Headlines

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು. ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು  ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು. ಈ ಸಂದರ್ಭದಲ್ಲಿ  ತಹಶೀಲ್ದಾರ್ ಸೊರಬ, ಪುರಸಭೆ ಅಧ್ಯಕ್ಷರು ಹಾಗೂ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸೊರಬ ವಿಧಾನಸಭಾ ಕ್ಷೇತ್ರದ ಸೊರಬ ಪಟ್ಟಣದ ದಂಡಾವತಿ ಸೇತುವೆ, ಹಳೆಸೊರಬ ಗ್ರಾಮದ ಕೆರೆ ತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ…

Read More

ವಿದ್ಯುತ್ ಸ್ಪರ್ಶದಿಂದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಸಾವು – ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ರೈತನೊಬ್ಬನ ದುರ್ಮರಣ|Electric shock

ರಿಪ್ಪನ್‌ಪೇಟೆ : ವಿದ್ಯುತ್ ತಂತಿ ತುಳಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಇಲ್ಲಿನ ಸಮೀಪದ ನಂಜವಳ್ಳಿ ಗ್ರಾಮದಲ್ಲಿ  ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಹರತಾಳು ಗ್ರಾಮದ ರೈತ ಶೇಷಗಿರಿ(45) ಮೃತ ದುರ್ದೈವಿಯಾಗಿದ್ದಾರೆ. ಇಂದು ಬೆಳಗ್ಗೆ ಮನೆಯ ಬಳಿ ಶೇಷಗಿರಿ ರವರ ಪತ್ನಿ ಹೂ ಕೀಳಲು ಹೋದಾಗ ಅವರಿಗೆ ವಿದ್ಯುತ್ ಸ್ಪರ್ಶಿಸಿ ಕೂಗಿದ್ದಾರೆ ಕೂಡಲೇ ಅವರನ್ನು ರಕ್ಷಿಸಲು ಹೋದ ಶೇಷಗಿರಿ ರವರು ಪಾದರಕ್ಷೆ ಧರಿಸದೆ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಮೂಲತಃ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಗ್ರಾಮದ ಒಡ್ಡಿನಬೈಲು ನಿವಾಸಿಯಾದ ಇವರು…

Read More

ಕಿಮ್ಮನೆ ರತ್ನಾಕರ್ ಮಂಜುನಾಥ್ ಗೌಡರಿಗೆ ಬರೆದ ಬಹಿರಂಗ ಪತ್ರದಿಂದ ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟ..!!!!

ತೀರ್ಥಹಳ್ಳಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡರ ನಡುವಿನ ಮುಸುಕಿನ ಗುದ್ದಾಟ ಇದೆ ಎಂದು ಹಲವರು ಹೇಳುತ್ತಿದ್ದರು ಅದೆಲ್ಲೂ ಕೂಡ ಬಹಿರಂಗವಾಗಿರಲಿಲ್ಲ. ಆದರೆ ಇದೀಗ  ಕಿಮ್ಮನೆ ರತ್ನಾಕರ್ ರವರು  ಮಂಜುನಾಥಗೌಡರಿಗೆ ಬರೆದಿರುವ ಬಹಿರಂಗ ಪತ್ರ ನೋಡಿದರೆ ಇಬ್ಬರ ಮದ್ಯೆ ಮತ್ತೇ ವಾರ್  ಶುರುವಾದಂತೆ ಕಾಣುತ್ತಿದೆ. ಆರ್.ಎಂ.ಮಂಜುನಾಥ್ ಗೌಡರ ಪಾದಯಾತ್ರೆ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಕಿಮ್ಮನೆ ರತ್ನಾಕರ್ ಆಗಸ್ಟ್ 8 ರ ಸೋಮವಾರ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ…

Read More

ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ

Children’s Market event was successfully organized at Koduru Government Higher Primary School, where students showcased entrepreneurial skills by selling vegetables, snacks, and healthy drinks with support from parents and teachers. ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ ರಿಪ್ಪನ್‌ಪೇಟೆ : ಇಲ್ಲಿನ ಕೋಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಮಕ್ಕಳ ಸಂತೆ’ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ಆಯೋಜಿಸಲಾಗಿತ್ತು….

Read More

ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…

Read More

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 7ನೇ ಬಾರಿ ಶೇಕಡಾ100% ಫಲಿತಾಂಶ

ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 7 ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 32 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೋಷಕರಿಗೂ ಹಾಗೂ ಶಿಕ್ಷಣ ಸಂಸ್ಥೆಯವರಿಗೆ ಹೆಮ್ಮೆಯನ್ನು ತಂದಿರುತ್ತಾರೆ….

Read More

ರಿಪ್ಪನ್ ಪೇಟೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಸಂಭ್ರಮ : ಸಂಭ್ರಮದ ಯಶಸ್ವಿಗೆ ಸಕಲ ಸಿದ್ಧತೆ : ಮಂಜುಳಾ ಕೇತಾರ್ಜಿ ರಾವ್

ರಿಪ್ಪನ್ ಪೇಟೆ : ಆಜಾದ್ ಕಿ ಅಮೃತ್ ಮಹೋತ್ಸವ ಅಂಗವಾಗಿ ರಿಪ್ಪನ್ ಪೇಟೆಯ ಗ್ರಾಮಾಡಳಿತ ಸಕಲಸಿದ್ಧತೆಯನ್ನು ಮಾಡಿದ್ದು 3000ಕ್ಕೂ ಅಧಿಕ ಜನರು ಈ ಸಂಭ್ರಮಕ್ಕೆ ಸಾಕ್ಷಿಗಳಾಗಲಿದ್ದಾರೆ ಎಂದು ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತರ್ಜಿ ರಾವ್ ಹೇಳಿದರು.  ಇಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಅವರು ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಆಜಾದ್ ಕೀ ಅಮೃತ್ ಮಹೋತ್ಸವವನ್ನು ಸಡಗರದಿಂದ ಆಚರಿಸಲು ದೇಶಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಸಿದ್ಧತೆಯನ್ನು ನಡೆಸುತ್ತಿದ್ದಾರೆ ಹಾಗೆಯೇ ನಮ್ಮ ರಿಪ್ಪನ್ ಪೇಟೆ ಗ್ರಾಮ…

Read More

ಕುಡಿದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ ಯುವಕರು : ಕುಡುಕರ ಹಾವಳಿಯಿಂದ ಬೆಚ್ಚಿ ಬೀಳುತ್ತಿರುವ ಜನತೆ!!!!! ರಿಪ್ಪನ್‌ಪೇಟೆಯ ಖಾಲಿ ಲೇಔಟ್ ಗಳೇ ಕುಡುಕರ ಸಾಮ್ರಾಜ್ಯ…!!!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಸಿದ್ದಪ್ಪನಗುಡಿಯಲ್ಲಿ ಮದ್ಯಪಾನ ಮಾಡುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸಿದ್ದಪ್ಪನಗುಡಿ ಸಮೀಪದಲ್ಲಿ ಕೃಷಿಕರೊಬ್ಬರು ತನ್ನ ಜಮೀನಿನಲ್ಲಿ ಶುಂಠಿ ನೆಡುವ ಕಾರ್ಯದಲ್ಲಿದ್ದಾಗ ಅವರದೇ ಜಮೀನಿನಲ್ಲಿ ಶಿವಮೊಗ್ಗ ಮೂಲದ ಅಮಾನುಲ್ಲಾ ಮತ್ತು ಕಿರಣ್ ಎಂಬ ಯುವಕರು ಮದ್ಯಪಾನ ಮಾಡುತಿದ್ದರು.ಮದ್ಯಪಾನ ಮಾಡಿ ಬಾಟಲ್ ಜಮೀನಿನಲ್ಲಿ ಒಡೆಯಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯು ಕೂಗಿಕೊಂಡ…

Read More

ಅದ್ದೂರಿಯಾಗಿ ಜರುಗಿದ ಕ್ಷತ್ರಿಯ ಸಮುದಾಯದ ಮೂಲಪುರುಷ ಶ್ರೀ ವೀರ ರುದ್ರ ವನ್ನಿಕುಲ ಮಹಾರಾಜರ ಜಯಂತಿ:

ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ  ವನ್ನಿಕುಲ ಕ್ಷತ್ರೀಯ ಸಮುದಾಯದ ಮೂಲಪುರುಷ ಶ್ರೀ ವೀರರುದ್ರ ವನ್ನಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಕೆ ನಂದಕುಮಾರ್ ಗೌಂಡರ್ ಮಾತನಾಡಿ ಇಲ್ಲಿಯವರೆಗೂ ನಮ್ಮ ಸಮುದಾಯದವರು ಜಯಂತಿ ಆಚರಣೆಯನ್ನು ಮಾಡುತ್ತಿರಲಿಲ್ಲ ಆದರೆ ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾ ಉದಯದ ನಂತರ ಈ ಆಚರಣೆಯನ್ನು ಕಳೆದ ವರ್ಷದಿಂದ…

Read More