಗಾಯಾಳು ವಿದ್ಯಾರ್ಥಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ…

Read More

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್| ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು..!!

ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು ! ಭದ್ರಾವತಿ : ಕಾಳನಕಟ್ಟೆಯಲ್ಲಿ ಭದ್ರಾ ನದಿಯ ಚಾನೆಲ್  ನೀರಿನಲ್ಲಿ ಆಡಲು ಹೋದ ಬಾಲಕಿ ನೀರು ಪಾಲಾಗಿದ್ದು ಆಕೆಗಾಗಿ ಹುಡುಕಾಟ ಆರಂಭವಾಗಿದೆ. ಕಾಳನಕಟ್ಟೆಯಲ್ಲಿ ಭದ್ರ ನದಿಯ ಚಾನೆಲ್ ನೀರಿನಲ್ಲಿ ಇದೇ ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಮುಂದಾಗಿದ್ದರು. ಈ ವೇಳೆ ನೀರಿನಲ್ಲಿ ಆಟವಾಡಲು ಬಯಸಿದ ಮಹಿಳೆಯ 12 ವರ್ಷದ ಮಗಳು ಚಾನೆಲ್ ನೀರು ಪಾಲಾಗಿದ್ದಾಳೆ. ತಾಯಿ ಸುಂದರಮ್ಮ ಈಜು ಕಲಿಯತಿದ್ದರಿಂದ ನೀರಿಗಿಳಿದು ಹುಡುಕಾಡಿದ್ದಾರೆ. ಮಗಳು ಸಿಗದ…

Read More

ಎಂಎಲ್ ಸಿ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ..!!! ಈಶ್ವರಪ್ಪ ಪುತ್ರ ಕಾಂತೇಶ್ ಗೆ ತಮ್ಮ ವಿರುದ್ದ ಸ್ಪರ್ಧಿಸಲು ಪಂಥಾಹ್ವಾನ|ayanur manjunath

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಇಳಿಯಬೇಕು ಎಂದು ನಿರ್ಧಾರ ಮಾಡಿದ್ದೇನೆ. ಶೀಘ್ರದಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಚುನಾವಣಾ ಆಖಾಡಕ್ಕೆ ಇಳಿಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಕೂಡ ನಿಲುವು ಪ್ರಕಟಿಸಿದ್ದೇನೆ. ಪಕ್ಷದ ವೇದಿಕೆಯಲ್ಲಿ ಕೂಡ ನನ್ನ ವಿನಂತಿಯನ್ನು ಸಲ್ಲಿಸಿದ್ದೇನೆ. ಆದರೆ, ವಿನಂತಿಗೆ ಪೂರಕವಾಗಿ ನನಗೆ ಪಕ್ಷದಿಂದ ಟಿಕೆಟ್ ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಆದರೆ ಕೆಲವರ ಮಕ್ಕಳ…

Read More

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ  ರಿಪ್ಪನ್‌ಪೇಟೆ : ‌ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್‌ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ‌. ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ…

Read More