Headlines

ಕಾಡು ಪ್ರಾಣಿಗಳನ್ನು ಬೇಟೆಯಾಡುತಿದ್ದ ಆರೋಪಿಯ ಬಂಧನ – ಜಿಂಕೆ ಚರ್ಮ ಸಹಿತ ಬಂದೂಕು ವಶಕ್ಕೆ.!

ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಹೊನ್ನಾಳಿ ವಲಯ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿದ್ದು, ತಪ್ಪಿಸಿಕೊಂಡ ಮೂವರ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದೆ. ಚಿನ್ನಿಕಟ್ಟೆ ಗ್ರಾಮದ ಮೋಹನ್ ಬಂಧಿತ ಆರೋಪಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 12 ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಗಳಾದ ಚಿನ್ನಿಕಟ್ಟೆ ಗ್ರಾಮದ ಶಿವಕುಮಾರ, ದಿನೇಶ, ವಡವೇಲು ಬಂಧನಕ್ಕೆ ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಹೊನ್ನಾಳಿ ವಲಯ ಅರಣಾಧಿಕಾರಿ ಕಿಶೋರ್‌ನಾಯ್ಕ ತಿಳಿಸಿದ್ದಾರೆ. ಹೊನ್ನಾಳಿ ಪ್ರಾದೇಶಿಕ ಅರಣ್ಯ ವಲಯದ…

Read More

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್‌, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ…

Read More

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಆನಂದಪುರ : ಸಾಲಭಾದೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡೆಹಳ್ಳಿ ಗ್ರಾಪಂ ವ್ಯಾಪ್ತಿಯ ಗೇರುಬೀಸ್ ನಲ್ಲಿ ನಡೆದಿದೆ. ಗೇರುಬೀಸು ನಿವಾಸಿ ರಾಮಚಂದ್ರ (48) ಮೃತ ದುರ್ಧೈವಿಯಾಗಿದ್ದಾರೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವ್ಯವಸಾಯಕ್ಕಾಗಿ ಸಾಲ  ಮಾಡಿದ್ದು ಬೆಳೆಯು ಕೈಕೊಟ್ಟ ಹಿನ್ನಲೆಯಲ್ಲಿ ಮನನೊಂದು ಮನೆಯ ಹಿಂಭಾಗದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಎತ್ತುಗಳ ಮೈ ತೊಳೆಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು:

ಹೊಸನಗರ: ತಾಲೂಕಿನ ನಗರ ವ್ಯಾಪ್ತಿಯ ಬೇಳೂರು ಸಮೀಪದ ಹೆಣ್ಣೆಬೈಲಿನ ಶರಾವತಿ ಹಿನ್ನೀರಿನಲ್ಲಿ ಎತ್ತುಗಳ ಮೈತೊಳೆಯಲು ಹೋದ ವ್ಯಕ್ತಿಯೋರ್ವ ನೀರುಪಾಲಾದ ಘಟನೆ ಶುಕ್ರವಾರ ನಡೆದಿದೆ. ಮೃತನನ್ನು ಬೇಳೂರು ಗ್ರಾಮದ ಸುರೇಶ್ (48) ಎಂದು ಗುರುತಿಸಲಾಗಿದೆ. ಜ.14 ರಂದು ಈತನು ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿ ಎತ್ತುಗಳ ಮೈತೊಳೆಯುವ ಸಲುವಾಗಿ ಶರಾವತಿ ಹಿನ್ನೀರು ಪ್ರದೇಶಕ್ಕೆ ಬಂದಾಗ ಈ ಘಟನೆ ನಡೆದಿದೆ. ಗ್ಯಾಂಗ್ರಿನ್ ನಿಂದಾಗಿ ಮೃತ ಸುರೇಶ್ ಅವರ ಒಂದು ಕಾಲನ್ನು ಕತ್ತರಿಸಿ ತೆಗೆಯಲಾಗಿತ್ತು. ಹೀಗಾಗಿ ನೀರಿನಲ್ಲಿ ಬಿದ್ದ ಅವರಿಗೆ ಮೇಲೆ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆ ; ಮುಂಜಾಗ್ರತೆಯಿಂದ ಬಜಾರ್ ಬಂದ್

ಶಿವಮೊಗ್ಗ : ಚೋರ್ ಬಜಾರ್ ನಲ್ಲಿ ಗಲಾಟೆ ಆಗಿದ್ದು ಬಜಾರ್ ನ್ನು ಬಂದ್ ಮಾಡಲಾಗಿದೆ. ವ್ಯಾಪಾರಸ್ಥರ ನಡುವೆಯೇ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಸುಮಾರು 8-10 ಜನ ಗಲಾಟೆ ಮಾಡಿದ್ದೂ ಇವರಲ್ಲಿ ಕೆಲವರ ಬಳಿ ಹರಿತವಾದ ಆಯುಧಗಳು ಕಂಡು ಬಂದಿದೆ.  ಯಾವುದೇ  ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಬಟ್ಟೆ ಮಾರುಕಟ್ಟೆಯನ್ನ ಬಂದ್ ಮಾಡಲಾಗಿದೆ. ನಗರದ ಗಾಂಧಿ ಬಜಾರ್ ಸಮೀಪದ ಶಿವಮೊಗ್ಗ ಚೋರ್ ಬಜಾರ್ ಖ್ಯಾತಿಯ ಬಟ್ಟೆ ಮಾರುಕಟ್ಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ…

Read More

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಹೊಸನಗರದಲ್ಲಿ ನಡೆದಿದೆ.ಹೌದು!ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಇಂಥಹ ಚಿತ್ರಣವೊಂದು ಕಂಡು ಬಂದಿದೆ. ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಇವರಿಬ್ಬರೂ ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ಹೊಸನಗರ ತಾಲೂಕು ಮುಂಬಾರು  ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ  ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ತೀರ್ಥಹಳ್ಳಿ :ಸರ್ಕಾರದ ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ : ತಹಸೀಲ್ದಾರ್ ಡಾ. ಶ್ರೀಪಾದ್

ತೀರ್ಥಹಳ್ಳಿ : ಕೊರೊನಾ ಸೋಂಕಿನ ಸಂದರ್ಭದಲ್ಲಿ  ಗಣೇಶೋತ್ಸವ ಆಚರಣೆ ಅತ್ಯಂತ ಸರಳವಾಗಿ ಶ್ರದ್ಧಾ ಭಕ್ತಿ ಭಾವದಿಂದ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ಸರ್ಕಾರದ ಎಲ್ಲಾ ಮಾನದಂಡ ಮತ್ತು.ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ ಎಂದು ತೀರ್ಥಹಳ್ಳಿ  ತಹಶೀಲ್ದಾರ್‌ ಡಾ. ಶ್ರೀಪಾದರವರು ಗಣೇಶೋತ್ಸವ ಆಚರಣೆ ಮಾಡುವ ಸಮಿತಿಯವರಿಗೆ ಸೂಚನೆ ನೀಡಿದರು. ಇಂದು ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪೋಲೀಸ್ ಇಲಾಖೆ ವತಿಯಿಂದ ಕರೆಯಲಾಗಿದ್ದ ಗಣೇಶೋತ್ಸವ ಆಚರಣೆಯ ಕುರಿತಾದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕೊರೊನ…

Read More

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಡಿ ಎಸ್​ ಅರುಣ್

ಶಿವಮೊಗ್ಗ :  ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ…

Read More