Headlines

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…

Read More

ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…

Read More

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ..

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ.. ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ.ನ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ರವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು…

Read More

ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ ಸಂಬಂಧಿಸಿದಂತೆ ಪ್ರಿನ್ಸಿಪಾಲ್ ಗೆ ಮತ್ತೊಂದು ಕುತ್ತು !! ಹಾಗಾದರೆ ಅದೇನು ????

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಿನ್ಸಿಪಲ್ ಅನಾಗರಿಕನಂತೆ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದರು. ಬೆಳಿಗ್ಗೆಯಿಂದ ಶುರುವಾದ ಪ್ರತಿಭಟನೆಯು ಕ್ಷಣಕ್ಷಣಕ್ಕೂ ಹೆಚ್ಚಿನ ರೋಚಕತೆಯನ್ನು ಪಡೆಯುತ್ತಿತ್ತು ಕೊನೆಗೂ ಪ್ರಿನ್ಸಿಪಲ್ ಚಂದ್ರಪ್ಪರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಕೇಂದ್ರ ಕಚೇರಿಗೆ ಹಾಜರಾಗುವಂತೆ     ಇಲಾಖೆಯಿಂದ ತನಿಖೆಗೆ ಆದೇಶ ಕೂಡ ಹೊರಬಿತ್ತು.ಇದರಿಂದ ನಿರಾಳ ಗೊಂಡಂತಹ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮೊಟಕುಗೊಳಿಸಿ ಶಾಲೆಗೆ ತೆರಳಿದರು. ಆದರೆ ಪ್ರಿನ್ಸಿಪಾಲ್ ಗೆ ಮಾತ್ರ ಮತ್ತೊಂದು ಕುತ್ತು  ರೆಡಿಯಾಗಿತ್ತು. :::ವಿದ್ಯಾರ್ಥಿ ಪೋಷಕರಿಂದ ಪ್ರಿನ್ಸಿಪಲ್…

Read More

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ  ರಿಪ್ಪನ್‌ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು. ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ…

Read More

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident

ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಜೇನಿ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ತುಮಕೂರು ಮೂಲದ ನಾಲ್ವರು ಸಿಗಂದೂರು ದೇವಸ್ಥಾನಕ್ಕೆ ದರ್ಶನಕ್ಕೆಂದು ತೆರಳುತಿದ್ದಾಗ ಮಾರ್ಗ ಮಧ್ಯದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ…

Read More

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read More