ಮಗುವಿಗೆ ಎದೆಹಾಲು ಕಡಿಮೆಯಾಗಿದ್ದಕ್ಕೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು|crime news

ಮಗುವಿಗೆ ಹಾಲುಣಿಸಲು ಎದೆಹಾಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಪುಟ್ಟ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ ಶಾಂತಾ(28) ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಹೆರಿಗೆಯ ನಂತ್ರ ಆಕೆ ತವರು ಮನೆಯಾದಂತ ಕುಪ್ಪಗಡ್ಡೆಗೆ ಬಂದಿದ್ದರು. ಹೆರಿಗೆಯ ಬಳಿಕ ಶಾಂತಾಗೆ ಎದೆಹಾಲು ಬರುತ್ತಿರಲಿಲ್ಲ. ಬಂದರೂ ಒಂದೂವರೆ ತಿಂಗಳ ಮಗುವಿಗೆ ಸಾಕಾಗುವಷ್ಟು ಆಗುತ್ತಿರಲಿಲ್ಲ ಎನ್ನಲಾಗುತ್ತಿದೆ. ಈ ಕಾರಣದಿಂದ…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ | excise raid

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸುತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ ಗಾಂಜಾವನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ  ಕೆ ಕೆ ಅಬಕಾರಿ ಉಪ ಆಯುಕ್ತರು,  ಶಿವಮೊಗ್ಗ ಜಿಲ್ಲೆ ಇವರುಗಳ ನಿರ್ದೇಶನದಲ್ಲಿ ನೌಶಾದ್ ಅಹಮದ್ ಖಾನ್,  ಉಪ ಅಧಿಕ್ಷಕರು ಉಪ ವಿಭಾಗ ಶಿವಮೊಗ್ಗ ಇವರ ಮಾರ್ಗದರ್ಶನ ದಲ್ಲಿ…

Read More

ಬೈಕ್ ಅಪಘಾತ : ಅಪಘಾತವಾದ ಬೈಕ್‌ ಮೈಮೇಲೆ ಬಿದ್ದು ಸವಾರ ಸಾವು

ತೀರ್ಥಹಳ್ಳಿ : ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಬೈಕ್ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಇಂದು ಬೆಳಗಿನ ಜಾವ ಈ ಅಪಘಾತವಾಗಿದೆ. ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು 37 ವರ್ಷದ ರವಿನಾಯ್ಕ್ ಎಂದು ಗುರುತಿಸಲಾಗಿದ್ದು, ನಳೀನ್ ಕೊಪ್ಪ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ರಸ್ತೆ…

Read More

ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.

Read More

ರಿಪ್ಪನ್ ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿ : ಅಡಿಕೆ ತೋಟಕ್ಕೆ ಹಾನಿ

ರಿಪ್ಪನ್ ಪೇಟೆ : ಮೂಗೂಡ್ತಿ ಅರಣ್ಯ ಜೀವಿ ವಲಯ ವ್ಯಾಪ್ತಿಯ ತಳಲೆ ಗ್ರಾಮದ ಕಾರೆಹೊಂಡ ದಲ್ಲಿರುವ ರೈತರ ಅಡಿಕೆ ತೋಟಕ್ಕೆ ಮಂಗಳವಾರ ರಾತ್ರಿ ಆನೆಯೊಂದು ದಾಳಿ ನಡೆಸಿ ಅಡಿಕೆ ತೋಟ ಹಾನಿಗೊಳಿಸಿದ ಘಟನೆ ನಡೆದಿದೆ. ರೈತ ಪರಶುರಾಮ ಎಂಬವರ ಅಡಿಕೆ ತೋಟಕ್ಕೆ ದಾಳಿ ಮಾಡಿದ ಆನೆಯು ತೆಂಗು ಹಾಗೂ ಅಡಿಕೆ ಮರಗಳನ್ನು ಕಿತ್ತು ಮುರಿದು ಹಾನಿಗೊಳಿಸಿ ರೈತರಿಗೆ ನಷ್ಟವನ್ನುಂಟು ಮಾಡಿದೆ.ಅನಾಹುತದ ಘಟನೆಯನ್ನು ತಿಳಿದ ಗ್ರಾಮಸ್ಥರು ತೋಟಕ್ಕೆ ಆಗಮಿಸಿ ಇದುವರೆಗೆ ಈ ಭಾಗದಲ್ಲಿ ಆನೆ ಬಂದಿರುವ ನಿದರ್ಶನ ಇರಲಿಲ್ಲ…

Read More

HOSANAGARA | ಪಟಗುಪ್ಪ ಸೇತುವೆ ಬಳಿ ಗೋ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

HOSANAGARA | ಪಟಗುಪ್ಪ ಸೇತುವೆ ಬಳಿ ಹಸುವಿನ ಕರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ Hosanagara Police in Shivamogga district arrested four accused in connection with the illegal slaughter of a calf near Hosakoppa. The accused have been produced before the court. ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಸುವಿನ ಕರು ಹತ್ಯೆ ಪ್ರಕರಣವನ್ನು ಹೊಸನಗರ…

Read More

ಸೂಡೂರು ಬಳಿ ಹಿಟ್ ಅಂಡ್ ರನ್: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

A hit and run accident near Suduru Gate in Ripponpet claimed the life of a 62-year-old scooter rider. Police have registered a case and started investigation. ರಿಪ್ಪನ್‌ಪೇಟೆ: ತಾಲೂಕಿನ ಸಮೀಪದ ಸೂಡೂರು ಗೇಟ್ ಬಳಿ ಹಿಟ್ ಅಂಡ್ ರನ್ ಪ್ರಕರಣ ಸಂಭವಿಸಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹಣಗೆರೆ ಕಟ್ಟೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಎಚ್ಚರಿಕೆ: ಹರತಾಳು ಹಾಲಪ್ಪ

Former minister Haratallu Halappa issues a legal notice to Sagar MLA Belluru Gopalakrishna over alleged false statements on Siganduru Temple, warning of a ₹5 crore defamation lawsuit. ಬೆಂಗಳೂರು: ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿರುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಎಚ್ಚರಿಸಿದರು….

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು ತೀರ್ಥಹಳ್ಳಿ: ಪಟ್ಟಣದಲ್ಲಿ ಕಾರೊಂದು ಏಕಾಏಕಿ ಬಟ್ಟೆ ಅಂಗಡಿ ಒಳಗೆ ನುಗ್ಗಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ. ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ ಟೈಲ್ಸ್  ಅಂಗಡಿಯ ಕೆಳಗೆ ಕಾರು ಬಿದ್ದಿದ್ದು, ಒಂದು ಸ್ಕೂಟಿ ಕೂಡ ಪುಡಿ ಪುಡಿಯಾಗಿದೆ. ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ದೊಡ್ಡ ದುರಂತ ನಡೆಯುತ್ತಿತ್ತು ಎಂದು ಸ್ಥಳೀಯರು ಹೇಳುತಿದ್ದಾರೆ. ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ…

Read More
Exit mobile version