Headlines

ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ ಮಾಡಿದ ಆರೋಪಿಯನ್ನು ಬಂಧಿಸಿದ ರಿಪ್ಪನ್‌ಪೇಟೆ ಪೊಲೀಸರು :

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣದ ಆರೋಪಿಯ ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ರಿಪ್ಪನ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದೇವಳ್ಳಿ ಗ್ರಾಮದ ಬಾಬು ಬೈರುಗವಳಿ ಬಿನ್ ಬೈರುಗವಳಿ ಎಂಬ (22) ವರ್ಷದ ಆರೋಪಿಯನ್ನು ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ರಿಪ್ಪನ್‌ಪೇಟೆಯ ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ…

Read More

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .!

ಅಡಿಕೆ ಕಳ್ಳತನಗೈದಿದ್ದ ಆರೋಪಿಯ ಬಂಧನ – ಲಕ್ಷಾಂತರ ರೂ ಮೌಲ್ಯದ ಮಾಲು ವಶಕ್ಕೆ .! ಭದ್ರಾವತಿ : ತಾಲೂಕಿನ ಅರಹತೊಳಲು ಗ್ರಾಮದ ಮನೆಯ ಮುಂದೆ ಇಟ್ಟಿದ್ದ ಅಡಿಕೆ ಚೀಲಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಯನೂರು ಕೋಹಳ್ಳಿಯ  ಯುವಕನನ್ನು ಬಂಧಿಸಿ ಕಳುವಾದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಅಡಿಕೆ ಕಳುವಾದ ಬಗ್ಗೆ ಹರ್ಷ ಎನ್ನುವವರು ಹೊಳೆಹೊನ್ನೂರು ಪೊಲೀಸರಿಗೆ ದೂರು ನೀಡಿದ್ದರು.  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ  ಆಯನೂರು ಕೋಹಳ್ಳಿಯ ಸಯ್ಯದ್ ನವೀದ್ (೨೯) ಸಿಕ್ಕಿಬಿದ್ದಿದ್ದಾನೆ.  ಈತನನ್ನು ದಸ್ತಗಿರಿ…

Read More

ರಿಪ್ಪನ್ ಪೇಟೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಜೆ ಎನ್ ಷಣ್ಮುಖಪ್ಪ ಗೌಡ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಜಯದೇವ ರೈಸ್ ಮಿಲ್ ನ ಮಾಲೀಕರಾದ ಜೆ ಎನ್ ಷಣ್ಮುಖಪ್ಪ ಗೌಡರು(99) ಇಂದು ರಿಪ್ಪನ್ ಪೇಟೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಮಧ್ಯಾಹ್ನ ತಮ್ಮ ರಿಪ್ಪನ್ ಪೇಟೆಯ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಏಳು ಪುತ್ರರು,ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ಶುಕ್ರವಾರ ಬೆಳಿಗ್ಗೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸ್ವಾತಂತ್ರ್ಯ ಹೋರಾಟಗಾರ ಜೆ ಎನ್…

Read More

ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.  ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳ ಹಿಂದಿದೆಯಾ ಮರಳು ಮಾಫ಼ಿಯಾ?????? ಪಿಎಸ್ ಐ ಪರವಾಗಿ ಹೊಸ ವೀಡಿಯೋ ವೈರಲ್

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಇತ್ತೀಚೆಗೆ ಹೊಸನಗರ ಪಟ್ಟಣದ ನಾಗರೀಕರು ಮಾಡಿದ್ದ ವೀಡಿಯೋ ಗೆ ವಿರುದ್ದವಾಗಿ ಇಂದು ಕೆಲವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದು ಮಾತನಾಡಿರುವ ಹೊಸನಗರದ ಸಾರ್ವಜನಿಕರು ಪಿಎಸ್ ಐ ಮೇಲೆ ಇರುವ ಆರೋಪಕ್ಕೆ ಎಳೆ ಎಳೆಯಾಗಿ ಉತ್ತರ ನೀಡಿದ್ದಾರೆ. ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಯಾಕಿಷ್ಟು ಧ್ವೇಷ ಎಂದೂ ಕೆದಕುತ್ತಾ ಹೊರಟರೇ ಕೊನೆಗೆ ಸಿಗುವುದೇ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಮಾಫ಼ಿಯಾ!!! ಹೌದು ರಾಜೇಂದ್ರನಾಯ್ಕ್ ಕರ್ತವ್ಯಕ್ಕೆ ಬಂದ ನಂತರದ ದಿನಗಳಿಂದ ಮರಳು…

Read More

11 ಕೆ ವಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ. ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ. ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ…

Read More

ತುಮಕೂರು ಮೂಲದ ಯುವಕ ಶಿವಮೊಗ್ಗ ನಗರದ ಲಾಡ್ಜ್ ನಲ್ಲಿ ಆತ್ಮಹತ್ಯೆ :

ಶಿವಮೊಗ್ಗ  ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ಒಂದರಲ್ಲಿ ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮ ಹತ್ಯೆ ಮಾಡಿಕೊಂಡ ಯುವಕ ತುಮಕೂರು ಜಿಲ್ಲೆ ಕೆರೆಸೂರಗೊಂಡನ ಹಳ್ಳಿಯ ಮಂಜು ನಾಥ್ (26) ಎಂದು ತಿಳಿದು ಬಂದಿದೆ. ಡೆತ್‌ನೋಟ್‌ ಪತ್ತೆ:  ಈತ ಅಕ್ಕ ಸುಧಾಳನ್ನು ಕೊಲೆಗೈದಿದ್ದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಸುಧಾ ತನ್ನ ಗಂಡನನ್ನು ಅವಳ ಸ್ನೇಹಿತರ ಜತೆ ಸೇರಿ ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಳು. ಈ ಕೋಪದಲ್ಲಿ ಸುಧಾಳನ್ನು ಕೊಲೆ…

Read More

ಜಾನಪದ ಕಲೆಯನ್ನು ಶಾಶ್ವತವಾಗಿ ಉಳಿಸಬೇಕಿದೆ: ಕಾಗೋಡು ತಿಮ್ಮಪ್ಪ

ರಿಪ್ಪನ್‌ಪೇಟೆ: ನಮ್ಮ ಪೂರ್ವಜನರ ಜೀವನದಲ್ಲಿ ಹಾಸುಹೊಕ್ಕಾಗಿದ್ದ ಜಾನಪದ ಕಲೆ, ಸಾಹಿತ್ಯ ಪ್ರಕಾರಗಳು ಸರ್ವಕಾಲಕ್ಕೂ ಜನಮಾನಸದಲ್ಲಿ ಶಾಶ್ವತವಾಗಿ ಉಳಿಸುವ ಜವಾಬ್ದಾರಿಯನ್ನು ಇಂದಿನ ಯುವ ಪೀಳಿಗೆ ನಿರ್ವಹಿಸಬೇಕಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಕೆಂಚನಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಶ್ರೀಶನಿಪರಮೇಶ್ವರ ಯುವಕ ಸಂಘ, ಜಾನಪದ ಕಲಾ ಹಾಗೂ ಸಾಹಿತ್ಯ ವೇದಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪುನಿತ್ ರಾಜ್‌ಕುಮಾರ್ ಸ್ಮರಣಾರ್ಥ ಸೋಮವಾರ ಸಂಜೆ ಆಯೋಜಿಸಲಾಗಿದ್ದ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮತ್ತು ಶಿಕ್ಷಕ…

Read More

Crime News | ಸಾಗರದಲ್ಲಿ ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಕಳ್ಳತನ..!!!

ಶಿವಮೊಗ್ಗ ಜಿಲ್ಲೆ ಸಾಗರ ಟೌನ್​ನಲ್ಲಿ ಬರೋಬ್ಬರಿ 17 ಲಕ್ಷ ರೂಪಾಯಿಯ ಸಿಗರೇಟ್ ಕಳ್ಳತನವಾಗಿದೆ. ಈ ಸಂಬಂಧ ಸಾಗರ ಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ದೂರು ಕೂಡ ದಾಖಲಾಗಿದೆ. ಇಲ್ಲಿನ ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪೆನಿಯಲ್ಲಿ ಭಾನುವಾರ ರಾತ್ರಿ ₹17 ಲಕ್ಷ ಮೌಲ್ಯದ ಸಿಗರೇಟ್ ಬಂಡಲ್‌ಗಳು ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ.  ಸಾಗರ ತಾಲ್ಲೂಕಿನ ವಿವಿಧ ಅಂಗಡಿಗಳಿಗೆ ಸಿಗರೇಟ್ ಪೂರೈಕೆ ಮಾಡುವ ಕೆಲಸಮಾಡುತ್ತಿರುವ ಈ ಅಂಗಡಿಯಲ್ಲಿ ರೋಲಿಂಗ್​ ಶೆಟ್ಟರ್​ ಒಡೆದು ಕಳ್ಳತನ ಮಾಡಲಾಗಿದೆ.  ಶೆಟರ್ ಮುರಿದು ಒಳಕ್ಕೆ ಬಂದಿರುವ ಕಳ್ಳರು,…

Read More

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ   ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು. ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ  ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ….

Read More