Headlines

ಕೊಡಚಾದ್ರಿ ಬೆಟ್ಟಕ್ಕೆ ಹೊರಟಿದ್ದ ಟಿಟಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಬೆಂಗಳೂರಿನಿಂದ ಮಲೆನಾಡಿನ ಸುಂದರ ವಿಹಾರ ತಾಣವಾದ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಇದ್ದ ಟೆಂಪೋ ಟ್ರಾವಲರ್ ವಾಹನ ಹೊಸನಗರ ಸಮೀಪದ ಜಯನಗರದ ಚಾಮುಂಡಿಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.  ಟಿಟಿ ವಾಹನ ಮಗುಚಿಬಿದ್ದ ಪರಿಣಾಮ ಅದರಲ್ಲಿದ್ದ ಪ್ರವಾಸಿಗರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರವಾಸಿಗರ ಕೈಗೆ ತೀವ್ರ ಪೆಟ್ಟಾಗಿದ್ದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ತೀರ್ಥಹಳ್ಳಿ: ನವವಿವಾಹಿತೆಯನ್ನು ಬಲಿ ತೆಗೆದುಕೊಂಡ ನಾಯಿ ಚೈನ್…! ವಾಕಿಂಗ್ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ತೀರ್ಥಹಳ್ಳಿ: ಸಾಕುನಾಯಿಯನ್ನು ಕರೆದುಕೊಂಡು ವಾಯುವಿಹಾರಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನವ ವಿವಾಹಿತೆಯೊಬ್ಬಳು ಕೆರೆಗೆ  ಬಿದ್ದು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕು ಕೈಮರದಲ್ಲಿ ನಡೆದಿದೆ. ನಿಶ್ಮಿತಾ(26) ಮೃತ ವಿವಾಹಿತೆ.ತೀರ್ಥಹಳ್ಳಿಯ ಕೈಮರದ ನಾಗಪ್ಪ ಗೌಡ ಅವರ ಪುತ್ರ ಮಂಜುನಾಥ್ ಅವರ ಪತ್ನಿ ನಿಶ್ಮಿತಾ ಮೂಲತಃ ಹೊಸನಗರ ತಾಲೂಕು ಹುಲಿಕಲ್ ಗ್ರಾಮದವರು. ಕಳೆದ 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಶನಿವಾರ ಬೆಳಿಗ್ಗೆ ಸಾಕುನಾಯಿಯನ್ನು ಕರೆದುಕೊಂಡು ವಾಯು ವಿಹಾರಕ್ಕೆ ಹೋಗಿದ್ದಾಳೆ. ಈ ವೇಳೆ ಕರೆದಂಡೆ ಮೇಲೆ ಹೋಗುವಾಗ ನಾಯಿ ಚೈನ್ ಎಳೆದು ಓಡಿದೆ….

Read More

ಹಣಗೆರೆಕಟ್ಟೆ : ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರಿಂದಲೇ ವಾಹನ ತಪಾಸಣೆ

ತೀರ್ಥಹಳ್ಳಿ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ…

Read More

ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು

ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…

Read More

ಕಿಮ್ಮನೆ ಹಾಗೂ ಮಂಜುನಾಥ್ ಗೌಡ ನಡುವೆ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ತಾರಕಕ್ಕೆ!!!!!!

ಶಿವಮೊಗ್ಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇದ್ದರು ಈಗಲೇ ವಿವಿಧ ಪಕ್ಷಗಳಲ್ಲಿ  ಟಿಕೆಟ್ ಪೈಪೋಟಿ ಆರಂಭವಾಗಿದೆ. ಇತ್ತ ಕಾಂಗ್ರೆಸ್‌ನಲ್ಲಿಯು ಟಿಕೆಟ್‌ಗಾಗಿ ಜಟಾಪಟಿ ಜೋರಾಗಿಯೇ ಇದೆ. ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಇಬ್ಬರು ಪ್ರಭಾವಿ ಮುಖಂಡರ ನಡುವೆ ಜಿದ್ದಾ ಜಿದ್ದಿ ಏರ್ಪಟ್ಟಿದ್ದೆ.  ಒಂದು ಕಡೆ ಜೆಡಿಎಸ್  ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಆಕಾಂಕ್ಷಿಯಾಗಿರುವ ಮಂಜುನಾಥ್ ಗೌಡ  ಆದರೆ ಇನ್ನೊಂದು ಕಡೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್  ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಟಿಕೆಟ್‌ಗಾಗಿ ಈಗಲೇ ಇಬ್ಬರ…

Read More

ರಿಪ್ಪನ್ ಪೇಟೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಜೆ ಎನ್ ಷಣ್ಮುಖಪ್ಪ ಗೌಡ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಜಯದೇವ ರೈಸ್ ಮಿಲ್ ನ ಮಾಲೀಕರಾದ ಜೆ ಎನ್ ಷಣ್ಮುಖಪ್ಪ ಗೌಡರು(99) ಇಂದು ರಿಪ್ಪನ್ ಪೇಟೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಮಧ್ಯಾಹ್ನ ತಮ್ಮ ರಿಪ್ಪನ್ ಪೇಟೆಯ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಏಳು ಪುತ್ರರು,ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ಶುಕ್ರವಾರ ಬೆಳಿಗ್ಗೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸ್ವಾತಂತ್ರ್ಯ ಹೋರಾಟಗಾರ ಜೆ ಎನ್…

Read More

ರಿಪ್ಪನ್ ಪೇಟೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಪುನೀತ್ ರಾಜ್​ಕುಮಾರ್‌ಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ನೇರಲೆಮನೆ – ಕ್ವಾಡ್ರಿಗೆ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಮತ್ತು ರೋಟರಿ ಕ್ಲಬ್ ರಿಪ್ಪನ್ ಪೇಟೆ ಸಂಯುಕ್ತ ಆಶ್ರಯದಲ್ಲಿ ಪುನೀತ್ ರಾಜ್​ಕುಮಾರ್​ ಪುಣ್ಯ ಸ್ಮರಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಗುರುವಾರ ಬೆಳಗ್ಗೆ ಆರಂಭವಾದ ರಕ್ತದಾನ ಶಿಬಿರದಲ್ಲಿ ಹತ್ತಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು. ಪುನೀತ್‌ ಅಗಲಿಕೆ ಹಿನ್ನೆಲೆ ಮೌನಾಚರಣೆ ಬಳಿಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಸಾಮಾಜಿಕ ಕಾಳಜಿಯನ್ನ ಶ್ಲಾಘಿಸಲಾಯಿತು. ಮತ್ತು ಅಪ್ಪು ಶಿವಮೊಗ್ಗಕ್ಕೆ…

Read More

ಸಾಗರದ ಗಣಪತಿ ಕೆರೆಯಲ್ಲಿ ನೀರುನಾಯಿ ಪ್ರತ್ಯಕ್ಷ :

ಸಾಗರದ ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಮತ್ತೆ ನೀರುನಾಯಿ ಹಿಂಡು ಪ್ರತ್ಯಕ್ಷವಾಗಿದೆ. ಜೊಂಡು ತೆಗೆದು ಸ್ವಚ್ಛವಾಗಿರುವ ಕೆರೆಯಲ್ಲಿ ಕಳೆದ ವರ್ಷವೂ ಇವು ಕಂಡುಬಂದಿದ್ದವು. ಶರಾವತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾಧ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ. ಗುಂಪು ಗುಂಪಾಗಿ ವಾಸಿಸುವ ನೀರು…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ನಾಲ್ಕು ಜನ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತಿದ್ದಾಗ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ…

Read More
Exit mobile version