ವೀರಶೈವ ಲಿಂಗಾಯತ ಮಹಾಸಭಾದಿಂದ ಬ್ರಹ್ಮೇಶ್ವರದಲ್ಲಿ ಜ.08 ರಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರಿಗೆ ಸನ್ಮಾನ ಕಾರ್ಯಕ್ರಮ|bsy
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕ್ ಘಟಕ ಹಾಗೂ ಬ್ರಹ್ಮೇಶ್ವರ ವೀರಭದ್ರೇಶ್ವರ ಸೇವಾ ಸಮಿತಿಯವರು ಜನವರಿ 8 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮೇಶ್ವರದ ವೀರಶೈವ ಸಭಾಭವನದಲ್ಲಿ ದಣಿವರಿಯದ ಜನನಾಯಕ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ಬಿ.ಯುವರಾಜ್ ತಿಳಿಸಿದರು. ರಿಪ್ಪನ್ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಸನ್ಮಾನ ಸಮಾರಂಭದ ದಿವ್ಯಸಾನಿಧ್ಯವನ್ನು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ವಹಿಸುವರು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ…