ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport
ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…